ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು; ಪಾಕ್ ಗೆ10 ವಿಕೆಟ್ ಗಳ ಗೆಲುವು

ದುಬೈ: ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈಯಲ್ಲಿ ನಡೆದ ಲೀಗ್ ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 10 ವಿಕೆಟ್ ಅಂತರದ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಐಸಿಸಿ ವಿಶ್ವಕಪ್‌ ಇತಿಹಾಸದಲ್ಲಿ (ಏಕದಿನ ಹಾಗೂ ಟ್ವೆಂಟಿ-20 ಸೇರಿದಂತೆ) ಇದೇ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಸೋಲಿನ ಮುಖಭಂಗಕ್ಕೊಳಗಾಗಿದೆ. ಈ ಹಿಂದಿನ 12 ಪಂದ್ಯಗಳಲ್ಲಿ ಭಾರತ ಗೆಲುವು ದಾಖಲಿಸಿತ್ತು. ಆದರೆ ಇಂದು ನಡೆದ ಪಂದ್ಯದಲ್ಲಿ ಪಾಕ್ ವಿರುದ್ಧ ಸೋಲು ಕಾಣುವ ಮೂಲಕ ಅಜೇಯ ಓಟಕ್ಕೆ ಕಡಿವಾಣ […]

ಪೇಜಾವರ ವಿಶ್ವೇಶತೀರ್ಥ ಶ್ರೀಗಳಿಗೆ ಪದ್ಮವಿಭೂಷಣ ಪ್ರಶಸ್ತಿ: ಸಚಿವ ಕಾರಜೋಳ ಟ್ವೀಟ್

ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಭಾನುವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಅವರು, ಪರಮಪೂಜ್ಯ ಉಡುಪಿ ಅಧೋಕ್ಷಜ ಮಠದ ಪೀಠಾಧಿಪತಿಗಳಾಗಿ ನಮ್ಮೆಲ್ಲರಿಗೂ ಹಲವಾರು ವರ್ಷಗಳ ಕಾಲ ನಿರಂತರ ಮಾರ್ಗದರ್ಶನ ಮಾಡಿದ್ದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ.

ಟಿ20 ವಿಶ್ವಕಪ್‌: ಇಂದು ಇಂಡೋ-ಪಾಕ್ ಕದನ; ವಿರಾಟ್ ಕೊಹ್ಲಿ ಬಳಗಕ್ಕೆ ಅಜೇಯ ಇತಿಹಾಸದ ಪರಂಪರೆ ಉಳಿಸಿಕೊಳ್ಳುವ ಸವಾಲು..!

ದುಬೈ: ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಇಂದು ರಾತ್ರಿ ಭಾರತ- ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಕ್ರಿಕೆಟ್‌ ಜಗತ್ತಿನ ಈ ಬದ್ಧ ಎದುರಾಗಳಿಗಳ ಹಣಾಹಣಿಯನ್ನು ಕಣ್ಮನ ತುಂಬಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯ ಅಜೇಯ ಇತಿಹಾಸದ ಪರಂಪರೆಯನ್ನು ಉಳಿಸಿಕೊಳ್ಳುವ ಸವಾಲು ವಿರಾಟ್ ಕೊಹ್ಲಿ ಬಳಗದಾಗಿದ್ದರೆ, ಭಾರತದ ಅಜೇಯ ಓಟಕ್ಕೆ ತಡೆಯೊಡ್ಡಿ ಹೊಸ ಇತಿಹಾಸ ನಿರ್ಮಿಸುವ ಕನಸು ಬಾಬರ್ ಆಜಂ ಬಳಗದ್ದು. ಉಭಯ ದೇಶಗಳ ನಡುವಣ ಹದಗೆಟ್ಟಿರುವ  ರಾಜಕೀಯ ಸಂಬಂಧಗಳಿಂದಾಗಿ ಕ್ರೀಡಾ ತಂಡಗಳು ಮುಖಾಮುಖಿಯಾಗುವುದು ಅಪರೂಪವಾಗಿದೆ.  ಎರಡೂ ತಂಡಗಳ […]

