ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರಿಂದ ಪ್ರತಿಭಟನೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಿದ್ದರಿಂದ ನೂರಾರು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ತಾಂತ್ರಿಕ ಸಮಸ್ಯೆಯ ಕಾರಣ ನೀಡಿ ದಿಢೀರನೆ ವರ್ಗಾವಣೆ ಪ್ರಕ್ರಿಯೆ ರದ್ದುಗೊಳಿಸಿರುವುದಕ್ಕೆ ಶಿಕ್ಷಕ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಸುಮಾರು ಒಂದು ತಿಂಗಳಿನಿಂದ ಸ್ಥಗಿತವಾಗಿದ್ದ ವರ್ಗಾವಣೆ ಪ್ರಕ್ರಿಯೆ ಕಳೆದ ವಾರ ಆರಂಭವಾಗಿತ್ತು. ಮತ್ತೆ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಕೌನ್ಸೆಲಿಂಗ್ ಸ್ಥಗಿತಗೊಳಿಸಲಾಗಿದ್ದು, ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ದೋಷದ ಕಾರಣ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸರಕಾರ […]

ಪ್ರಥಮ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ […]

ಕಾರ್ಕಳ: ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳವು: ಪ್ರಕರಣ ದಾಖಲು

ಕಾರ್ಕಳ : ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಘಟನೆ ಕಾರ್ಕಳ ಪುರಸಭಾ ವ್ಯಾಪ್ತಿಯ ಸಾಲ್ಮರ ಎಂಬಲ್ಲಿ ನಡೆದಿದೆ. ಸಾಲ್ಮರದ ಅಂಗಡಿಯೊಂದರಲ್ಲಿ ಎ.ಸಿ. ಮೆಕ್ಯಾನಿಕ್ ಆಗಿರುವ ಮಹಮ್ಮದ್ ರಮೀಝ್ ಎಂಬುವವರು ಜ.17 ರಂದು ಮಧ್ಯಾಹ್ನ ಯಮಹಾ ಬೈಕ್‌ ಅನ್ನು ಅಂಗಡಿ ಮುಂಭಾಗ ಬೈಕ್‌ ನಿಲ್ಲಿಸಿ, ಲಾಕ್‌ ಮಾಡಿ ಮಂಗಳೂರಿಗೆ ತೆರಳಿದ್ದರು. ಮರುದಿನ ಬಂದು ನೋಡಿದಾಗ ಬೈಕ್ ಕಳುವಾಗಿರುವುದು ಬೆಳಕಿಗೆ ಬಂದಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಪರ್ಯಾಯದ ನೆನಪಿನ ಅಂಚೆಚೀಟಿ ಬಿಡುಗಡೆ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪ್ರದೀಪಕುಮಾರ್ ಕಲ್ಕೂರ ಇವರ ಪ್ರಾಯೋಜಕತ್ವದಲ್ಲಿ ಉಡುಪಿ ಅಂಚೆ ವಿಭಾಗದ ವತಿಯಿಂದ ಪರ್ಯಾಯದ ನೆನಪಿನ ಅಂಚೆಲಕೋಟೆಯನ್ನು ಉಡುಪಿ ಅಂಚೆ ವಿಭಾಗದ ಅಧೀಕ್ಷಕರಾದ ನವೀನಚಂದ್ರ ಬಿಡುಗಡೆಗೊಳಿಸಿದನು. ಕೃಷ್ಣಾಪುರ ಪರ್ಯಾಯ ಮಠಾಧೀಶರಾದ ಪೂಜ್ಯ ವಿದ್ಯಾಸಾಗರ ತೀರ್ಥ ಶ್ರೀ ಪಾದರು ಆಶೀವರ್ಚನ ನಡೆಸಿಕೊಟ್ಟರು.

ಕೋಟ: ಪ್ರೀತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಮನೆಬಿಟ್ಟು ಹೋದ ಯುವತಿ ನಾಪತ್ತೆ

ಕೋಟ: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿ ಮನೆಯಲ್ಲಿ ಗಲಾಟೆ ಮಾಡಿಕೊಂಡು ಹೊರಗೆ ಹೋದ ಯುವತಿಯೊಬ್ಬಳು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕುಂದಾಪುರ ತಾಲೂಕಿನ ಉಳ್ಚೂರು ಗ್ರಾಮದ ಕಳ್ಳಿಗುಡ್ಡೆಯಲ್ಲಿ ನಡೆದಿದೆ. ಉಳ್ಚೂರು ಗ್ರಾಮದ ಕಳ್ಳಿಗುಡ್ಡೆಯ ನಿವಾಸಿ ವಸಂತ ಅವರ ಮಗಳು 19ವರ್ಷದ ಚಂದನಾ ನಾಪತ್ತೆಯಾದ ಯುವತಿ. ಈಕೆ ಜ.11ರಂದು ರಾತ್ರಿ ಮನೆಯಲ್ಲಿ ಪೋನಿನಲ್ಲಿ ಮಾತನಾಡುತ್ತಿದ್ದಳು. ಇದನ್ನು ತಂದೆ ಪ್ರಶ್ನಿಸಿದ್ದಾರೆ. ಇದೇ ವಿಚಾರಕ್ಕೆ ಮನೆಯಲ್ಲಿ ಗಲಾಟೆ ನಡೆದು, ಚಂದನಾ ಮನೆ ಬಿಟ್ಟು ಹೋಗಿದ್ದಾಳೆ. ಮಗಳು ವಾಪಾಸು ಬರಬಹುದು ಎಂದು ತಂದೆ […]