ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಪ್ಯಾಕೇಜಿಂಗ್ ಮತ್ತು ಫಿನಿಷಿಂಗ್ ಹಾಗೂ ಸ್ಟಿಚ್ಚಿಂಗ್ ವಿಭಾಗದಲ್ಲಿ ಕೆಲಸಕ್ಕೆ ಮಹಿಳಾ ಸದಸ್ಯರು ಬೇಕಾಗಿದ್ದು ಯಾವುದೇ ಅನುಭವದ ಇಲ್ಲದ ಆಸಕ್ತ ಸದಸ್ಯರಿಗೆ ಮುಕ್ತ ಅವಕಾಶವಿದೆ. ದೂರದ ಊರಿಂದ ಬರುವ ಸದಸ್ಯರಿಗೆ ಉಚಿತ ವಸತಿ ಸೌಲಭ್ಯವಿದೆ.ಆಕರ್ಷಕ ವೇತನ ಹಾಗೂ ಪಿ.ಎಫ್ ಮತ್ತು ಇ ಎಸ್ ಐ ಸೌಲಭ್ಯಗಳನ್ನು ನೀಡಲಾಗುವುದು. (ವೇತನ ಶ್ರೇಣಿ 6000ರಿಂದ 9500ರ ವರೆಗೆ ನೀಡಲಾಗುವುದು) ನೇರವಾಗಿ ಭೇಟಿ ಕೊಡಿ. ಸಿರಿ ಗ್ರಾಮೋದ್ಯೋಗ ಸಂಸ್ಥೆ, ಟಿ. ಬಿ ಕ್ರಾಸ್ ಹತ್ತಿರ ಉಜಿರೆ – […]

ಮರವಂತೆ ಮೀನುಗಾರರ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಮರವಂತೆ ಮೀನುಗಾರರ ಸಹಕಾರ ಸಂಘ ನಿ., ಮರವಂತೆ ಬೈಂದೂರು, ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು. ಸಮಾರಂಭವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಂಸ್ಥೆಯ ಅಧ್ಯಕ್ಷ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

ಕರಾವಳಿ ಬೈಪಾಸ್ ರಾಷ್ಟ್ರೀಯ ಹೆದ್ದಾರಿ ದೀಪಗಳು ಬೆಳಗಲು ಪ್ರಾರಂಭ

ಉಡುಪಿ: ಕರಾವಳಿ ಬೈಪಾಸ್ ರಾಷ್ಟ್ರೀಯ ಹೆದ್ದಾರಿಯ ಬೀದಿ ದೀಪಗಳು ಕೊನೆಗೂ ಬೆಳಗಲು ಪ್ರಾರಂಭವಾಗಿದೆ. ಹಲವಾರು ಮನವಿ ಮತ್ತು ಮಾಧ್ಯಮ ವರದಿಗಳ ಬಳಿಕ ರಾಷ್ಟ್ರೀಯ ಹೆದ್ದಾರಿಯ ಬೀದಿ ದೀಪಗಳು ಬೆಳಗಲು ಪ್ರಾರಂಭಿಸಿರುವುದು ನಾಗರಿಕರಲ್ಲಿ ಹರ್ಷವನ್ನುಂಟು ಮಾಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಗುರುವಾರ ರಾತ್ರಿಯಂದು ದೀಪಗಳ ಸಂಪರ್ಕವನ್ನು ಸ್ಥಾಪಿಸಿದೆ. ಹೆದ್ದಾರಿ ದೀಪಗಳಿಗೆ ಸಂಪರ್ಕವನ್ನು ನೀಡಿ ವ್ಯವಸ್ಥೆ ಕಲ್ಪಿಸುವಂತೆ ಉಡುಪಿ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ಹೆದ್ದಾರಿ ಪ್ರಾಧಿಕಾರವು […]

ಬಿ.ಆರ್.ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ತೆಕ್ಕೆಗೆ

ಉಡುಪಿ: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯ ಸರಕಾರ ತನ್ನ ವಶಕ್ಕೆ ಪಡೆದು ಅಧಿಕೃತ ಆದೇಶವನ್ನು ಹೊರಡಿಸಿದೆ. ಸಚಿವ ಸಂಪುಟ ಸಭೆಯ ನಿರ್ಣಯದಂತೆ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇದರ ನಿರ್ವಹಣೆಯನ್ನು ಸರಕಾರದ ಸುಪರ್ದಿಗೆ ಪಡೆಯಲಾಗಿದೆ. ಉಡುಪಿ ಜಿಲ್ಲೆ ಕಸಬಾ ತಾಲೂಕಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಸುಮಾರು 4 ಎಕರೆ ಜಮೀನನ್ನು ಕೂಡಾ […]

ಉಡುಪಿ ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆ ಪ್ರಕರಣ: ಎರಡು ಆಡಿಯೋ ಕ್ಲಿಪ್ ಬಹಿರಂಗ

ಉಡುಪಿ: ಎಸ್.ಎಸ್.ಎಲ್.ಸಿ ಪ್ರಶ್ನೆ ಪತ್ರಿಕೆ ಕೋಣೆಯ ಭದ್ರತಾ ಕರ್ತವ್ಯದಲ್ಲಿ ನಿರತರಾಗಿದ್ದಾಗಲೇ ತನ್ನ ಸೇವಾ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್ ಅವರ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರಾಜೇಶ್ ಕುಂದರ್ ತಮ್ಮ ಸಹೋದ್ಯೋಗಿಗಳ ಕಿರುಕುಳದ ವಿರುದ್ದ ದೂರು ನೀಡಿದ್ದಾರೆನ್ನಲಾಗುವ ಆಡಿಯೋ ಕ್ಲಿಪ್ ಗಳು ಪೋಲೀಸರ ವಶವಾಗಿದೆ. ಮೊದಲನೆ ಆಡಿಯೋದಲ್ಲಿ ಹಿಜಾಬ್ ಗಲಾಟೆ ಸಂದರ್ಭ ಗಂಗೊಳ್ಳಿ ಠಾಣೆಗೆ ಕ್ಷಿಪ್ರ ದಾಳಿ ಪಡೆ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ರಾಜೇಶ್ ಕೈಕೆಳಗೆ ಇಬ್ಬರು ಸಿಬ್ಬಂದಿ […]