ಜಲಜೀವನ್ ಮಿಷನ್ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಜಿ.ಪಂ. ಸಿಇಒ ಪ್ರಸನ್ನ 

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಜಿಲ್ಲೆಯಲ್ಲಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ಶುದ್ಧ ನಳ್ಳಿ ನೀರು ಸಂಪರ್ಕ ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರ ಜಿ.ಪಂ. ಕಚೇರಿಯಲ್ಲಿ ನಡೆದ, ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 155 ಗ್ರಾಮ […]

ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ ಬೇಕೆ? ಹಾಗಾದರೆ ಹಲೋ ಕಂದಾಯ ಸಚಿವರೇ ಸಹಾಯವಾಣಿ 155245 ಗೆ ಕರೆ ಮಾಡಿ

ಉಡುಪಿ: ಕುಟುಂಬದ ವಾರ್ಷಿಕ ಆದಾಯ 32,000 ರೂ. ಕ್ಕಿಂತ ಕಡಿಮೆ ಇರುವ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಚೇಧಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ಕೋರಿಕೆ ಸಲ್ಲಿಸಬಹುದಾಗಿದ್ದು, ಕಂದಾಯ ಇಲಾಖೆಯ ವಿನೂತನ ಯೋಜನೆಯಾದ ಹಲೋ ಕಂದಾಯ ಸಚಿವರೇ ಸಹಾಯವಾಣಿ ಸಂಖ್ಯೆ 155245 ಗೆ ಉಚಿತವಾಗಿ ಕರೆ ಮಾಡುವ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿ ಸೌಲಭ್ಯವನ್ನು ಪಡೆಯಬಹುದು. ಪಿಂಚಣಿ ಪಡೆಯಲು ಆಧಾರ್ ಕಾರ್ಡ್ ನೋಂದಾವಣೆ ಕಡ್ಡಾಯವಾಗಿದೆ. ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 […]

ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮತ್ತು ಶ್ರೀ ಶಾರದಾ ಕಾಲೇಜು ನಡುವೆ ಕೌಶಲ್ಯಾಭಿವೃದ್ಧಿ ತರಬೇತಿ ಒಪ್ಪಂದ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು, ಬಸ್ರೂರಿನ ಶ್ರೀ ಶಾರದಾ ಕಾಲೇಜು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್, ಫೈನಾನ್ಶಿಯಲ್ ಮತ್ತು ಇನ್ಶುರೆನ್ಸ್ ಕ್ಷೇತ್ರದಲ್ಲಿ ಬಹುಬೇಡಿಕೆಯ ಬ್ಯುಸಿನೆಸ್ ಕರೆಸ್ಪಾಂಡೆನ್ಸ್ ಆಂಡ್ ಬ್ಯುಸಿನೆಸ್ ಫೆಸಿಲಿಟೆಟರ್ ತರಬೇತಿಗಳನ್ನು ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಂಪೂರ್ಣ ಉಚಿತವಾಗಿ ನೀಡಲು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಉನ್ನತಿ ಸಂಸ್ಥೆಯು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿರುವ ಶ್ರೀ ಶಾರದಾ ಕಾಲೇಜಿನ ಬಿ.ಕಾಂ […]

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯ ಡಾ. ಬ್ರಯಾಲ್ ಡಿಸೋಜಾ ಅವರಿಗೆ ಪಿಎಚ್.ಡಿ ಪದವಿ

ಮಣಿಪಾಲ: ಡಾ. ಬ್ರಯಾಲ್ ಡಿಸೋಜಾ ಸಹಾಯಕ ಪ್ರಾಧ್ಯಾಪಕರು, ಸಾರ್ವಜನಿಕ ಆರೋಗ್ಯ ವಿಭಾಗ, ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ (ಪಿ ಎಸ್ ಪಿ ಎಚ್) ಮತ್ತು ಗುಣಮಟ್ಟ ನಿರ್ವಹಣೆಯ ಪ್ರತಿನಿಧಿ (ಕ್ವಾಲಿಟಿ ಮ್ಯಾನೇಜ್ ಮೆಂಟ್ ರೆಪ್ರೆಸೆಂಟೇಟಿವ್) ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರು ತಮ್ಮ ರೋಗಿಗಳ ಫಲಿತಾಂಶದ ಮೇಲೆ ಮಾಡ್ಯುಲರ್ ಶೈಕ್ಷಣಿಕ ಹಸ್ತಕ್ಷೇಪದ ಪರಿಣಾಮಕಾರಿತ್ವದ ‘ಮೆಂಟೆನೆನ್ಸ್ ಹಿಮೋಡಯಾಲಿಸಿಸ್ ಪೇಷಂಟ್ಸ್ ಆಫ್ ಕೋಸ್ಟಲ್ ಕರ್ನಾಟಕ – ಎ ರಾಂಡೋಮೈಸ್ಡ್ ಕಂಟ್ರೋಲ್ ಟ್ರಯಲ್’ ವಿಷಯದ ಕುರಿತು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ […]

ಬಿಜೆಪಿಯ ‘ಬಿ’ ಟೀಂ ಕಾಂಗ್ರೆಸ್: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರು ಕಾಂಗ್ರೆಸ್ ಗೆ ಮತ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ” ಶ್ರೀನಿವಾಸಗೌಡ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಹೇಳಿದ್ದೆ. ಎಸ್‌ಆರ್‌ ಶ್ರೀನಿವಾಸ್‌ ಕೂಡ ಜೆಡಿಎಸ್‌ಗೆ ಮತ ಹಾಕಿಲ್ಲ. ಕಾಂಗ್ರೆಸ್ ಇಂದು ತನ್ನ ನಿಜವಾದ ಮುಖವನ್ನು ತೋರಿಸಿದೆ. ಬಿಜೆಪಿಯ ‘ಬಿ’ ಟೀಂ ಕಾಂಗ್ರೆಸ್. ದೇಶದಲ್ಲಿ ಬಿಜೆಪಿ ಬೆಳೆಯಲು ಅವರೇ ಮುಖ್ಯ ಕಾರಣಕರ್ತರು” ಎಂದು ಮಾಧ್ಯಮಗಳೆದುರು ಹೇಳಿಕೊಂಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಈ ಬಗ್ಗೆ […]