ಕೊಡವೂರು: ಸೆಲ್ಯೂಟ್ ತಿರಂಗಾ ದೇಶಭಕ್ತಿ ಸಂಘಟನೆಗೆ ಚಾಲನೆ

ಉಡುಪಿ: ಜಿಲ್ಲೆಯಲ್ಲಿ ಸೆಲ್ಯೂಟ್ ತಿರಂಗಾ ದೇಶ ಭಕ್ತಿಯಾಗಿರುವಂತಹ ಸಂಘಟನೆ. ಈ ಸಂಘಟನೆಯ ಮುಖಾಂತರ ಈ ಭಾಗದ ಅನೇಕ ಜನರನ್ನು ದೇಶದ ಸೇವೆಗೆ ( ಭಾರತೀಯ ಸೇನೆಗೆ) ಸೇರಿಸಿವಂತಹ ಪ್ರಯತ್ನ ಮಾಡಬೇಕು ಎನ್ನುವ ದೃಷ್ಟಿಯಿಂದ ದೀನ ದಲಿತರ, ಅಂಗವಿಕಲರ ಸರಕಾರದಿಂದ ಸಿಗುವ ಸವಲತ್ತು ಮತ್ತು ದಾನಿಗಳ ನೆರವಿನಿಂದ ಕೊಡಿಸಬೇಕು ಉದ್ದೇಶದೊಂದಿಗೆ ಸೆಲ್ಯೂಟ್ ತಿರಂಗಾ ದೇಶ ಭಕ್ತಿ ಸಂಘಟನೆಗೆ ಆರಂಭಗೊಂಡಿತು. ಈ ಸಂಧರ್ಭದಲ್ಲಿ ನಿವೃತ್ತ ಸೇನಾನಿ ಗಿಲ್ಬರ್ಟ್ ಇವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಕೊಡವೂರು ಶಾಲೆಯ ಎಲ್ಲಾ […]

ಮೂರು ತಿಂಗಳೊಳಗೆ ಕ್ರಷರ್ ಹಾಗೂ ಕ್ವಾರಿಗಳಿಗಿರುವ ಕಾನೂನು ತೊಡಕುಗಳನ್ನು ಬಗೆಹರಿಸಲಾಗುವುದು: ರವೀಂದ್ರ ಶೆಟ್ಟಿ ಬಜಗೋಳಿ ಭರವಸೆ

ಕಾರ್ಕಳ: ಯಾವುದೇ ಕ್ರಷರ್ ಗಳು ಅಕ್ರಮವಾಗಿಲ್ಲ, ಸರಕಾರದ ಕಾನೂನು ನಿಯಾಮವಳಿಗಳಲ್ಲಿ ಲೋಪವಿದೆ. ಕ್ರಷರ್ ಗಣಿಗಾರಿಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಉದ್ಯಮ ಸ್ನೇಹಿ ಯಾಗಿಸುವ ಕಾರ್ಯಕ್ಕೆ ನಾವು ಬದ್ಧ ಎಂದು ಕರ್ನಾಟಕ ರಾಜ್ಯ ಫೆಡರೇಶನ್‌ ಆಫ್‌ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು. ಕಾರ್ಕಳ ಕಟೀಲ್ ಇಂಟರ್ ನ್ಯಾಶನಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಚ್ಚಾವಸ್ತುಗಳಾದ ಜಲ್ಲಿ ಮರಳು ಕಲ್ಲುಗಳನ್ನು ವಿವಿಧ ಕೈಗಾರಿಕೆ, ಕಟ್ಟಡಗಳಿಗೆ ಪೂರೈಸುವ, ಕ್ವಾರಿ ಉದ್ಯಮವು […]