ರಾಜ್ಯದ ಕೇಂದ್ರ ಸಚಿವರಿಗೂ ಶುರುವಾಯ್ತು ಸಿಡಿ ಭಯ.!

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.‌ ಸದಾನಂದ ಗೌಡರಿಗೂ ನಕಲಿ ಸಿಡಿಯ ಭಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಅವರು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಮಾನಹಾನಿಕರ ನಕಲಿ ವಿಡಿಯೋ ತಯಾರಿಸಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಇದರಿಂದ ತಮ್ಮ ಚಾರಿತ್ರ್ಯವಧೆಯಾಗಲಿದೆ ಎಂದು ಮುಂಜಾಗೃತವಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನನ್ನ ವಿರುದ್ಧ ನಕಲಿ‌ ಸಿಡಿ ಸೃಷ್ಟಿಸಿ ಮೀಡಿಯಾದಲ್ಲಿ ಹರಿಬಿಡುವ ಸಾಧ್ಯತೆ ಇದೆ. ಹೀಗಾಗಿ ಅಂತಹ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳು ಹಾಗೂ ಪತ್ರಿಕೆಯ ವಿರುದ್ಧ […]