ಜಮ್ಮು ಮತ್ತು ಕಾಶ್ಮೀರ: ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಮೂವರು ಉಗ್ರರ ಹತ್ಯೆ

ಜಮ್ಮು: ಸೋಮವಾರ ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಏಳು ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ಕೌಂಟರ್ನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ರಾತ್ರಿಯ ಕಾರ್ಯಾಚರಣೆಯಲ್ಲಿ ಸತ್ತವರ ಸಂಖ್ಯೆ 4 ಕ್ಕೆ ತಲುಪಿದೆ. ಭಾನುವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದರು. ಪುಲ್ವಾಮಾ ಜಿಲ್ಲೆಯಲ್ಲಿ ನಡೆದ […]
ಕ್ಯಾನ್ಸರ್ ಪೀಡಿತನ ಚಿಕಿತ್ಸೆಗೆ ಧನಸಹಾಯ

ಉಡುಪಿ: ಇಲ್ಲಿನ ಬನ್ನಂಜೆಯ ಶೈಲೇಶ್ ಎಂಬವರು ರಕ್ತ ಕ್ಯಾನ್ಸರ್ ಪೀಡಿತರಾಗಿದ್ದು, ಇವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅವಶ್ಯಕತೆ ಇದ್ದು, ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದ ಇವರಿಗೆ, ಬನ್ನಂಜೆಯ ಲಕ್ಷ್ಮೀನಾರಾಯಣ ಚಂಡೆ ವಾದ್ಯ ಬಳಗದ ಸಹಯೋಗದೊಂದಿಗೆ, ವಾಸುದೇವ ಬನ್ನಂಜೆ ಇವರ ನೇತೃತ್ವದಲ್ಲಿ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ದಾನಿಗಳಿಂದ ಪಡೆದ ಹಣವನ್ನು ಹಸ್ತಾಂತರಿಸಲಾಯಿತು. ಕಚ್ಚೂರು ಮಾಲ್ತಿದೇವಿ ಹಾಗೂ ಬಬ್ಬು ಸ್ವಾಮಿ ಮೂಲ ಕ್ಷೇತ್ರ ಧರ್ಮಶ್ರೀಯಾದ ಗೋಕುಲದಾಸ್ ಬಾರಕೂರು ಹಾಗೂ ಕಡಿಯಾಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ […]