ಟೈಲರ್ ಕನ್ಹಯ್ಯಾ ಲಾಲ್ ಆರೋಪಿಗಳಿಗೆ ಮರಣ ದಂಡನೆಯೇ ಸೂಕ್ತ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್

ಉಡುಪಿ: ನೂಪುರ್ ಶರ್ಮಾ ಹೇಳಿಕೆ ಪರವಾಗಿ ಪೋಸ್ಟ್ ಮಾಡಿದನ್ನೆ ನೆಪವಾಗಿಟ್ಟುಕೊಂಡು ರಾಜಸ್ಥಾನದ ಉದಯಪುರದ ಹಿಂದೂ ಟೈಲರ್ ಕನ್ಹಯ್ಯ ಲಾಲ್ ನನ್ನು ಮತಾಂಧ ಶಕ್ತಿಗಳು ತಾಲಿಬಾನ್ ಮಾದರಿಯಲ್ಲಿ ಹತ್ಯೆ ಮಾಡಿರುವ ಘಟನೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಉಗ್ರವಾಗಿ ಖಂಡಿಸಿದ್ದಾರೆ. ರಾಜಸ್ಥಾನದ ಈ ಘಟನೆ ಹೇಯ ಕೃತ್ಯವಾಗಿದ್ದು, ಮಾನವೀಯ ಸಮಾಜ ಕ್ಷಮಿಸಲಾರದ ಘಟನೆಯಾಗಿದೆ. ತಾಲಿಬಾನ್ ಮಾದರಿಯಲ್ಲಿ ಹತ್ಯೆಯ ಚಿತ್ರಣ ಮಾಡಿ ದೇಶದಲ್ಲಿ ಭಯದ ವಾತಾವರಣ ಮೂಡಿಸಲು ಕೆಲ ಶಕ್ತಿಗಳು ಪ್ರಯತ್ನ ಮಾಡುತ್ತಿದೆ. ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ […]

ವಿವಿಧ ನಿಗಮಗಳಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

  ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಹಾಗೂ ಸಾಂಪ್ರದಾಯಿಕ /ಕುಶಲಕರ್ಮಿ ವೃತ್ತಿದಾರರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸುವಿಧಾ ತಂತ್ರಾಂಶ https://suvidha.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ 2ಎ ರಲ್ಲಿನ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದವರ ಕುಲಕಸುಬು / ಸಾಂಪ್ರದಾಯಿಕ ವೃತ್ತಿಗಳಾದ ದೋಭಿ ಘಟಕ, ಡ್ರೈ ಕ್ಲೀನಿಂಗ್ […]

ಉದಯ್‌ಪುರ ಟೈಲರ್ ಹತ್ಯೆ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಲು ಗೃಹ ಸಚಿವಾಲಯದ ನಿರ್ದೇಶನ

ಉದಯಪುರ: ಉದಯಪುರದಲ್ಲಿ ಟೈಲರ್ ಆಗಿದ್ದ ಕನ್ಹಯ್ಯಾ ಲಾಲ್ ನ ಭೀಕರ ಹತ್ಯೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಆಗಿದ್ದ ಕನ್ಹಯ್ಯಾ ಲಾಲ್ ನೂಪುರ್ ಶರ್ಮಾರ ವಿವಾದಾತ್ಮಕ ಹೇಳಿಕೆಗಳನ್ನು ಬೆಂಬಲಿಸಿದ್ದಕ್ಕಾಗಿ ಇಬ್ಬರು ಮುಸ್ಲಿಂ ವ್ಯಕ್ತಿಗಳು ಮಂಗಳವಾರದಂದು ಅಂಗಡಿಯಲ್ಲಿದ್ದ ಕನ್ಹಯ್ಯಾನ ಶಿರಚ್ಛೇದ ಮಾಡಿದ್ದಲ್ಲದೆ ಈ ಬಗ್ಗೆ ವೀಡಿಯೋ ಮಾದಿ ಹರಿಬಿಟ್ಟು, ದೇಶದ ಪ್ರಧಾನಿ ಮೋದಿಗೂ ಇದೇ ಗತಿ ಕಾಣಿಸುವುದಾಗಿ ಬೆದರಿಕೆ ಹಾಕಿದ್ದಾರೆ. ರಿಯಾಜ್ ಅಖ್ತರ್ ಮತ್ತು ಘೋಸ್ ಮೊಹಮ್ಮದ್ ತಮ್ಮ ಭೀಬತ್ಸ ಕೃತ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ […]

50 ವರ್ಷಗಳ ನಂತರ ದಂಪತಿಯನ್ನು ಮತ್ತೆ ಒಂದಾಗಿಸಿದ ಲೋಕ ಅದಾಲತ್: ಒಂದೇ ದಿನದಲ್ಲಿ 7.65 ಲಕ್ಷ ಪ್ರಕರಣಗಳ ಇತ್ಯರ್ಥ

ಬೆಂಗಳೂರು: ಇತ್ತೀಚಿಗೆ ಆಯೋಜಿಸಲಾದ ಲೋಕ ಅದಾಲತ್‌ಗಳಲ್ಲಿ 50 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಲಾಗಿದೆ. ಕಲಘಟಗಿಯ ಸಿವಿಲ್ ನ್ಯಾಯಾಧೀಶರ ಹಿರಿಯ ವಿಭಾಗದ ಲೋಕ ಅದಾಲತ್‌ನಲ್ಲಿ 80 ವರ್ಷದ ಪತ್ನಿ ಮತ್ತು 85 ವರ್ಷದ ಪತಿ ರಾಜಿ ಮಾಡಿಕೊಂಡಿದ್ದಾರೆ. ಸಂಧಾನದ ನಂತರ, ಎರಡೂ ಪಕ್ಷಗಳು ಪುನರ್ಮಿಲನದ ಮೂಲಕ ವಿಷಯವನ್ನು ಇತ್ಯರ್ಥಪಡಿಸಿದವು. ಒಟ್ಟಾರೆಯಾಗಿ 1,128 ವೈವಾಹಿಕ ವಿವಾದಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಸಮನ್ವಯದ ಕಾರಣದಿಂದಾಗಿ 107 ಜೋಡಿಗಳು ಮತ್ತೆ ಒಂದಾಗಿದ್ದಾವೆ ಎಂದು ರಾಷ್ಟ್ರೀಯ ಲೋಕ ಅದಾಲತ್ ನ ಮುಖ್ಯ ನ್ಯಾಯಾಧೀಶ […]

ಯು23 ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್ ನಲ್ಲಿ ಕಂಚು ಗೆದ್ದ ದೀಪಕ್ ಪುನಿಯಾ

ಕಿರ್ಗಿಸ್ತಾನ್‌ನ ಬಿಶ್ಕೆಕ್‌ನಲ್ಲಿ ನಡೆದ ಯು23 ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್ ನಲ್ಲಿ 86 ಕೆಜಿ ಫ್ರೀಸ್ಟೈಲ್ ತೂಕ ವಿಭಾಗದಲ್ಲಿ ಮಕ್ಸತ್ ಸತಿಬಾಲ್ಡಿಯನ್ನು ಸೋಲಿಸಿದ ಟೋಕಿಯೊ ಒಲಿಂಪಿಕ್ ಆಟಗಾರ ದೀಪಕ್ ಪುನಿಯಾ ಕಂಚಿನ ಪದಕವನ್ನು ಗೆದ್ದಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತರಿಂದ ಭಾರತ ತಂಡವು ಉತ್ತಮವಾದ ಪಂದ್ಯವನ್ನು ನಿರೀಕ್ಷಿಸುತ್ತಿದ್ದುದರಿಂದ ಪಂದ್ಯಾವಳಿಯಲ್ಲಿ ಗೆಲುವಿನ ಹೊರತಾಗಿಯೂ ಈ ಫಲಿತಾಂಶವು ಪ್ರಭಾವ ಬೀರುವಲ್ಲಿ ವಿಫಲವಾಗಿದೆ. 23 ವರ್ಷದ ಪುನಿಯಾ ಚಿನ್ನದ ಪದಕ ವಿಜೇತ ಉಜ್ಬೇಕಿಸ್ತಾನ್‌ನ ಅಜಿಜ್ಬೆಕ್ ಫೈಜುಲ್ಲಾವ್ ಮತ್ತು ಕಿರ್ಗಿಸ್ತಾನ್‌ನ ನೂರ್ತಿಲೆಕ್ ಕರಿಪ್‌ಬಾಯೆವ್ […]