ಕಾರ್ಕಳ: ಪೂರ್ಣಿಮಾ ಸಿಲ್ಕ್ಸ್ ಮಳಿಗೆಗೆ ಕೇಮಾರು ಶ್ರೀ ಭೇಟಿ

ಕಾರ್ಕಳ: ಕಾರ್ಕಳ ಜೋಡು ರಸ್ತೆಯ ಹತ್ತಿರ ಇರುವ ಪೂರ್ಣಿಮಾ ಸಿಲ್ಕ್ಸ್ ಗೆ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪೂರ್ಣಿಮಾ ಸಿಲ್ಕ್ಸ್ ನ ಪಾಲುದಾರರಾದ ರವಿಪ್ರಕಾಶ್ ಪ್ರಭು, ಕಿರಣಾ ರವಿಪ್ರಕಾಶ್ ಪ್ರಭು, ಪ್ರಜ್ವಲ್ ಪ್ರಭು ಅವರು ಶ್ರೀಗಳಿಗೆ ಶಾಲು ಹೊದಿಸಿ ಹೂ ಫಲಪುಷ್ಪ ನೀಡಿ ಸನ್ಮಾನಿಸಿದರು. ಶ್ರೀಗಳು ಕೊಲ್ಲೂರು ಶ್ರೀ ಮೂಕಾಂಬಿಕ ದೇವಿಯ ಆಶೀರ್ವಾದ ದಿಂದ ಪೂರ್ಣಿಮಾ ಸಿಲ್ಕ್ಸ್ ನ ಇನ್ನೊಂದು ನೂತನ ಶಾಖೆ ಪೂರ್ಣಿಮಾ ಲೈಫ್ ಸ್ಟೈಲ್ ಪ್ರೈಮ್ ಮಾಲ್ […]

ಗಣರಾಜ್ಯೋತ್ಸವದ ಅಂಗವಾಗಿ ಜ.28 ರಿಂದ 3 ದಿನ ಇಂಗ್ಲೀಷ್‌ ಸಂವಹನ ತರಬೇತಿ

ಮಂಗಳೂರು: ಸ್ಥಳೀಯ ಸಾತ್ವಿಕ ಭಾರತೀಯ ಸಾಮಾಜಿಕ ಅಭಿವೃದ್ಧಿ ಸಂಸ್ಥೆಯು 73ನೇ ಗಣರಾಜ್ಯೋತ್ಸವದ ಅಂಗವಾಗಿ ಜ.28 ರಿಂದ ಜ.30 ರವರೆಗೆ 3 ದಿನ ಎಲ್ಲ ವಯೋಮಾನದವರಿಗೆ ಇಂಗ್ಲೀಷ್‌ ಭಾಷಾ ತರಬೇತಿ ನೀಡಲಿದೆ. ತರಬೇತಿಯಲ್ಲಿ ಮಂಗಳೂರಿನ ಹೆಸರಾಂತ ಭಾಷಾ ಪಂಡಿತರಾದ ನೆವಿಲ್‌ ರೋಡ್ರಿಗ್ಸ್‌ ಅವರು ಉದ್ಯೋಗಕ್ಕಾಗಿ ಸಂದರ್ಶನದಲ್ಲಿ ಮಾತನಾಡುವುದು ಹೇಗೆ? ಸಭೆ ಸಮಾರಂಭಗಳಲ್ಲಿ ತಮ್ಮ ಸ್ವ ಪರಿಚಯ ಮಾಡಿಕೊಳ್ಳುವುದು ಹೇಗೆ? ಅಲ್ಲದೇ ಇಂಗ್ಲೀಷ್‌ ಭಾಷೆಯಿಂದ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವುದು ಹೇಗೆ? ಎಂಬುದರ ಕುರಿತು ವಾಟ್ಸ್‌ಅಪ್‌ ಸಾಮಾಜಿಕ ಜಾಲತಾಣದ ಮೂಲಕ ಆನಲೈನ್‌ನಲ್ಲಿ […]

ನೂತನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ.

ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತಿಗೊಂಡ ಬಳಿಕ ಗಣರಾಜ್ಯೋತ್ಸವ ಆಚರಣೆ ಪ್ರಯುಕ್ತ ಉಡುಪಿಗೆ ಆಗಮಿಸಿದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಅವರನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಉಡುಪಿ ಪ್ರವಾಸಿ ಮಂದಿರದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ […]