ಆಹಾರದಲ್ಲಿ ರಾಸಾಯನಿಕಗಳ ಬಳಕೆಯಿಂದ ಮಾರಕ ಕಾಯಿಲೆಗಳು : ಶೋಭಾ ಕರಂದ್ಲಾಜೆ

  ಉಡುಪಿ: ಪ್ರತಿನಿತ್ಯ ಉಪಯೋಗಿಸುವ ಆಹಾರದಲ್ಲಿ ರಾಸಾಯನಿಕ ವಸ್ತುಗಳ ಹೆಚ್ಚಿನ ಬಳಕೆಯಿಂದ ಕ್ಯಾನ್ಸರ್, ಕಿಡ್ನಿರೋಗದಂತಹ ಮಾರಕ ಕಾಯಿಲೆಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರೋಟರಿ ಮಿಡ್ ಟೌನ್, ರಾಷ್ಟ್ರೀಯ ಆರೋಗ್ಯ […]

ವಂಚನೆಯ ಬಗ್ಗೆ ತನ್ನ ಗ್ರಾಹರಿಕೆ ಎಚ್ಚರಿಕೆ ನೀಡಿದ ಎಸ್.ಬಿ.ಐ: ಈ ದೂರವಾಣಿ ಸಂಖ್ಯೆಗಳಿಂದ ದೂರವಿರಿ ಎಂದ ಬ್ಯಾಂಕ್

  ನವದೆಹಲಿ: ದೇಶದಾದ್ಯಂತ ಹರಡುತ್ತಿರುವ ಫಿಶಿಂಗ್ ವಂಚನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ತನ್ನ ಗ್ರಾಹಕರಿಗೆ ಟ್ವೀಟ್‌ಗಳು, ಎಸ್.ಎಮ್.ಎಸ್ ಗಳು ಮತ್ತು ಇಮೇಲ್‌ಗಳು ಸೇರಿದಂತೆ ವಿವಿಧ ಮೂಲಗಳ ಮೂಲಕ ಹಣವನ್ನು ವಂಚಿಸಲು ಬ್ಯಾಂಕ್‌ನ ಹೆಸರನ್ನು ಬಳಸುವ ಎಸ್.ಬಿ.ಐ ಫಿಶಿಂಗ್ ಹಗರಣದ ಬಗ್ಗೆ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ವಂಚನೆಗಳಿಂದ ಸುರಕ್ಷಿತವಾಗಿರಲು, ಎಸ್‌ಬಿಐ ತನ್ನ ಗ್ರಾಹಕರಿಗೆ +91-8294710946 ಅಥವಾ +91-7362951973 ಕರೆಗಳನ್ನು ಸ್ವೀಕರಿಸದಂತೆ ಕೇಳಿಕೊಂಡಿದೆ. […]

ಪಡುಬಿದ್ರಿ ಬಳಿ ಬೈಕ್‌ಗೆ‌ ಟೆಂಪೋ ಢಿಕ್ಕಿ; ಗಾಯಾಳು ಯುವಕ ಆಸ್ಪತ್ರೆಯಲ್ಲಿ ಸಾವು

ಉಡುಪಿ: ಪಡುಬಿದ್ರಿ ಬಳಿ ಬೈಕ್‌ಗೆ‌ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಲಿಮಾರು‌‌ ನಿವಾಸಿ ಖಲಂದರ್ ರಫೀಕ್ ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ. ಶುಕ್ರವಾರ ಮಧ್ಯಾಹ್ನ ಎರ್ಮಾಳು ಮಸೀದಿಯಿಂದ ಪಡುಬಿದ್ರಿ ಕಡೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಟೆಂಪೋ ಒಂದು ಬಂದು‌‌ ಢಿಕ್ಕಿ ಹೊಡೆದಿತ್ತು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಖಲಂದರ್‌ ರಫೀಕ್‌ ಅನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮುಂಜಾನೆ ಆತ ಅಸುನೀಗಿದ್ದು, ಈ ಬಗ್ಗೆ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋವಾದಲ್ಲಿ ಮಸ್ತಿ ಮೂಡ್ ನಲ್ಲಿರುವ ರಾಕಿ ಭಾಯ್!

ದೇಶಾದ್ಯಂತ ಚಿತ್ರಮಂದಿರಗಳಲ್ಲಿ ನಾಗಾಲೋಟದಿಂದ ಓಡುತ್ತಿರುವ ಕೆ.ಜಿ.ಎಫ್-2 ಚಲನಚಿತ್ರದ ಅಮೋಘ ಯಶಸ್ಸಿನ ಬಳಿಕ ರಾಕ್ ಸ್ಟಾರ್ ಯಶ್ ಇದೀಗ ಮಸ್ತಿ ಮೂಡ್ ನಲ್ಲಿದ್ದಾರೆ. ಚಿತ್ರರಂಗದಲ್ಲಿ ರಾಕಿ ಭಾಯ್ ಎಂದೇ ಗುರುತಿಸಲ್ಪಡುವ ಯಶ್ ತಮ್ಮ ಪತ್ನಿ ರಾಧಿಕಾ ಪಂಡಿತ್, ಮಗಳು ಐರಾ ಮತ್ತು ಮಗ ಯಥರ್ವ್ ಜೊತೆ ಗೋವಾದಲ್ಲಿ ಸಮಯ ಕಳೆಯುವ ನಿಟ್ಟಿನಲ್ಲಿ ಗೋವಾದತ್ತ ಮುಖ ಮಾಡಿದ್ದಾರೆ. ಗೋವಾ ವಿಮಾನ ನಿಲ್ದಾಣದಲ್ಲಿ ದಂಪತಿಗಳು ಮತ್ತು ಮಕ್ಕಳು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದ್ದಾರೆ. ಯಶ್ ಮತ್ನಿ ರಾಧಿಕಾ ಪಂಡಿತ್ ರವರ ಅಜ್ಜಿ ಮನೆಯು […]

ನಾಲ್ಕನೇ ಅಲೆ ಭೀತಿ: ಭಾರತದಲ್ಲಿ 2,527 ಹೊಸ ಕೋವಿಡ್ -19 ಪ್ರಕರಣ, ಕಳೆದ 24 ಗಂಟೆಗಳಲ್ಲಿ 33 ಸಾವು

ನವದೆಹಲಿ: ಭಾರತದಲ್ಲಿ 2,527 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ, ಕಳೆದ 24 ಗಂಟೆಗಳಲ್ಲಿ 33 ಸಾವುಗಳು, ಒಟ್ಟು ಸಾವಿನ ಸಂಖ್ಯೆಯನ್ನು 5,22,149 ಕ್ಕೆ ಏರಿಸಿದೆ ಎಂದು ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,079. ದೇಶವು ಒಂದು ದಿನದಲ್ಲಿ 1,656 ಚೇತರಿಕೆ ದಾಖಲಿಸಿದ್ದು, ಒಟ್ಟು ಚೇತರಿಕೆಯ ಸಂಖ್ಯೆ 4,25,17,724. ದೇಶಾದ್ಯಂತ ಅದರಲ್ಲೂ ವಿಶೇಷವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ದಾಖಲಾಗುತ್ತಿದ್ದರೂ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕಾಗುವವರ ಸಂಖ್ಯೆ […]