ಚಿಪ್ಸಿ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ

ಉಡುಪಿ: ಚಿಪ್ಸಿ ಇನ್ಫರ್ಮೇಷನ್ ಟೆಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನೂತನ ಕಛೇರಿ ಉಡುಪಿಯ ಕಲ್ಸಂಕದ ಭಕ್ತ ಟವರ್ಸ್ ಇದರ 1ನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ಜಪಾನಿನ ಅಸ್ತ್ ಹಾಗೂ ಅವರ ಕಛೇರಿಯ ಉದ್ಯೋಗಿ ಅಭಿ ಇವರ ಉಪಸ್ಥಿತಿಯಲ್ಲಿ ಕಚೇರಿ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಕಂಪನಿಯ ಸ್ಥಾಪಕ ಹಾಗೂ ಎಂ. ಡಿ., ಸಂದೀಪ್ ಭಕ್ತ, ಸಿಇಒ ಶಾಂಭವಿ ಭಂಡಾರ್ಕರ್ ಮತ್ತು ಚಿಪ್ಸಿ ಇನ್ಫರ್ಮೇಷನ್ ಟೆಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಇದರ ಉದ್ಯೋಗಿಗಳು ಉಪಸ್ಥಿತರಿದ್ದರು.

ಉಡುಪಿ: ಕೊರಂಗ್ರಪಾಡಿ ಗ್ರಾಮದ ನಿವಾಸಿ ನಾಪತ್ತೆ

ಉಡುಪಿ: ಉಡುಪಿ ತಾಲೂಕಿನ ಕೊರಂಗ್ರಪಾಡಿ ಗ್ರಾಮದ ನಿವಾಸಿ ಪ್ರಸನ್ನ (43) ಎಂಬುವವರು ಅಕ್ಟೋಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ 3ನೇ ವಾರ್ಷಿಕೋತ್ಸವ

ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಮಗ್ರ ಕ್ಯಾನ್ಸರ್ ಕೇರ್ ಸೆಂಟರ್ (MCCCC) ತನ್ನ 3 ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಯೂನಿಯನ್ ಫಾರ್ ಇಂಟರ್ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (UICC) ಅಧ್ಯಕ್ಷ ಡಾ. ಅನಿಲ್ ಡಿ ಕ್ರೂಜ್ ಮಾತನಾಡಿ, ಕ್ಯಾನ್ಸರ್ ತಡೆಗಟ್ಟುವ ಪ್ರಾಮುಖ್ಯತೆ, ಕ್ಯಾನ್ಸರ್ ಚಿಕಿತ್ಸೆಯಲ್ಲಿ ಚಿಕಿತ್ಸೆಯ ಸಮಾನತೆ  , ವೆಚ್ಚ-ಪರಿಣಾಮಕಾರಿ ನವೀನ ಕ್ಯಾನ್ಸರ್ ಸಂಶೋಧನೆ ಮತ್ತು ಗುಣಮಟ್ಟದ ಜೀವನ ಕ್ರಮಗಳ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಹೆ ಮಣಿಪಾಲದ ಸಹ ಕುಲಪತಿಗಳಾದ  ಡಾ. ಎಚ್.ಎಸ್.ಬಲ್ಲಾಲ್ ಅವರು, […]

ಬೆಂಗಳೂರು ಸೆಂಟ್ರಲ್ ಸಿಲ್ಕ್ ಬೋರ್ಡ್‌ನಲ್ಲಿ ಹುದ್ದೆ: ಅರ್ಜಿ ಆಹ್ವಾನ

ಸೆಂಟ್ರಲ್ ಸಿಲ್ಕ್ ಬೋರ್ಡ್‌ ಬೆಂಗಳೂರು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. *ಹುದ್ದೆಗಳು: ಟ್ರೈನರ್‌, ಟ್ರೈನಿಂಗ್‌ ಅಸಿಸ್ಟೆಂಟ್‌ *ಹುದ್ದೆಗಳ ಸಂಖ್ಯೆ: 60 *ಸ್ಥಳ: ಬೆಂಗಳೂರು *ವಿದ್ಯಾರ್ಹತೆ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೊಮಾ, ಎಂಜಿನಿಯರಿಂಗ್ ಅಥವಾ ಐಟಿಐ ಮುಗಿಸಿರಬೇಕು. *ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. *ಅರ್ಜಿ ಶುಲ್ಕ: ಇಲ್ಲ *ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ […]

ಹಿರಿಯಡಕ: ಹಾಲಿನ ವಾಹನ-ಸ್ಕೂಟರ್ ಮುಖಾಮುಖಿ ಡಿಕ್ಕಿ; ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಹಿರಿಯಡಕ: ಹಾಲಿನ ವಾಹನ ಹಾಗೂ ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ ವಿಘ್ನೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ವಿಘ್ನೇಶ್ ಮಣಿಪಾಲದ ಪ್ರೆಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದನು. ಈತ ಗುಡ್ಡೆಯಂಗಡಿಗೆ ಸಮೀಪಿಸುತ್ತಿದ್ದಂತೆ ಎದುರಿನಿಂದ ಬರುತ್ತಿದ್ದ ಹಾಲಿನ ವಾಹನಕ್ಕೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಬೆಳಿಗ್ಗೆ 6.40ರ […]