ಕೊಡವೂರು: ಆ. 15ರಂದು ಉಡುಪಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ

ಕೊಡವೂರು: ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 15ರಂದು ಬೆಳಿಗ್ಗೆ 11 ಗಂಟೆಗೆ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಉಡುಪಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮಕ್ಕಳು, ವೀರ ಪುರುಷರ ಜೀವನ ಚರಿತ್ರೆಯನ್ನು ಓದಿ ಅಧ್ಯಯನ ಮಾಡಬೇಕು ಹಾಗೂ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂಬ ಉದ್ದೇಶದಿಂದ ನಗರಸಭಾ ಸದಸ್ಯ ಕೆ. ವಿಜಯ ಕೊಡವೂರು ಹಾಗೂ ಪ್ರಭಾತ್ ಕೊಡವೂರು ಅವರ ನೇತೃತ್ವದಲ್ಲಿ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಕಿರಿಯರು ವಿಭಾಗ: 8, 9 […]

ದಿನಕ್ಕೊಂದು ಕನ್ನಡ ಪತ್ರಿಕೆ ತಿಂಗಳಿಗೊಂದು ಕನ್ನಡ ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ: ಸುನಿಲ್ ಕುಮಾರ್ ಕರೆ

ಬೆಂಗಳೂರು: ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ ಹವ್ಯಾಸ ಬೆಳೆಸುವುದರ ಜತೆಗೆ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ರೂಢಿಸಿಕೊಂಡಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇಲಾಖೆ ಸಚಿವರಾಗಿ ಕಾರ್ಯಾರಂಭ ಮಾಡಿದರು. […]

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಭೇಟಿ

ಉಡುಪಿ: ಬಿಜೆಪಿ ನೇತೃತ್ವದ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಚಿವರನ್ನು ಸ್ವಾಗತಿಸಿ ಶಾಲು ಹೊದೆಸಿ ಪುಸ್ತಕ ನೀಡಿ ಗೌರವಿಸಿದರು. ಸಚಿವರು ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ […]

ಉಡುಪಿ: ಮುಳ್ಳು ಹಂದಿ ಸಂಚಾರ; ಕಾರ್ಯಾಚರಣೆ

ಉಡುಪಿ: ಇಲ್ಲಿನ ಚಂದುಮೈದಾನದ ಬಳಿಯ ಜನವಸತಿ ಪರಿಸರದ ರಸ್ತೆಗಳಲ್ಲಿ ರಾತ್ರಿಯ ಸಮಯ ಮುಳ್ಳು ಹಂದಿಗಳು ಸಂಚರಿಸುತ್ತಿದ್ದು, ಇದರಿಂದ ರಾತ್ರಿಯ ಸಮಯದಲ್ಲಿ ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸಲು ಆತಂಕ ಪಡುವಂತಾಗಿದೆ. ಈ ಬಗ್ಗೆ ಪತ್ರಕರ್ತ ಸಂತೋಷ್ ಸರಳಬೆಟ್ಟು ಅವರು, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಾಯವಾಣಿಗೆ ಮಾಹಿತಿ ನೀಡಿದ್ದರು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮುಳ್ಳು ಹಂದಿಯ ಸಂಚರಿಸುವುದು ಕಂಡುಬಂದಿದೆ. ಸಂಚಾರ ಸ್ಥಳ ಗುರುತಿಸಿ, ಅರಣ್ಯ ಇಲಾಖೆ ಮತ್ತು ನಾಗರಿಕ ಸಮಿತಿಯ ಕಾರ್ಯಕರ್ತರು ಮುಳ್ಳು ಹಂದಿಯ ವಶಕ್ಕೆ ಪಡೆಯಲು, […]

ಉಡುಪಿ: ಆ. 16ಕ್ಕೆ ‘ಆಶೀರ್ವಾದ ಯಾತ್ರೆ ಸಮಾವೇಶ’, ‘ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ’

ಉಡುಪಿ: ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಆಶೀರ್ವಾದ ಯಾತ್ರೆ ಸಮಾವೇಶ’ ಹಾಗೂ ನೂತನ ‘ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭ’ವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 16ರ ಸೋಮವಾರ ಬೆಳಿಗ್ಗೆ 11.45ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ […]