ಯಕ್ಷಗಾನ ಅಕಾಡೆಮಿ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ  ಕಲಾ ಪ್ರಕಾರಗಳಲ್ಲಿ 2021 ನೇ ಸಾಲಿನ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯೊಂದಿಗೆ ಪುಸ್ತಕಗಳ 4 ಪ್ರತಿಗಳನ್ನು ರಿಜಿಸ್ಟ್ರಾರ್ ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಲು ಫೆ. 23 ಕೊನೆಯ […]

ವಸತಿ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಯ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ನಿವೇಶನವಿರುವ ವಸತಿ ರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ. 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ, ರಜತಾದ್ರಿ ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.