IND vs ENG: ಕೋವಿಡ್ ಭೀತಿ; ಅಂತಿಮ ಟೆಸ್ಟ್ ರದ್ದು
ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ಇಂದಿನಿಂದ (ಸೆ.10) ಆರಂಭವಾಗಬೇಕಾಗಿದ್ದ ಅಂತಿಮ ಟೆಸ್ಟ್ ಪಂದ್ಯವನ್ನು ಕೋವಿಡ್ ಭೀತಿಯಿಂದಾಗಿ ರದ್ದುಗೊಳಿಸಲಾಗಿದೆ. ಈ ಬಗ್ಗೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಪ್ರಕಟಣೆಯಲ್ಲಿ ತಿಳಿಸಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯವು ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಶುಕ್ರವಾರದಂದು ಆರಂಭವಾಗಬೇಕಿತ್ತು. ಗುರುವಾರ ನಡೆಸಿದ ಆರ್ಟಿ-ಪಿಸಿಆರ್ ಪರೀಕ್ಷೆಯಲ್ಲಿ ಭಾರತ ತಂಡದ ಆಟಗಾರರ ವರದಿಯು ನೆಗೆಟಿವ್ ಬಂದಿತ್ತು. ಆದರೂ ಭಾರತ ಕ್ಯಾಂಪ್ನಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ […]
14 ಕಿ.ಮೀ ದೂರ ಕಾಲ್ನಡಿಗೆಯಲ್ಲಿ ಸಾಗಿ ವೈಷ್ಣೋದೇವಿಯ ದರ್ಶನ ಪಡೆದ ರಾಹುಲ್ ಗಾಂಧಿ
ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಲ್ನಡಿಗೆಯಲ್ಲಿ ಸಾಗಿ ಜಮ್ಮುವಿನ ರಿಯಾಸಿ ಜಿಲ್ಲೆಯ ತ್ರಿಕುಟಾ ಬೆಟ್ಟದಲ್ಲಿರುವ ವೈಷ್ಣೋದೇವಿಯ ದರ್ಶನ ಪಡೆದಿದ್ದಾರೆ. ಜಮ್ಮುವಿನ ಕಾತ್ರಾದಿಂದ 14 ಕಿ.ಮೀ ದೂರದಲ್ಲಿರುವ ವೈಷ್ಣೋದೇವಿ ಗುಹೆಗೆ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್ ಗಾಂಧಿ ಶುಕ್ರವಾರ ದೇವಿಯ ದರ್ಶನ ಪಡೆದರು. ಯಾತ್ರಾರ್ಥಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಭದ್ರತಾ ಸಿಬ್ಬಂದಿ ರಾಹುಲ್ ಅವರಿಗೆ ಸಾಥ್ ನೀಡಿದರು.
ಈದು ಶ್ರೀ ಮೂಜಿಲ್ನಾಯ ದೈವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಣಪ
ಈದು: ಶ್ರೀಕ್ಷೇತ್ರ ಈದು ಶ್ರೀ ಮೂಜಿಲ್ನಾಯ ದೈವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಈದು ಇದರ 18ನೇ ವರ್ಷದ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪತಿ.
ಉಡುಪಿ: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಡಿಸಿ ಕೂರ್ಮಾ ರಾವ್ ಆದೇಶ
ಉಡುಪಿ: ಕೋವಿಡ್ ಪಾಸಿಟಿವಿಟಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ತಜ್ಞರ ಅಭಿಪ್ರಾಯದಂತೆ ಜಿಲ್ಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಸೆ. 27ರ ವರೆಗೆ ಮುಂದುವರಿಸಿ ಆದೇಶ ನೀಡಿದ್ದಾರೆ.