ತಂಡದ ನಾಲ್ವರಿಗೆ ವಿಧಾನ ಪರಿಷತ್ ಟಿಕೆಟ್! ವಿಜಯೇಂದ್ರ ಅವರಿಗೆ ಬೇರೆ ಅವಕಾಶ: ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ಇಂದು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನನ್ನ ತಂಡದ ನಾಲ್ಕು ಜನರಿಗೆ‌ ಟಿಕೆಟ್‌ ಸಿಕ್ಕಿದ್ದು‌,‌ ಬಿ.‌ವೈ.ವಿಜಯೇಂದ್ರ ಅವರಿಗೆ ಬೇರೆ ಬೇರೆ ಅವಕಾಶಗಳು ಇವೆ ಎಂದು ಜಗನ್ನಾಥ ಭವನದಲ್ಲಿ ಹೇಳಿದರು. ಕೋರ್ ಕಮಿಟಿ ಸಭೆಯಲ್ಲಿ ವಿಜಯೇಂದ್ರ ಅವರ ಹೆಸರನ್ನು ಸರ್ವ ಸಮ್ಮತಿಯಿಂದ ಶಿಫಾರಸು ಮಾಡಿದ್ದೆವು. ಆದರೆ ಅವರಿಗೆ ಬೇರೆ ಬೇರೆ ಅವಕಾಶಗಳು ಇವೆ. ಹಾಗಾಗಿ ಎಲ್ಲ ಲೆಕ್ಕಾಚಾರಗಳನ್ನು ಹಾಕಿಯೇ […]

ಶಾಲಾ ಪಠ್ಯ ಪುಸ್ತಕಗಳ ಕೇಸರೀಕರಣ ವಿವಾದ: ಮಕ್ಕಳಿಗೆ ‘ನೈಜ ಇತಿಹಾಸ’ ಕಲಿಸುತ್ತೇವೆ ಎಂದ ಶಿಕ್ಷಣ ಸಚಿವ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳ ವಿವಾದಾತ್ಮಕ ಪರಿಷ್ಕರಣೆ ಕುರಿತು ಮೌನ ಮುರಿದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ “ನೈಜ” ಇತಿಹಾಸವನ್ನು ಕಲಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಶಿಕ್ಷಣವನ್ನು ಕೇಸರಿಕರಣಗೊಳಿಸುವ ಆರೋಪವನ್ನು ತಳ್ಳಿಹಾಕಿದ ಅವರು, “ಕೆಲವು ಬುದ್ಧಿಜೀವಿಗಳು ಮತ್ತು ರಾಜಕಾರಣಿಗಳು ಪರಿಷ್ಕೃತ ಪಠ್ಯಪುಸ್ತಕಗಳನ್ನು ನೋಡದೆಯೆ ಜಾತಿ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ. ಬರಗೂರು ರಾಮಚಂದ್ರಪ್ಪ ನೇತೃತ್ವದ ಹಿಂದಿನ ಸಮಿತಿಯು ಪರಿಷ್ಕರಿಸಿದ ಪಠ್ಯಪುಸ್ತಕಗಳು ಸುಳ್ಳು ಮತ್ತು ತಪ್ಪು […]

ವಿಧಾನಪರಿಷತ್‌ ಚುನಾವಣೆಯಲ್ಲಿ ಕ್ರೈಸ್ತರ ಅವಗಣನೆ ಸಮುದಾಯಕ್ಕೆ ಮಾಡಿದ ಅಪಮಾನ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಡಿಯೋನ್‌ ಡಿʼಸೋಜಾ

