ವಿದ್ಯುತ್ ವಲಯಕ್ಕೆ ದೂರ ದೃಷ್ಟಿಯ ಸ್ಪರ್ಶ: ಸುನಿಲ್ ಕುಮಾರ್

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ಭವಿಷ್ಯದ ಭಾರತಕ್ಕೆ ಪೂರಕವಾದ ನೀತಿ- ನಿರೂಪಕ ಅಂಶಗಳನ್ನು ಹೊಂದಿದ್ದು ಇಂಧನ ಕ್ಷೇತ್ರಕ್ಕೆ ದೂರದೃಷ್ಟಿಯ ಸ್ಪರ್ಶ ನೀಡಿದ್ದಾರೆ ಎಂದು ಕನ್ನಡ ಸಂಸ್ಕ್ರತಿ ಮತ್ತು ಇಂಧನ ಸಚಿವ ವಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ೨೫ ವರ್ಷಗಳ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ತಯಾರಿಸಲಾಗಿದೆ. ಯಾವುದೇ ಒಂದು ವರ್ಗದ ಓಲೈಕೆಗೆ ಸೀಮಿತವಾಗಿರದೇ ಪಾಲಿಸಿ ಆಧರಿತ ಕಾರ್ಯಕ್ರಮಗಳ ಜಾರಿಗೆ ಕೇಂದ್ರ ಆದ್ಯತೆ ನೀಡಿದೆ. ಎಲ್ಲದಕ್ಕಿಂತ ಹೆಚ್ಚಾಗಿ ” ಸ್ವಚ್ಚ […]
ಮಣಿಪಾಲ: ಅಪಘಾತದ ರಭಸಕ್ಕೆ ಧಗ ಧಗ ಹೊತ್ತಿ ಉರಿದ ಸ್ಕೂಟರ್

ಮಣಿಪಾಲ: ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಪ್ಪಳಿಸಿದ ಸ್ಕೂಟರ್ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿಉರಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಉಡುಪಿಯಿಂದ ಡಿಸಿ ಆಫೀಸ್ ಕಡೆಗೆ ಹೋಗುತ್ತಿದ್ದ ಲಾರಿಯೊಂದು ಸೂಜುಕಿ ಆಕ್ಸಿಸ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಉರುಳಿದ ಸ್ಕೂಟರ್ ನ ಪೆಟ್ರೋಲ್ ಟ್ಯಾಂಕ್ ಹಾನಿಯಾಗಿ ಸ್ಕೂಟರ್ ಗೆ ಕ್ಷಣಾರ್ಧದಲ್ಲಿ ಬೆಂಕಿ ಹತ್ತಿಕೊಂಡಿದೆ. ನೋಡು ನೋಡುತ್ತಿದ್ದಂತೆ ಸ್ಕೂಟರ್ […]
ಹೆಬ್ರಿ: ವಾಲಿಬಾಲ್ ಆಟಗಾರ ನೇಣಿಗೆ ಶರಣು

ಹೆಬ್ರಿ: ವಾಲಿಬಾಲ್ ಆಟಗಾರನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಕೆಳಪೇಟೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹೆಬ್ರಿ ಕೆಳಪೇಟೆಯ ನಿವಾಸಿ 30 ವರ್ಷದ ಪ್ರಶಾಂತ್ ಯಾನೆ ಪಚ್ಚು ಎಂಬಾತ ನೇಣಿಗೆ ಶರಣಾದ ಯುವಕ. ಈತ ವಾದ್ಯ ನುಡಿಸುವ ಕೆಲಸ ಮಾಡುತ್ತಿದ್ದನು. ಅಲ್ಲದೆ, ಉತ್ತಮ ವಾಲಿಬಾಲ್ ಪಟು ಕೂಡ ಆಗಿದ್ದನು. ಹೆಬ್ರಿ ಎಪಿಟಿ ಹಾಗೂ ಎರ್ಲಪಾಡಿ ವಾಲಿಬಾಲ್ ಟೀಂಗಳಲ್ಲಿ ಆಡುತ್ತಿದ್ದನು ಎನ್ನಲಾಗಿದೆ. ಉತ್ತಮ ವಾಲಿಬಾಲ್ ಪೇಸರ್ ಕೂಡ ಆಗಿದ್ದನು. ಇತ್ತೀಚೆಗೆ ಪ್ರಶಾಂತ್ ಅನಾರೋಗ್ಯದಿಂದ ಬಳಲುತ್ತಿದ್ದು, ಇದೇ ಖಿನ್ನತೆಯಲ್ಲಿ ಚಿಕ್ಕಪ್ಪನ […]
ಬೈಂದೂರು: ಹೊಳೆ ದಾಟುತ್ತಿದ್ದ ವೇಳೆ ಆಯ ತಪ್ಪಿ ನೀರಿಗೆ ಬಿದ್ದು ವ್ಯಕ್ತಿ ಸಾವು

ಬೈಂದೂರು: ಹೊಳೆ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಪಡುವರಿ ಗ್ರಾಮದಲ್ಲಿ ಜ.31ರಂದು ಮಧ್ಯಾಹ್ನ ನಡೆದಿದೆ. ಪಡುವರಿ ಗ್ರಾಮದ ವಿರೂಪಾಕ್ಷಿ ಹುಣ್ಸೆಮನೆ ನಿವಾಸಿ 61 ವರ್ಷದ ಮಂಜಯ್ಯ ದೇವಾಡಿಗ ಮೃತ ವ್ಯಕ್ತಿ. ಇವರು ಸೋಮವಾರ ಬೆಳಿಗ್ಗೆ ಕೆಲಸಕ್ಕೆಂದು ಹೋದವರು, ಕೆಲಸವಿಲ್ಲದ ಕಾರಣ ಮನೆಗೆ ವಾಪಾಸ್ಸು ಬರುತ್ತಿದ್ದರು. ಈ ವೇಳೆ ಪಡುವರಿ ಗ್ರಾಮದ ಸುಮನಾವತಿ ಹೊಳೆಯನ್ನು ದಾಟುತ್ತಿರುವಾಗ ಮಂಜಯ್ಯನವರು, ಆಯತಪ್ಪಿ ಕಾಲುಜಾರಿ ಹೊಳೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. […]
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರ ₹91.50 ಇಳಿಕೆ

ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್ಪಿಜಿ ಸಿಲಿಂಡರ್ ದರದಲ್ಲಿ ಮಂಗಳವಾರ ₹91.50 ಇಳಿಕೆಯಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ರಾಷ್ಟ್ರೀಯ ತೈಲ ಮಾರಾಟ ಕಂಪನಿಗಳು ಬೆಲೆ ಇಳಿಕೆ ನಿರ್ಧಾರ ಕೈಗೊಂಡಿವೆ ಎನ್ನಲಾಗಿದ್ದು, ಇಂದಿನಿಂದಲೇ ಹೊಸ ದರ (ಫೆಬ್ರುವರಿ 1) ಜಾರಿಗೆ ಬರುವ ಸಾಧ್ಯತೆಗಳಿವೆ. ಈ ತೀರ್ಮಾನದಿಂದ ದೆಹಲಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ಎಲ್ಪಿಜಿ ಸಿಲಿಂಡರ್ ದರ ₹1907 ಆಗಲಿದೆ.