ಉಡುಪಿ: ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಸೌತ್ ಶಾಲೆ, ಪಡುನಿಟ್ಟೂರು, ಮೂಳೂರು ಯು.ಬಿ.ಎಂ.ಸಿ, ಅಲೆವೂರು, ಕಂಪನಬೆಟ್ಟು, ಕುತ್ಯಾರು ಪಂಚಾಯತ್ ಬಳಿ, ಪಾಂಗಾಳಗುಡ್ಡೆ ಹಾಗೂ ಮಿತ್ರಬೆಟ್ಟು ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ 18 ರಿಂದ 35 ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ಮತ್ತು ಗರಿಷ್ಠ 9 ನೇ ತರಗತಿ ತೇರ್ಗಡೆಯಾದ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ […]

ನಾಡನ್ನು ಸುಭಿಕ್ಷಗೊಳಿಸಲು ಶಕ್ತಿ ಮೀರಿ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಉಡುಪಿ: ನಾಡನ್ನು ಮುನ್ನಡೆಸುವ ಅವಕಾಶ ದೊರೆತಿದೆ. ಭಗವಂತನಿಂದ ನಿಷ್ಠೆ ಪ್ರಾಮಾಣಿಕತೆ ಹಾಗೂ ವಿಶ್ವಾಸಕ್ಕೆ ಕುಂದುಬಾರದ ರೀತಿಯಲ್ಲಿ ಆಡಳಿತ ನಡೆಸುವುದಾಗಿ ಹಾಗೂ ನಾಡನ್ನು ಸುಭಿಕ್ಷ ಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಇತ್ತರು. ಅವರು ಕುಂಜಿಬೆಟ್ಟಿನ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಗದೇವತೆಗೆ ವಿಶಿಷ್ಟ ಸ್ಥಾನವಿದೆ. ಅತ್ಯಂತ ಸೌಮ್ಯ ಹಾಗೂ ಭಯಂಕರ. ಪೂಜೆ ಮಾಡಿದ್ರೆ ವರ ತೊಂದರೆ ಕೊಟ್ಟರೆ ಪ್ರಾಣ ತೆಗೆಯುವ ಶಕ್ತಿ ಇದೆ. ಇದರ […]