ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ; ಮಾರ್ಗಸೂಚಿಯ ವಿವರ ಹೀಗಿದೆ..!

ಬೆಂಗಳೂರು: ಕೊರೊನಾ-ಒಮಿಕ್ರಾನ್ ನಿಯಂತ್ರಿಸುವ ಸಲುವಾಗಿ ರಾಜ್ಯಾದ್ಯಂತ ಎರಡು ವಾರ ವಿಕೇಂಡ್ ಕರ್ಫ್ಯೂ ಹಾಗೂ ನೈಟ್ ಕರ್ಪ್ಯೂ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ತಜ್ಞರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಜ.7ರ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಿಕೇಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ. ಹಾಗೆ ನೈಟ್ ಕರ್ಪ್ಯೂ ಪ್ರತಿ ದಿನ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಈ ನಿಯಮ […]

ರಾಜ್ಯಾದ್ಯಂತ ಎರಡು ವಾರ ವಿಕೇಂಡ್ ಕರ್ಪ್ಯೂ; ಬೆಂಗಳೂರಿನಲ್ಲಿ ಶಾಲೆ ಬಂದ್; ಬಾರ್, ಥಿಯೇಟರ್, ಪಬ್ 50:50 ರೂಲ್ಸ್..!!

ಬೆಂಗಳೂರು: ಕೋವಿಡ್, ಓಮಿಕ್ರಾನ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಜ.7ರಿಂದ ಎರಡು ವಾರ ರಾಜ್ಯಾದ್ಯಾಂತ ವಾರಾಂತ್ಯ ಕರ್ಪ್ಯೂ ( Weekend Curfew ) ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ( Night Curfew ) ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಇಂದಿನ ಸಿಎಂ ಸಭೆಯ ಬಳಿಕ ಮಾತನಾಡಿದಂತ ಕಂದಾಯ ಸಚಿವ ಆರ್ ಅಶೋಕ್ ಅವರು, ಕೋವಿಡ್ ಹೊಸ ಮಾರ್ಗಸೂಚಿಗಳು ನಾಳೆ (ಜ.5) ರಿಂದ […]

ರಾಜ್ಯದಲ್ಲಿ ಎರಡು ವಾರ ವಿಕೇಂಡ್ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ: ಸಭೆ, ಸಮಾರಂಭ ಮಿತಿ‌ ನಿಗದಿ; ನೈಟ್ ಕರ್ಪ್ಯೂ ಮುಂದುವರಿಕೆ

ಬೆಂಗಳೂರು; ಕೋವಿಡ್, ಒಮಿಕ್ರಾನ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎರಡು ವಾರ ಕಾಲ ವಿಕೇಂಡ್ ಕರ್ಪ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ತಜ್ಞರ ಸಭೆಯ ಬಳಿಕ, ಸಚಿವ ಆರ್. ಅಶೋಕ್ ಮಾಹಿತಿ ನೀಡಿದರು. ಸದ್ಯ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಅನ್ನು ಮುಂದುವರಿಸಲಾಗಿದೆ. ಬೆಂಗಳೂರಿನಲ್ಲಿ 10 ಮತ್ತು 12 ತರಗತಿ ಹೊರತುಪಡಿಸಿ ಉಳಿದ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ಥಿಯೇಟರ್, ಪಬ್, ಬಾರ್ 50:50 ರೂಲ್ಸ್ ಮಾಡಿ ಸರ್ಕಾರ ಆದೇಶ […]

ಮಂಗಳೂರು: ಜ.9ರಂದು ಯಕ್ಷಾಭಿನಯ ಬಳಗದಿಂದ ಯಕ್ಷಗಾನ ಪ್ರದರ್ಶನ

ಮಂಗಳೂರು: ಮಂಗಳೂರಿನಲ್ಲಿರುವ ಬಡಗು ತಿಟ್ಟು ಯಕ್ಷಗಾನ ಆಸಕ್ತರು ಹುಟ್ಟುಹಾಕಿದ ‘ಯಕ್ಷಾಭಿನಯ ಬಳಗ’ದ ಎರಡನೆಯ ವಾರ್ಷಿಕೋತ್ಸವ ಮತ್ತು ಯಕ್ಷಗಾನ ಪ್ರದರ್ಶನ ಇದೇ ಜನವರಿ 9ರ ಭಾನುವಾರ  ಹಂಪನಕಟ್ಟೆಯಲ್ಲಿರುವ  ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನ 2.30 ಕ್ಕೆ  ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಮೊದಲಿಗೆ ಗುರು ಐರೋಡಿ ಮಂಜುನಾಥ ಕುಲಾಲ್ ನಿರ್ದೇಶನದಲ್ಲಿ ಸಂಸ್ಥೆಯ ಶಿಕ್ಷಣಾರ್ಥಿ ಸದಸ್ಯರಿಂದ ವೀರ ಅಭಿಮನ್ಯು ಮತ್ತು ಜಾಂಬವತಿ ಕಲ್ಯಾಣ ಎಂಬ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಯಕ್ಷಗಾನ ಕಾರ್ಯಕ್ರಮದ ನಡುವಿನಲ್ಲಿ ಯಕ್ಷಗುರು ಐರೋಡಿ ಮಂಜುನಾಥ ಕುಲಾಲ್ […]

ಹತ್ತನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣು

ಉಡುಪಿ ಎಕ್ಸ್ ಪ್ರೆಸ್ ಸುದ್ದಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ತಾಲೂಕಿನ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್‌ ಡಿʼಸೋಜ ರವರ ಪುತ್ರ ಸಂದೀಪ್‌ ಅನಿಸಿತ್‌ ಡಿʼಸೋಜ (15) ನೇಣಿಗೆ ಶರಣಾದ ಬಾಲಕ. ಈತ ಹತ್ತನೇ ತರಗತಿಯಲ್ಲಿ ಕಲಿಯುತಿದ್ದಾನೆ. ಸಂದೀಪ್‌ ಜ. 3ರಂದು ರಾತ್ರಿ ಕೋಣೆಯಲ್ಲಿ ಮಲಗಿದ್ದು, ಬೆಳಿಗ್ಗೆ ಮನೆಯವರು ನೋಡುವ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಿಖರ […]