ಏ.21: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಅವರು ಏಪ್ರಿಲ್ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.30 ಕ್ಕೆ ಸೂಡದ ಕೊಂಬಲ್ಕೆಯಲ್ಲಿ ಕಿಂಡಿ ಆಣೆಕಟ್ಟು ಗುದ್ದಲಿ ಪೂಜೆ, 10.30 ಕ್ಕೆ ರೆಂಜಾಳ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಗುದ್ದಲಿಪೂಜೆ, 11.15 ಕ್ಕೆ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಮಿಯ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ, […]

ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿ ಲಾಡ್ಜ್ ನಲ್ಲಿ ಮತ್ತೋರ್ವ ಯುವಕನ ಆತ್ಮಹತ್ಯೆ

ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಶಾಂಭವಿ ಹೋಟೆಲ್ ಉಡುಪಿಯಲ್ಲಿ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಡ್ಜ್ ನಲ್ಲಿ ಮೃತರಾದವರು ಮಂಗಳೂರು ಕೊಣಾಜೆಯ ಶರಣ್ ರಾಜ್ (31) ಎಂದು ಗುರುತಿಸಲಾಗಿದೆ. ಶರಣ್ ನಿನ್ನೆ ರಾತ್ರಿ ಶಾಂಭವಿ ಲಾಡ್ಜಿನ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣವಾಗಿದೆ. ಶಾಂಭವಿ ಹೋಟೆಲ್ ಮಾಲಕರು ಇತ್ತೀಚೆಗಷ್ಟೇ ತನ್ನ ಹೋಟೆಲಿನಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಿ ಹೆಸರು ಬದಲಾಯಿಸಿದ್ದರು. ಉಡುಪಿ ನಗರ ಠಾಣೆ ಪೊಲೀಸರು […]

ಎಸ್.ಎಸ್.ಎಲ್.ಸಿ ಮೌಲ್ಯಮಾಪನ: ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸ್ತುತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಏಪ್ರಿಲ್ 19 ರಿಂದ ಪ್ರಾರಂಭವಾಗಿ ಸುಮಾರು 10 ದಿನಗಳವರೆಗೆ ಜಿಲ್ಲೆಯ ಕಡಿಯಾಳಿ ಯು. ಕಮಲಾ ಬಾಯಿ ಪ್ರೌಢಶಾಲೆ, ಆದಿ ಉಡುಪಿ ಪ್ರೌಢಶಾಲೆ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ವಳಕಾಡು ಸರ್ಕಾರಿ ಪ್ರೌಡಶಾಲೆ, ಕ್ರಿಶ್ಚಿಯನ್ ಪ್ರೌಢಶಾಲೆ ಹಾಗೂ ಕುಂಜಿಬೆಟ್ಟು ಟಿ.ಎ.ಪೈ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆ, ಮೌಲ್ಯಮಾಪನ ಮುಗಿದು ಪ್ರಶ್ನೋತ್ತರ ಪತ್ರಿಕೆಗಳನ್ನು ಬೆಂಗಳೂರು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ಸಾಗಿಸುವವರೆಗೆ, ಸಂಬಂಧಿಸಿದ ಮೌಲ್ಯಮಾಪನ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು […]

ಏ.21 ರಂದು ಅಪ್ರೆಂಟಿಷಿಪ್ ಮೇಳ

ಉಡುಪಿ: ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ  ರಾಷ್ಟ್ರೀಯ ಅಪ್ರೆಂಟಿಷಿಪ್ ಮೇಳವು ಏಪ್ರಿಲ್ 21 ರಂದು ಬೆಳಿಗ್ಗೆ 9.30 ಕ್ಕೆ ಮಣಿಪಾಲ ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಐ.ಟಿ.ಐ ತೇರ್ಗಡೆಯಾಗಿರುವ ಅಭ್ಯರ್ಥಿಗಳು https://docs.google.com/forms/d/e/1FAIpQLSd4xeoLKp2cYa1zPHggbC0QZw7F0a1GQDcMNthKr8rfbCXkA/viewform?vc=0&c=0&w=1&flr=0&gxid=-8203366 ಲಿಂಕ್ ಮೂಲಕ ನೋಂದಣಿ ಮಾಡಿಕೊಂಡು ಮೇಳದಲ್ಲಿ ಹಾಜರಾಗಬಹುದಾಗಿದೆ. ಅಪ್ರೆಂಟಿಷಿಪ್ ತರಬೇತಿ ನೀಡುವ ಕಂಪೆನಿ ಹಾಗೂ ಕೈಗಾರಿಕೆಗಳು ಅಪ್ರೆಂಟಿಷಿಪ್ ಮೇಳದಲ್ಲಿ ಭಾಗವಹಿಸಲು https://docs.google.com/forms/d/e/1FAIpQLSecYQC_WAv2uqsmkKtISmVg6IK1U2lZmBv911phldGBSbTTcQ/viewform?vc=0&c=0&w=1&flr=0&gxid=-8203366 ಮೂಲಕ ಹಾಗೂ ಮೇಳ ನಡೆಯುವ ದಿನದಂದು ಸಂಸ್ಥೆಯಲ್ಲಿ ಶಿಕ್ಷಣ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ […]

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

ಉಡುಪಿ: ಮೇ ತಿಂಗಳಲ್ಲಿ ನಡೆಯಲಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಎ.18 ರಂದು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ನೇತೃತ್ವದಲ್ಲಿ ಭೇಟಿಯಾಗಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಶೋತ್ತಮ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ದೇವಳದ […]