ಕುಂದಾಪುರ: ಸ್ಟುಡಿಯೋ ಕಳ್ಳತನ ಪ್ರಕರಣ; ಕಳ್ಳನ ಮುಖಚಹರೆ ಸಿಸಿಟಿವಿಯಲ್ಲಿ ಸೆರೆ

ಕುಂದಾಪುರ: ಇಲ್ಲಿನ ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟುಡಿಯೋದ ಸಿಸಿಟಿವಿಯಲ್ಲಿ ಕಳ್ಳನ ಚಲನವಲನ ಸೆರೆಯಾಗಿದೆ. ರಾತ್ರಿ ಸುಮಾರು 12.30ರ ಆಸುಪಾಸು ಸ್ಟುಡಿಯೋದ ಹಿಂಬದಿ ಮೇಲ್ಛಾವಣಿಯ ಹಂಚುಗಳನ್ನು ಸರಿಸಿ ಒಳ ಪ್ರವೇಶಿಸಿದ ಕಳ್ಳ ಡ್ರಾವರ್ ನಲ್ಲಿದ್ದ ಸುಮಾರು 2ಸಾವಿರದಷ್ಟು ನಗದು ಹಾಗೂ ಒಂದೆರಡು ಪೆನ್ ಡ್ರೈವ್ ಗಳನ್ನು ದೋಚಿದ್ದಾನೆ. ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡೊಂದನ್ನು ಮಾಡಿನ ಮೇಲೆ ಬಿಟ್ಟು ಹೋಗಿದ್ದಾನೆ. ಸ್ಟುಡಿಯೋದಲ್ಲಿ ಆಳವಡಿಸಿರುವ ಸಿಸಿ ಫೂಟೇಜ್ ನಲ್ಲಿ […]

ಬಿಜೆಪಿ ಮಹಿಳಾ ಮೋರ್ಚಾದಿಂದ ದಲಿತ ಕಾಲೊನಿಯಲ್ಲಿ ದೀಪಾವಳಿ ಸಂಭ್ರಮಾಚರಣೆ

ಉಡುಪಿ: ಅಂಧಕಾರದಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಸುಜ್ಞಾನದೆಡೆಗೆ ಕೊಂಡೊಯ್ಯುವ ಸಂಕೇತ ದೀಪಾವಳಿ ಹಬ್ಬದ ಸಂಭ್ರಮಾಚರಣೆ ಹಾಗೂ ಹಿಂದೂ ಧರ್ಮದ ಜಾತಿ, ಜಾತಿಗಳ ನಡುವೆ ಸಾಮರಸ್ಯ ಮೂಡಿಸುವ ಪ್ರಯತ್ನವಾಗಿ “ತುಡರ್” ಕಾರ್ಯಕ್ರಮವು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ನೇತೃತ್ವದಲ್ಲಿ ಅಂಬಲಪಾಡಿ ಕಪ್ಪೆಟ್ಟು ಪರಿಸರದ ಗಾಂಧಿನಗರದ ಮಾಲತಿ ಅವರ ನಿವಾಸದಲ್ಲಿ ನಡೆಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಯಾ ಕಾಮತ್ ಮಣಿಪಾಲ ತಂಡದ ಜೊತೆ ಸೇರಿ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಸಲಾಯಿತು. ಕೊರಗ ಕಾಲನಿಯ […]