ಸಾಮಾಜಿಕ ಜಾಲತಾಣದಲ್ಲಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆ: ದೂರು ದಾಖಲಿಸಿದ ಕಾಪು ಯುವ ಮೋರ್ಚಾ

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಮಾಡಿರುವ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಪು ಯುವ ಮೋರ್ಚಾ ವತಿಯಿಂದ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ಹಾಗೂ ಕಾಪು ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು. ಪ್ರಚೋದನಕಾರಿ ಪೋಸ್ಟ್ ಮೂಲಕ ಕೋಮು ಗಲಭೆಯನ್ನು ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶ ಹೊಂದಿರುವ ಮತೀಯವಾದಿಗಳ […]

ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಂದ ಮ್ಯಾಂಗ್ರೋವ್ ಗಿಡ ನೆಡುವ ಕಾರ್ಯಕ್ರಮ

ಉಡುಪಿ: ಜೂನ್ 05 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಬ್ರಹ್ಮಾವರ ಅರಣ್ಯ ಇಲಾಖೆಯ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಕೋಡಿ ನದಿ ಪ್ರದೇಶದಲ್ಲಿ ಸುಮಾರು 11 ಸಾವಿರ ಮ್ಯಾಂಗ್ರೋವ್ ಗಿಡಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು. ಅವಕಾಶ ಮಾಡಿ ಕೊಟ್ಟ ಕಾಲೇಜಿನ ಪ್ರಾಶುಂಪಾಲರು, ಅರಣ್ಯ ಅಧಿಕಾರಿಗಳು, ಭಾಗವಹಿಸಿದ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳನ್ನು ರಾಜ್ಯ ಮುಕ್ತ ಆಯುಕ್ತರು ಮತ್ತು ಜಿಲ್ಲಾ ಮುಖ್ಯ ಆಯುಕ್ತರು ಅಭಿನಂದಿಸಿದರು.

ವಿದ್ಯಾರ್ಥಿಗಳ ಸಾಧನೆಯೆ ವ್ಯಕ್ತಿಗಳ ಪ್ರಶ್ನೆಗಳಿಗೆ ಉತ್ತರವಾಗಬೇಕು: ರಘುಪತಿ ಭಟ್

ಉಡುಪಿ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಬೇಕು, ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು, ಅವರ ಸಾಧನೆಯು ಎಲ್ಲ ವ್ಯಕ್ತಿಗಳ ಪ್ರಶ್ನೆಗಳಿಗೆ ಉತ್ತರವಾಗಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಯಶಪಾಲ್ ಸುವರ್ಣ, ಸಾಪಲ್ಯ ಟ್ರಸ್ಟ್, ಆಭರಣ ಜ್ಯುವೆಲ್ಲರ್ಸ್, ಸಾಯಿರಾಂ ಟೆಕ್ಸ್ ಟೈಲ್ಸ್ ಗಳ ಪ್ರಾಯೋಜಕತ್ವದ ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅವರು ಮಾತನಾಡಿದರು. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಲವು ಅಡೆತಡೆಗಳನ್ನು ಮೀರಿ ನಿಂತು, ಇಂದು ಖಾಸಗಿ ಶಾಲೆಗಳಿಗೆ […]

ಭದೇರ್ವಾ ಪಟ್ಟಣದ ವಾಸುಕಿ ನಾಗ ದೇವಸ್ಥಾನ ವಿಧ್ವಂಸ ಪ್ರಕರಣ: ಜಮ್ಮುವಿನಲ್ಲಿ ಬೃಹತ್ ಪ್ರತಿಭಟನೆ

ಜಮ್ಮು: ದೋಡಾ ಜಿಲ್ಲೆಯ ಭದೇರ್ವಾ ಪಟ್ಟಣದ ವಾಸುಕಿ ನಾಗ ದೇವಾಲಯವನ್ನು ಅಪವಿತ್ರಗೊಳಿಸಿದ ಒಂದು ದಿನದ ನಂತರ ಸೋಮವಾರ ಜಮ್ಮುವಿನಲ್ಲಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ. ಹಿಂದೂ ಸಮುದಾಯಕ್ಕೆ ಸೇರಿದ ಪ್ರತಿಭಟನಾಕಾರರು “ಹಿಂದೂ ದೇವಾಲಯ ಧ್ವಂಸಗೊಳಿಸುವುದನ್ನು ನಿಲ್ಲಿಸಿ” ಎಂದು ಬರೆಯಲಾದ ಫಲಕವನ್ನು ಹಿಡಿದುಕೊಂಡು ಧರಣಿ ನಡೆಸಿದ್ದಾರೆ. ಧರ್ಮಾರ್ಥ ಟ್ರಸ್ಟ್‌ನ ಒಡೆತನದಲ್ಲಿರುವ ಭದೇರ್ವಾ ಪಟ್ಟಣದ ಕೈಲಾಸ ಕುಂಡದ ವಾಸುಕಿ ನಾಗ ದೇಗುಲದಲ್ಲಿ ಶ್ರೀ ವಾಸುಕಿ ನಾಗರಾಜ ಮಹಾರಾಜರ ವಿಗ್ರಹಗಳನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಪಟ್ಟಣದ ಹಲವೆಡೆ ರಸ್ತೆ […]

ವಿಶ್ವ ಪರಿಸರ ದಿನ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಅನಾಥಾಶ್ರಮಕ್ಕೆ ತೆಂಗಿನ ಸಸಿ ವಿತರಣೆ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್, ಉಡುಪಿ ಟೆಂಪಲ್ ಸಿಟಿ ಲೀಜನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 04 ಶನಿವಾರದಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಲ್ಯಾಣಪುರದ “ಸ್ಪಂದನ ” ವಿಕಲ ಚೇತನರ ಅನಾಥಾಶ್ರಮಕ್ಕೆ ತೆಂಗಿನ ಸಸಿಗಳ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಟೆಂಪಲ್ ಸಿಟಿ ಲೀಜನ್ ನ ಅಧ್ಯಕ್ಷ ಜಗದೀಶ ಕೆಮ್ಮಣ್ಣು, ರಾಷ್ಟ್ರೀಯ ಅಧಿಕಾರಿ ಚಿತ್ರ ಕುಮಾರ್, ವಿಜಯ್ ಕುಮಾರ್ ಉದ್ಯಾವರ, ಕಾರ್ಯದರ್ಶಿ ಸಂತೋಷ್ ಕುಮಾರ್, ಖಜಾಂಚಿ ರಾಜೇಶ್ ಆಚಾರ್ಯ, ಸರ್ವ ಸದಸ್ಯರು ಹಾಗೂ ಅನಾಥಾಶ್ರಮದ ಮುಖ್ಯಸ್ಥರು ಮತ್ತು […]