ಉಡುಪಿ: ಅ.24ಕ್ಕೆ ಪಂಚಮಿ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆ

ಉಡುಪಿ: ಉಡುಪಿ ಪಂಚಮಿ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆಯ ಇದೇ ಅ. 24ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಸರಿಯಾಗಿ ಕುಂಜಿಬೆಟ್ಟು ಸ್ವರ್ಣ ವೆಲ್ಲರಿಯ ಹತ್ತಿರದ ಶ್ರೀಕೃಷ್ಣ ಪ್ರಜ್ಞ ಪ್ರತಿಷ್ಠಾನದಲ್ಲಿ ಸಹಕಾರಿಯ ಅಧ್ಯಕ್ಷ ಸತ್ಯಪ್ರಸಾದ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಕಾಲದಲ್ಲಿ ಸೂಚನಾ ಪತ್ರ ತಲುಪದ ಸದಸ್ಯರೆಲ್ಲರೂ ಈ ನೋಟಿಸನ್ನು ಪರಿಗಣಿಸಿ ಸಭೆಯಲ್ಲಿ ಭಾಗವಹಿಸಬೇಕಾಗಿ ಕೋರಲಾಗಿದೆ. ಪಂಚಮಿ ಸೌಹಾರ್ದ ಸಹಕಾರಿ, ಮೊದಲನೆ ಮಹಡಿ, ಆರ್ ಎಸ್ ಬಿ ವಿಂಡರ್ಸ್, ನಾಗಬನದ ಎದುರು, ಮಠದಬೆಟ್ಟು ರಸ್ತೆ, ಸಿಟಿ ಬಸ್ ಸ್ಟ್ಯಾಂಡ್, […]

ಕೇಂದ್ರ ಸರಕಾರದಿಂದ ಅಂಬಲಪಾಡಿ ಮತ್ತು ಸಂತೆಕಟ್ಟೆ ವಾಹನ ಮೇಲ್ಸೇತುವೆ ರಚನೆಗೆ 50 ಕೋಟಿ ಮಂಜೂರು: ಯಶ್ ಪಾಲ್ ಸುವರ್ಣ ಸ್ವಾಗತ

ಉಡುಪಿ: ಉಡುಪಿ ನಗರ ಭಾಗದ ಬಹುದಿನಗಳ ಬೇಡಿಕೆಯಾಗಿದ್ದ ರಾಷ್ಟೀಯ ಹೆದ್ದಾರಿ 66 ರ ಅಂಬಲಪಾಡಿ ಮತ್ತು ಸಂತೆಕಟ್ಟೆಯ ವಾಹನ ಮೇಲ್ಸೇತುವೆ ನಿರ್ಮಾಣಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿದ ಕೇಂದ್ರ ಸರಕಾರದ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಸ್ವಾಗತಿಸಿದ್ದಾರೆ. ಉಡುಪಿ ನಗರದ ಪ್ರಮುಖ ಕೂಡು ರಸ್ತೆಯಲ್ಲಿನ  ವಾಹನ ದಟ್ಟಣೆಯಿಂದ ಜನಸಾಮಾನ್ಯರು ಎದುರಿಸುತ್ತಿದ್ದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಂಬಲಪಾಡಿ  ವಾಹನ ಮೇಲ್ಸೇತುವೆ ನಿರ್ಮಾಣಕ್ಕೆ 24.56 […]

