ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಇವರಿಗೆ ಮುಖ್ಯಮಂತ್ರಿಗಳ ಪ್ರಶಸ್ತಿ

ಉಡುಪಿ: ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ 2021-22ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿಗಳ ಪ್ರಶಸ್ತಿ’ ಗೆ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಆಯ್ಕೆಯಾಗಿದ್ದು ಜುಲೈ 1 ರಂದು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇವರು ಪ್ರಸ್ತುತ ಮಂಗಳೂರಿನ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಎಸ್ ಟಿ ತೆರಿಗೆ ಸಂಗ್ರಹಣೆಯಲ್ಲಿ ನಿರ್ವಹಿಸಿದ ಕೆಲಸಗಳು, ತೆರಿಗೆ ಆಡಳಿತ, ತೆರಿಗೆ […]

ಆಗಸ್ಟ್ 12 ರಿಂದ 14 ರವರೆಗೆ ಜಿಲ್ಲಾಮಟ್ಟದ ಯೋಗಾಥಾನ್: 10000 ಜನರಿಗೆ ಏಕಕಾಲದಲ್ಲಿ ತರಬೇತಿ

ಉಡುಪಿ: ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಆಗಸ್ಟ್ 12, 13 ಮತ್ತು 14 ರಂದು ಯೋಗಾಥಾನ್ ಕಾರ್ಯಕ್ರಮವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ, ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುವ ಯೋಗಾಥಾನ್ ಕಾರ್ಯಕ್ರಮಕ್ಕೆ […]

ಬೆಳ್ಳಿ ಪರದೆ ಮೇಲೆ ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್

ಸುದ್ದಿ ನಿರೂಪಕಿ, ನಟಿ ಶೀತಲ್ ಶೆಟ್ಟಿ ಆಕ್ಷನ್ ಕಟ್ ಹೇಳಿರುವ ವಿಂಡೋ ಸೀಟ್ ಸಿನಿಮಾ ಬಿಡುಗಡೆ ಕಂಡಿದೆ. ಈ ಹಿಂದೆ ಕಿರುಚಿತ್ರ ನಿರ್ದೇಶಿಸಿದ್ದ ಶೀತಲ್‍ ಶೆಟ್ಟಿ ಈಗ ಕಥೆ ಹಾಗೂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವಿಂಡೋಸೀಟ್ ಎಂಬುದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಿದು. ಚಿತ್ರದ ತಾರಾಗಣಲ್ಲಿ ನಿರೂಪ್ ಭಂಡಾರಿ, ಸಂಜನಾ ಆನಂದ್, ಅಮೃತ ಅಯ್ಯಂಗಾರ್ ಮುಂತಾದವರಿದ್ದಾರೆ. ರಘು ಪಾತ್ರ ನಿರ್ವಹಿಸುತ್ತಿರುವ ನಿರೂಪ್, ಅಮೃತಾ ಅಯ್ಯಂಗಾರ್ ನ ಅಂಜಲಿ ಎಂಬ ಪಾತ್ರದ ಮಾಲೀಕತ್ವದ ಹೈ-ಎಂಡ್ ರೆಸ್ಟೋರೆಂಟ್‌ನಲ್ಲಿ ಹಾಡುವ ಒಂಟಿ […]

ಬನ್ನಾಡಿ ದಿ. ಪದ್ದು ಆಚಾರ್ ಸ್ಮರಣಾರ್ಥ ಉಚಿತ ನೋಟ್ಸ್ ಪುಸ್ತಕ, ಸಮವಸ್ತ್ರ ಹಾಗೂ ವಿಶೇಷ ಚೇತನರಿಗೆ ಸಹಾಯಧನ ವಿತರಣೆ

ಕುಂದಾಪುರ: ಬನ್ನಾಡಿ ದಿ.ಪದ್ದು ಆಚಾರ್ ಸ್ಮರಣಾರ್ಥ ಮಕ್ಕಳಾದ ಬಿ.ನಾರಾಯಣ ಆಚಾರ್(ಒ.ಎನ್.ಜಿ.ಸಿ ನಿವೃತ್ತ) ಮತ್ತು ಶ್ರೀದೇವಿ ಜ್ಯುವೆಲ್ಲರ್ಸ್ ಕೋಟ-ಸಾಲಿಗ್ರಾಮ ಮಾಲೀಕರಾದ ಸೀತಾರಾಮ ಆಚಾರ್ ಬನ್ನಾಡಿ ಇವರಿಂದ ಪರಮಹಂಸ ಖಾ.ಹಿ.ಪ್ರಾ ಶಾಲೆಯ ಎಲ್ಲ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ, ಲೇಖನ ಸಾಮಗ್ರಿಗಳು ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ ದಿ.ಪದ್ದು ಆಚಾರ್ ಸ್ಮರಣಾರ್ಥ ಆರೋಗ್ಯ ಉಪಕೇಂದ್ರ ವಡ್ಡರ್ಸೆ ಇವರಿಗೆ ಔಷಧಿ ಮತ್ತು ವಿಶೇಷ ಚೇತನರಿಗೆ ಧನಸಹಾಯ ವಿತರಣಾ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ಬನ್ನಾಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಲಯನ್ಸ್ ಕ್ಲಬ್ […]

ತ್ರಿಶಾ ಸಂಸ್ಥೆಯಲ್ಲಿ ಲೆಕ್ಕಪರಿಶೋಧಕರ ದಿನಾಚರಣೆ

ಉಡುಪಿ: ದೃಢ ವಿಶ್ವಾಸ ಮತ್ತು ಸತತ ಪರಿಶ್ರಮವಿದ್ದಾಗ ಮಾತ್ರ ಅತ್ಯಂತ ಗೌರವಯುತವಾದ ಸಿ.ಎ ಪದವಿ ಸಿಗಲು ಸಾಧ್ಯ. ಈ ಪದವಿಯನ್ನು ಪಡೆಯಲು ತರಬೇತಿ ಪಡೆಯುತ್ತಿರುವ ಪ್ರತಿಯೊಬ್ಬರೂ, ಶಕ್ತಿಯುತ ಮತ್ತು ಆರ್ಥಿಕವಾದ ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸಲು ಶ್ರಮಿಸಬೇಕು ಎಂದು ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಲೆಕ್ಕಪರಿಶೋಧಕ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ಇತ್ತೀಚೆಗೆ ತ್ರಿಶಾ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಲೆಕ್ಕಪರಿಶೋಧಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿ.ಎ ಕೇದರನಾಥ್ ಶೆಣೈ ಹಾಗೂ ಸಿ.ಎ ಆನಂದತೀರ್ಥ ಇವರು ತಾವು […]