ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲ: ಕೈ ಗೊಂಬೆಗಳ ಪ್ರದರ್ಶನ

ಮಣಿಪಾಲ: ಶ್ರೀ ಶಾರದ ಟೀಚರ್ ಟ್ರೈನಿಂಗ್ ಸಂಸ್ಥೆಯ ಪೂರ್ವ ಪ್ರಾಥಮಿಕ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಂದ ಕೈ ಗೊಂಬೆಗಳ ಪ್ರದರ್ಶನ ನಡೆಯಿತು. ಮಕ್ಕಳ ಗಮನ ಮತ್ತು ಆಸಕ್ತಿಯನ್ನು ಸೆಳೆಯುವ, ಮಕ್ಕಳ ಗೃಹಿಕೆಯ ಶಕ್ತಿಯನ್ನು ಹೆಚ್ಚಿಸುವ ಹಾಗೂ ಮತ್ತು ಮಕ್ಕಳ ಭಾಷಾ ಕೌಶಲ್ಯವನ್ನು ಅಭಿವೃದ್ಧಿ ಪಡಿಸಲು, ಮಕ್ಕಳಿಗೆ ಪುನಾರವರ್ತಿಸಲು ಮತ್ತು ನೆನಪಿಟ್ಟುಕೊಳ್ಳಲು ಸಹಾಯ ಮಾಡುವಂತಹ ವಿವಿಧ ರೀತಿಯ ಗೊಂಬೆಗಳನ್ನು ಇಲ್ಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರು ಪ್ರದರ್ಶಿಸಿದರು. ರೈಮ್ಸ್, ನಾಟಕ, ಕಥೆಗಳಲ್ಲಿ ಕಾಲ್ಚೀಲದ ಗೊಂಬೆ, ನೆರಳಿನ ಗೊಂಬೆ, ಬೆರಳಿನಿಂದ ಆಡಿಸುವ ಗೊಂಬೆ ಹಾಗೂ ಆಟಿಕೆಯ […]

ಕಳತ್ತೂರು: ಫೆ. 20ಕ್ಕೆ ಗುರ್ಮೆ ಗೋ ವಿಹಾರ ಲೋಕಾರ್ಪಣೆ ಕಾರ್ಯಕ್ರಮ

ಕಾಪು: ಕಾಪು ತಾಲೂಕಿನ ಕಳತ್ತೂರು ಗುರ್ಮೆಯಲ್ಲಿ ಗುಮ್ಮೆ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಿಸಲಾದ ‘ಗುರ್ಮೆ ಗೋ ವಿಹಾರ ಕೇಂದ್ರ’ ಲೋಕಾರ್ಪಣೆ ಮತ್ತು ದಿ| ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ನಾಲ್ಕನೇ ಪುಣ್ಯತಿಥಿಯ ಪ್ರಯುಕ್ತ ಫೆ. 20 ರಂದು ಕಳತ್ತೂರು ಗುಮ್ಮೆಯಲ್ಲಿ ಕೀರ್ತನ,‌ ಸಾಂತ್ವನ, ಯಕ್ಷಗಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುಮ್ಮೆ ಫೌಂಡೇಶನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುಮ್ಮೆ ಹೇಳಿದರು. ಅವರು ಮಂಗಳವಾರ ಗುರ್ಮೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೀರ್ತನ, ಸಾಂತ್ವನ ಹಾಗೂ ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ […]

ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆ

ಉಡುಪಿ: ಕೇಂದ್ರ ಸರಕಾರದ ಯುವ ಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಯುವ ಸಂಸತ್ತು ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಯುವ ಜನರಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಕಾರ್ಯಕ್ರಮ ನಡೆಸಲು ರಾಜ್ಯದ ಉಡುಪಿ, ಮೈಸೂರು, ಗುಲ್ಬರ್ಗ, ದಕ್ಷಿಣ ಕನ್ನಡ, ರಾಯಚೂರು ಹಾಗೂ ಕಾರವಾರ ಆಯ್ಕೆಯಾದ ನೊಡೆಲ್ ಕೇಂದ್ರಗಳು. ಉಡುಪಿ ನೊಡೆಲ್ ಕೇಂದ್ರದ ಅಡಿಯಲ್ಲಿ – […]

ಉಪ್ಪುಂದ; ಆಸ್ಪತ್ರೆಗೆ ಹೋದ ತಾಯಿ- ಮಗಳು ನಾಪತ್ತೆ

ಬೈಂದೂರು: ವಿವಾಹಿತ ಮಹಿಳೆಯೊಬ್ಬರು ತನ್ನ 8 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ತೊಪ್ಪಲು ಎಂಬಲ್ಲಿ ನಡೆದಿದೆ. ಉಪ್ಪುಂದ ಗ್ರಾಮದ ತೊಪ್ಪಲು ನಿವಾಸಿ 45 ವರ್ಷದ ಸುನಂದ ಹಾಗೂ ಅವರ 8 ವರ್ಷದ ಮಗಳು ಅಶ್ಮಿತಾ ಕಾಣೆಯಾಗಿದ್ದಾರೆ. ಇವರು ಫೆ.14ರಂದು ಮಧ್ಯಾಹ್ನ 12 ಗಂಟೆಗೆ ಮನೆಯಿಂದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ವಾಪಾಸ್ಸು ಬಾರದೇ ಕಾಣೆಯಾಗಿದ್ದಾರೆ. ಸಂಬಂಧಿಕರು ಹಾಗೂ ಮನೆಯ ಸುತ್ತಮುತ್ತ ವಿಚಾರಿಸಿ ಹುಡುಕಾಡಿದರೂ ಪತ್ತೆಯಾಗಿಲ್ಲ. ಈ ಬಗ್ಗೆ ಬೈಂದೂರು […]

ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಬಂದರೆ ಸ್ವಾಗತ; ಶಾಸಕ ರಘುಪತಿ ಭಟ್

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಈಗ ಬಿಜೆಪಿಯ ಬಾಗಿಲು ತೆರೆದಿದೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಉಡುಪಿ ಬಿಜೆಪಿ ಶಾಸಕ ಕೆ. ರಘುಪತಿ‌ ಭಟ್ ಹೇಳಿದರು. ಉಡುಪಿ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಮೋದ್ ಸೇರ್ಪಡೆಗೆ ನಾನು ವಿರೋಧ ವ್ಯಕ್ತಪಡಿಸಿದ್ದು ನಿಜ. ನಾನು ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾರಣ, ನನ್ನ ಸ್ಥಾನಕ್ಕೆ ಕುತ್ತು ಬರಬಹುದೆಂಬ ನಿಟ್ಟಿನಿಂದ ಸ್ವಭಾವಿಕವಾಗಿ ವಿರೋಧ ಮಾಡಿದ್ದೇನು. ಆಗಲೂ […]