 ನೀವು ಕಾಫಿ ಪ್ರಿಯರೇ? ಹಾಗಾದ್ರೆ ಕಾಫಿ ಹೀರುವ ಮೊದಲು ಈ ವಿಷ್ಯಗಳು ನಿಮಗೆ ಗೊತ್ತಿರಲಿ

ಕಾಫಿ ಹೀರುತ್ತಾ ಮಧುರ ಕ್ಷಣಗಳನ್ನು ಕಳೆಯುವ ಅಭ್ಯಾಸ ತುಂಬಾ ಮಂದಿಗಿದೆ. ಹಾಗೆಯೇ ಕಾಫಿ ಕುಡಿಯುವ ಚಟ ಕೂಡ ಅಧಿಕ ಮಂದಿಗಿದೆ.ಒಂದು ಕಾಫಿ ಕುಡಿಯೋದು ಎಷ್ಟು ಆರೋಗ್ಯಕರ ಎಂಬುದನ್ನು ಹೇಳ್ತೇವೆ. ಕಾಫಿ ಕುರಿತ ಈ ಸಂಗತಿಗಳು ನಿಮಗೆ ಗೊತ್ತಿರಲಿ.  ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವಿಸುವುದು ಉತ್ತಮವಲ್ಲ. ಮಲಬದ್ಧತೆ, ಹುಣ್ಣು, ಮತ್ತು ಹೊಟ್ಟೆಯ ಸಮಸ್ಯೆಗಳಿಗೆ ಇದು ಕಾರಣವಾಗಬಹುದು. ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವಿಸುವುದರಿಂದ ಆಮ್ಲದ ಪ್ರಮಾಣ ಹೆಚ್ಚಾದಾಗ, ಎದೆಯಲ್ಲಿ ಉರಿ ಉಂಟು ಮಾಡಬಹುದು. ಸಂಜೆ ಕಾಫಿ ಕುಡಿಯುವ ಅಭ್ಯಾಸವಿರುವವರು ಲೇಟ್ […]

ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ನಿಧನ

ಮಂಗಳೂರು: ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ಅವರು (64) ಶುಕ್ರವಾರ ನಿಧನ ಹೊಂದಿದರು. ಆರ್ ಎಸ್ಎಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದ್ದ ಸುಧೀರ್ ಘಾಟೆ 1995ರಲ್ಲಿ ರಾಜ್ಯ ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಕಟ್ಟಿದ್ದರು. 1992ರಲ್ಲಿ ಜಾಹೀರಾತು ಸಂಸ್ಥೆ,’ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್’ ಕಟ್ಟಿ ಬೆಳೆಸಿದ್ದ ಸುಧೀರ್ ಘಾಟೆ ಮಂಗಳೂರಿನ ಪ್ರಸಿದ್ಧ ಉದ್ಯಮಿಯಾಗಿದ್ದರು. ಬಿಎಂಎಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿವಂಗತ ಪ್ರಭಾಕರ್ ಘಾಟೆ- ಶಾರದಾ ಘಾಟೆ ದಂಪತಿ […]

ಕುಂದಾಪುರ: ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಪ್ರಿಯಕರನೊಂದಿಗೆ ಸೇರಿ ಪತಿಯ ಕಥೆಯನ್ನೇ ಮುಗಿಸಿದ್ಲಾ ಪತ್ನಿ.?

ಉಡುಪಿ: ಅಂಪಾರಿನಲ್ಲಿ ಅ.18 ರಂದು ನಡೆದ ನಾಗರಾಜ್ ಆತ್ಮಹತ್ಯೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ನಾಗರಾಜ್ ಪತ್ನಿ ಮಮತಾ (34), ಆಕೆಯ ಪರಿಚಿತ ಕುಮಾರ್ ಹಾಗೂ ದಿನಕರ ಎಂಬವರನ್ನು ಬಂಧಿಸಲಾಗಿದೆ. ಇಬ್ಬರು ಅಪ್ರಾಪ್ತರನ್ನು ರೀಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ಮೃತ ನಾಗರಾಜ್ ಸಹೋದರಿ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು‌ನೀಡಿದ್ದರು. ಅದರಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ನಾಗರಾಜ್ ಜೀವನದಲ್ಲಿ ಜಿಗುಪ್ಸೆಗೊಂಡು ಬಿಗಿದು ಆತ್ಮಹತ್ಯೆ […]