ಮಲ್ಪೆ: ಮೇ 8 ರಂದು ಜಿಲ್ಲಾಮಟ್ಟದ ತುಳುನಾಡ ಗೊಬ್ಬುಲು- ತುಳುನಾಡ ಪರಿಕರಗಳ ಪ್ರದರ್ಶನ, ಆಹಾರ ಮೇಳ

ಮಲ್ಪೆ: ತುಳುಕೂಟ ಉಡುಪಿ, ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ 318 ಸಿ, ಲಯನ್ಸ್ ಆ್ಯಂಡ್ ಲಿಯೋ ಕ್ಲಬ್ ಉಡುಪಿ- ಇಂದ್ರಾಳಿ ಇದರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ತುಳುನಾಡ ಗೊಬ್ಬುಲು-2022 ತುಳುನಾಡ ಸಂಗೀತ ಮತ್ತು ನೃತ್ಯ ಪ್ರದರ್ಶನವು ಮೇ 8 ರಂದು ಬೆಳಗ್ಗೆ 9 ಗಂಟೆಗೆ ಮಲ್ಪೆ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಮಂಗಳವಾರ ನಗರದ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ […]
ಕೇಳುವವರಿಲ್ಲ ನಗರದ ಕ್ಲಾಕ್ ಟವರ್ ಗೋಳು: ಅವ್ಯವಸ್ಥೆಯ ವಿರುದ್ದ ಧ್ವನಿ ಎತ್ತಿದ ಜಿಲ್ಲಾ ನಾಗರಿಕ ಸಮಿತಿ

ಉಡುಪಿ: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಪರಿಸರ ಅವ್ಯವಸ್ಥೆಯ ಆಗರವಾಗಿದ್ದು, ಕೂಡಲೇ ಸಮಸ್ಯೆಯನ್ನು ಸರಿಪಡಿಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ನಗರಸಭೆಯನ್ನು ಆಗ್ರಹಿಸಿದ್ದಾರೆ. ಗಡಿಯಾರ ಗೋಪುರದ ಬಳಿ ಅಳವಡಿಸಿದ್ದ ಸಾರ್ವಜನಿಕ ಕುಡಿಯುವ ನೀರಿನ ನಳ್ಳಿ ಹಾಳಾಗಿ ವರ್ಷಗಳು ಸಂದಿವೆ. ನೀರು ತಂಪಾಗಿಸುವ ಶೀತಲೀಕೃತ ಯಂತ್ರವು ಹಾಳಾಗಿ ತುಕ್ಕು ಹಿಡಿದಿದೆ. ಇದೀಗ ಈ ಕೊಠಡಿಯು ಕುಡುಕರ ಶೌಚಾಲಯವಾಗಿ ಮಾರ್ಪಟ್ಟಿದೆ. ಪ್ರಯಾಣಿಕರು, ಯಾತ್ರಾರ್ಥಿಗಳು, ಪ್ರವಾಸಿಗರು ಕುಡಿಯುವ ನೀರಿಗಾಗಿ ಹುಡುಕಾಟ ನಡೆಸಬೇಕಾದ […]