ಮಾ.20 ರಂದು ಅಮೃತ ಮಹೋತ್ಸವ ಸಡಗರದ 29ನೇ ಪದ್ಮಶಾಲಿ ಕ್ರೀಡೋತ್ಸವ

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಮಂಗಳೂರು ಇದರ ಆಶ್ರಯದಲ್ಲಿ ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಆತಿಥ್ಯದಲ್ಲಿ ಮಹಾಸಭಾದ ಅಮೃತ ಮಹೋತ್ಸವ ಸಡಗರದ 29ನೇ ಪದ್ಮಶಾಲಿ ಕ್ರೀಡೋತ್ಸವವನ್ನು ಮಾ.20 ರಂದು ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ […]

ಮಾ.20- 29ರ ವರೆಗೆ ‘ರಾಷ್ಟ್ರೀಯ ರಂಗಹಬ್ಬ’ ಬಹುಭಾಷಾ ನಾಟಕೋತ್ಸವ

ಉಡುಪಿ: ಸುಮನಸಾ ಕೊಡವೂರು ವತಿಯಿಂದ 20ರ ಸಂಭ್ರಮದ ಪ್ರಯುಕ್ತ ರಾಷ್ಟ್ರೀಯ ರಂಗಹಬ್ಬ -10 ಬಹುಭಾಷಾ ನಾಟಕೋತ್ಸವವನ್ನು ಮಾ.20ರಿಂದ 29ರವರೆಗೆ ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾ.20ರಂದು ಸಂಜೆ 6.30ಕ್ಕೆ ಸಾಹಿತಿ ಮತ್ತು ನಾಟಕಕಾರ ಡಾ.ರಾಜಪ್ಪ ದಳವಾಯಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಾ.29ರಂದು ಸಂಜೆ 6.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುಮಧುರ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದೆ. ಅಧ್ಯಕ್ಷತೆಯನ್ನು ಸಚಿವ ಸುನೀಲ್ ಕುಮಾರ್ ವಹಿಸಲಿದ್ದಾರೆ. ಪ್ರತಿದಿನ ಸಾಧಕರೊಬ್ಬರಿಗೆ ರಂಗ ಸಾಧಕ ಸನ್ಮಾನ ನೀಡಲಾಗುವುದು ಎಂದು ಸಂಸ್ಥೆಯ ಗೌರವಾಧ್ಯಕ್ಷ ಎಂ.ಎಸ್.ಭಟ್ […]

ಮಾ.19 ರಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕರ ಸಮಾವೇಶ; ಯಶ್‌ಪಾಲ್ ಸುವರ್ಣ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ ಬ್ಯಾಂಕ್ ಲಿ. ಉಡುಪಿ ಇದರ ಗಾಹಕರ ಸಮಾವೇಶ ಮಾರ್ಚ್ 19 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಕಿದಿಯೂರು ಹೋಟೆಲ್‌ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ. ಗ್ರಾಹಕರ ಸಮಾವೇಶವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಉದ್ಘಾಟಿಸಲಿದ್ದು, ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್, ದಕ್ಷಿಣ […]

ಕೊಡಂಕೂರು ಬಳಿ ಕೀಟನಾಶಕ ಸೇವಿಸಿ ವೃದ್ಧ ಆತ್ಮಹತ್ಯೆ

ಉಡುಪಿ: ಕೀಟನಾಶಕ ಸೇವಿಸಿ ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಿಟ್ಟೂರಿನ  ಕೊಡಂಕೂರು ಎಂಬಲ್ಲಿ ನಡೆದಿದೆ. ಕೊಡಂಕೂರು ನಿವಾಸಿ 74 ವರ್ಷದ ಉದಯ ರಾವ್ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.8 ರಂದು ಮನೆಯ ಬಾತ್ ರೂಮ್ ನಲ್ಲಿ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ  ಫಲಕಾರಿಯಾಗದೇ ಉದಯ ಅವರು ಮಾ.17 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ […]