ಗ್ರಾಮ ಪಂಚಾಯತ್ ಉಪ ಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ: ಉಡುಪಿ ತಾಲೂಕು ಅಲೆವೂರು ಗ್ರಾಮ ಪಂಚಾಯತ್ ಉಪ ಚುನಾವಣೆಗೆ ಸಂಬಂಧಿಸಿದಂತೆ, ಮೇ 20 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಚುನಾವಣೆ ನಡೆಯುವ ದಿನದಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

ಮಹನೀಯರ ತತ್ವಾದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ

ಉಡುಪಿ: ಸಾಧಕರು, ದಾರ್ಶನಿಕರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ತಿಳಿಸಿದರು. ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಭಗೀರಥ ಮಹರ್ಷಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಹೇಮರೆಡ್ಡಿ ಮಲ್ಲಮ್ಮ ಅಚಲವಾದ ವಿಶ್ವಾಸ, ತಾಳ್ಮೆಯಿಂದ ತಮ್ಮ ಕುಟುಂಬದವರ ಮನಸ್ಸನ್ನು ಗೆಲ್ಲುವುದರ ಜೊತೆಗೆ ಅವರ ಮನ ಪರಿವರ್ತನೆ ಮಾಡುವುದರೊಂದಿಗೆ ಸಮಾಜದಲ್ಲಿ […]

ಮೇ 28 ರಂದು ಅಮೃತ ಭಾರತಿಗೆ ಕನ್ನಡದ ಆರತಿ: ಸ್ವಾತಂತ್ರ್ಯ ಸಂಗ್ರಾಮದ ಮೆಲುಕು

ಉಡುಪಿ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲುಕು ಹಾಕುವ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮವು ಆಂದೋಲನದ ರೀತಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಮಂಗಳವಾರದಂದು ನಗರದ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ 75 ನೇ ಸ್ವಾತಂತ್ರ್ಯ ಸಂಗ್ರಾಮದ ಅಂಗವಾಗಿ ನಡೆಯಲಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]