ಪಡುಬಿದ್ರಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಚೂರಿ ಇರಿತ

ಪಡುಬಿದ್ರಿ: ಕಾಂಗ್ರೆಸ್ ನ ಸ್ಥಳೀಯ ನಾಯಕಿಯೋರ್ವರಿಗೆ ನೆರೆಮನೆಯ ವ್ಯಕ್ತಿ ಚೂರಿಯಿಂದ ಇರಿದಿರುವ ಘಟನೆ ಶುಕ್ರವಾರ ತಡರಾತ್ರಿ ಪಡುಬಿದ್ರಿ ಸಮೀಪ ನಡೆದಿದೆ‌. ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ ಚೂರಿ ಇರಿತಕ್ಕೊಳಗಾದ ಮಹಿಳೆ. ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣಕ್ಕಾಗಿ ರೀನಾ ಅವರ ನೆರೆಮನೆಯ ಸುಮಾರು 45 ವರ್ಷ ಪ್ರಾಯದ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರೀನಾ ಅವರು ಇನ್ನೋರ್ವ ಮಹಿಳೆಯೊಂದಿಗೆ ತನ್ನ ಮನೆ […]