ಉಡುಪಿ: ವಿಧಾನಪರಿಷತ್‌ ಚುನಾವಣೆಯಲ್ಲಿ ಕ್ರೈಸ್ತ ಅಭ್ಯರ್ಥಿಗೆ ಅವಕಾಶ ನೀಡದಿರುವ ಕಾಂಗ್ರೆಸ್‌ ಪಕ್ಷದ ನಿಲುವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಡಿಯೋನ್‌ ಡಿʼಸೋಜಾ ಖಂಡಿಸಿದ್ದು ಇದು ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಆರೋಪಿಸಿದ್ದಾರೆ. ಐವನ್ ಡಿಸೋಜಾ ಅವರಂತಹ ನಾಯಕರ ಹೆಚ್ಚಿನ ಪ್ರಾತಿನಿಧ್ಯ ಮತ್ತು ಪಕ್ಷದ ಬದ್ಧತೆಯನ್ನು ಕೆಪಿಸಿಸಿ ಪದೇ ಪದೇ ಕಡೆಗಣಿಸುತ್ತಿದೆ. ಕ್ರಿಶ್ಚಿಯನ್ನರನ್ನು ಇತ್ತೀಚಿನ ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಕೇಂದ್ರದವರೆಗಿನ ಚುನಾವಣೆಗಳಿಂದ ದೂರವಿರಿಸಿ ಅವರನ್ನು ದೃಢವಾದ ಮತ ಬ್ಯಾಂಕ್ ಎಂದು ಪರಿಗಣಿಸುವ ಕಾಂಗ್ರೆಸ್ ವಾಸ್ತವದಿಂದ ದೂರವಿದೆ. ಕ್ರಿಶ್ಚಿಯನ್ […]

ಸ್ವಾವಲಂಬನೆ, ಸ್ವ-ಉದ್ಯೋಗವೆ ನಿರುದ್ಯೋಗ ಸಮಸ್ಯೆಗಿರುವ ಪರಿಹಾರ: ಎಸ್. ಅಂಗಾರ

ಉಡುಪಿ: ದೇಶದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ಸ್ವ-ಉದ್ಯೋಗದ ಅವಶ್ಯಕತೆ ಇದೆ. ಜನರು ಸ್ವಾವಲಂಬಿಗಳಾಗಿ, ಆರ್ಥಿಕವಾಗಿ ಸಬಲರಾದಲ್ಲಿ ದೇಶದ ಆರ್ಥಿಕತೆ ಯಶಸ್ಸನ್ನು ಕಾಣುತ್ತದೆ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಸೋಮವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇಲಾಖೆ ಇವರ ಸಹಯೋಗದಲ್ಲಿ ನಡೆದ ಅಮೃತ ಸ್ವ- […]

ಕಡಿಯಾಳಿ ಕ್ಷೇತ್ರದಿಂದ ಸಮಾಜ ಸೇವೆಯೆ ದೇವರ ಸೇವೆ ಅಭಿಯಾನ

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಮೇ 26 ಗುರುವಾರದಂದು ಸಾಯಂಕಾಲ 5.00 ಗಂಟೆಗೆ ಉಡುಪಿ-ಕಲ್ಸಂಕ ಸರ್ಕಲ್ ನಲ್ಲಿ ದೇವಳದ ಪ್ರಚಾರದ ಕೊಡೆ ಬಿಡುಗಡೆ ಕಾರ್ಯಕ್ರಮ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ. ಉಡುಪಿಯ ಖ್ಯಾತ ಸಮಾಜಸೇವಕರಾದ ಡಾ ಪಿ.ವಿ. ಭಂಡಾರಿ, ರವಿ ಕಟಪಾಡಿ, ವಿಶು ಕುಮಾರ್ ಶೆಟ್ಟಿ ಅಂಬಲಪಾಡಿ, ನೀತಾ ಪ್ರಭು ಕಾಪು, ನಿತ್ಯಾನಂದ ಒಳಕಾಡು, ಶ್ರೀಮತಿ ಪೃಥ್ವಿ ಪೈ, ಈಶ್ವರ್ ಮಲ್ಪೆ ಮುಂತಾದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ದೇವಳದ ಬ್ರಹ್ಮ ಕಲಶೋತ್ಸವದ […]