ಉಡುಪಿ: ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ‌ಮಾಡುವಂತೆ‌ ಅಪರ ಜಿಲ್ಲಾಧಿಕಾರಿ ಆದೇಶ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಮೂರನೇ ಅಲೆಯ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ‌ಮಾಡುವಂತೆ‌ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಗಾಳಿತೂರಿ ಸಾರ್ವಜನಿಕ‌ ಸ್ಥಳಗಳಲ್ಲಿ ಓಡಾಡುವುದು ಹಾಗೂ ಮಾಸ್ಕ್, ಸಾಮಾಜಿಕ‌ ಅಂತರ ಕಾಪಾಡದೇ ಇರುವುದು ಕಂಡುಬಂದಿದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೇ, ಕೊರೋನಾ ಸಂಬಂಧಿತ ಸರಕಾರದ ಮಾರ್ಗ ಸೂಚಿಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ […]

ಉಡುಪಿ: ವಾರದ ಹಿಂದೆ ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕ ಶವವಾಗಿ ಪತ್ತೆ

ಉಡುಪಿ: ಕಳೆದ ಒಂದು ವಾರದ ಹಿಂದೆ ನಾಪತ್ತೆಯಾಗಿದ್ದ ಉಡುಪಿ ದೊಡ್ಡಣಗುಡ್ಡೆ ಕರಂಬಳ್ಳಿಯ 5ನೇ ರಸ್ತೆಯ ನಿವಾಸಿ ಸತೀಶ್ ಕುಮಾರ್ (54) ಅವರ ಮೃತದೇಹ ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಹಾಯದಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಒಂದು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ಸಹಕರಿಸಿದರು. ಮಣಿಪಾಲ […]

ಅರ್ಬಿ ಫಾಲ್ಸ್‌ ನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಕಾರ್ಕಳ: ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿ ಫಾಲ್ಸ್‌ ವೀಕ್ಷಣೆಗೆ ಸ್ನೇಹಿತರೊಂದಿಗೆ ಬಂದಿದ್ದ ಕಾರ್ಕಳ ತಾಲೂಕಿನ ಕಾಲೇಜೊಂದರ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮಂಗಳೂರಿನ ವರ್ಷಿತಾ (19) ಮೃತ ವಿದ್ಯಾರ್ಥಿನಿ. ಈಕೆ ಇಬ್ಬರು ವಿದ್ಯಾರ್ಥಿಗಳೊಂದಿಗೆ ಅರ್ಬಿ ಫಾಲ್ಸ್‌ಗೆ ತೆರಳಿದ್ದಳು‌. ಈ ವೇಳೆ ವರ್ಷಿತಾ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ಅಗ್ನಿ ಶಾಮಕ ದಳ ತೆರಳಿ ಮೃತದೇಹವನ್ನು ಮೇಲಕೆತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.