ಸಮಾಜ ಕಲ್ಯಾಣ ಇಲಾಖೆ: ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಎಸ್.ಸಿ-ಎಸ್.ಟಿ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಸ್ಪೃಶ್ಯತಾ ನಿವಾರಣೆ, ಎಸ್.ಸಿ. ಹಾಗೂ ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಇಲಾಖಾ ಕಾರ್ಯಕ್ರಮ ಹಾಗೂ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ, ಕಾರ್ಯಾಗಾರ ಮತ್ತು ಬೀದಿ ನಾಟಕಗಳಂತಹ ಕಾರ್ಯಕ್ರಮಗಳನ್ನು ನಡೆಸಲು ಅರ್ಹ ಎಸ್.ಸಿ ಹಾಗೂ ಎಸ್.ಟಿ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಕಾರ್ಯಕ್ರಮಗಳನ್ನು ನಡೆಸಲು ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ, ಪ್ರಸ್ತುತ ಸಂಸ್ಥೆಯ ನೋಂದಣಿ ಚಾಲ್ತಿಯಲ್ಲಿರುವ, ಪರಿಶಿಷ್ಟ ಜಾತಿ, ಪಂಗಡದ ಜನರ ಕಲ್ಯಾಣಕ್ಕಾಗಿ ಸೇವೆ […]

ಖ್ಯಾತ ವಾಸ್ತು ತಜ್ಞ, ಚಂದ್ರಶೇಖರ್ ಗುರೂಜಿ ನಿರ್ಮಮ ಹತ್ಯೆ: 60 ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಿ ಹಂತಕರು ಪರಾರಿ

ಹುಬ್ಬಳ್ಳಿ: ಸರಳ ವಾಸ್ತು ಮೂಲಕ ಜನಪ್ರಿಯರಾಗಿದ್ದ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್‌ ಗುರೂಜಿ ಅವರನ್ನು ಹುಬ್ಬಳ್ಳಿಯ ಹೋಟೆಲ್‌ನಲ್ಲಿ ನಿರ್ಮಮವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಭಕ್ತರ ಸೋಗಿನಲ್ಲಿ ಬಂದ ಹಂತಕರು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈಗ ಕೃತ್ಯದ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಕೊಲೆಯ ಘೋರತೆ ಅನಾವರಣಗೊಂಡಿದೆ. ಇಬ್ಬರು ವ್ಯಕ್ತಿಗಳು ಹೋಟೆಲ್‌ ಲಾಬಿಯಲ್ಲಿ ಕುಳಿತಿದ್ದ ಚಂದ್ರಶೇಖರ್‌ ಗುರೂಜಿಯ ಆಶೀರ್ವಾದ ಪಡೆಯುವಂತೆ ಬಂದು, ಇದ್ದಕ್ಕಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿ […]

ಕಾರ್ಕಳ ಪುರಸಭೆ: ನಿರುದ್ಯೋಗಿ ಯುವಕ–ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಸಾಲ ಸೌಲಭ್ಯ

  ಉಡುಪಿ: ಕಾರ್ಕಳ ಪುರಸಭೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ ದಯಾಳ್ ಅಂತ್ಯೋದಯ ಯೋಜನೆಯ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ನಿರುದ್ಯೋಗಿ ಯುವಕ–ಯುವತಿಯರು ಸ್ವಯಂ-ಉದ್ಯೋಗ ಕೈಗೊಳ್ಳಲು ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿದರದಲ್ಲಿ 2 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುವುದು. ಮಹಿಳಾ ಉಳಿತಾಯ ಗುಂಪುಗಳ ರಚನೆ, ಈಗಾಗಲೇ ರಚಿಸಲಾಗಿರುವ ಮಹಿಳಾ ಉಳಿತಾಯ ಗುಂಪುಗಳಿಗೆ ಬ್ಯಾಂಕ್ ಲಿಂಕೇಜ್, ಉಳಿತಾಯ ಗುಂಪುಗಳ ಮಹಿಳೆಯರಿಗೆ ಆಹಾರ […]

ನಗರಸಭಾ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದೀನ್ ದಯಾಳ್ ಉಪಾಧ್ಯಾಯ ಸ್ಮರಣ ಪಾರಿತೋಷಕ ವಿತರಣೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿಅತ್ಯಧಿಕ ಅಂಕ ಗಳಿಸಿರುವ ಪ್ರತಿಭಾನ್ವಿತ 3 ವಿದ್ಯಾರ್ಥಿಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ಸ್ಮರಣ ಪಾರಿತೋಷಕ, ಶಾಲಾ ಮಟ್ಟದಲ್ಲಿಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಡಾ. ವಿ. ಎಸ್. ಆಚಾರ್ಯ ಸ್ಮರಣ ಪಾರಿತೋಷಕ ಮತ್ತು 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿನಿಗೆ ಕುಮಾರಿ ಗಾಯತ್ರಿ ಸ್ಮಾರಣ ಪಾರಿತೋಷಕ ವಿತರಣಾ ಸಮಾರಂಭವು, ಕೀರ್ತಿಶೇಷ ಡಾ. ವಿ. ಎಸ್. ಆಚಾರ್ಯ ಜನ್ಮ ದಿನವಾದ ಜುಲೈ 6 ಬುಧವಾರದಂದು […]

ಗಿರಿಜಾ ಹೆಲ್ತ್ ಕೇರ್ಸ್ ವತಿಯಿಂದ ಉಪ ಔಷಧ ನಿಯಂತ್ರಕರ ಬೀಳ್ಕೊಡುಗೆ

ಉಡುಪಿ: ಉಪ ಔಷಧ ನಿಯಂತ್ರಕರಾಗಿ ಉಡುಪಿಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ನಾಗರಾಜ್ ಕೆ. ವಿ ಅವರನ್ನು ಅವರ ನಿಸ್ವಾರ್ಥ ಸೇವೆ ಹಾಗೂ ಕೋವಿಡ್ ಸಮಯದಲ್ಲಿ ಅಗತ್ಯ ಔಷಧ ಪೂರೈಕೆ ಮಾಡಲು ಹಗಲು ರಾತ್ರಿ ಅವರು ಪಟ್ಟ ಶ್ರಮಕ್ಕಾಗಿ ಗಿರಿಜಾ ಹೆಲ್ತ್ ಕೇರ್ ಮತ್ತು ಸರ್ಜಿಕಲ್ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಹಿಂದೆ ಮಂಗಳೂರಿನಲ್ಲಿ ಕಾರ್ಯನಿರ್ವಹಿಸಿ ಜಿಲ್ಲೆಗೆ ನೂತನವಾಗಿ ಉಪ ಔಷಧ ನಿಯಂತ್ರಕರಾಗಿ ಆಗಮಿಸಿದ ಶಂಕರ್ ನಾಯ್ಕ್ ಅವರನ್ನು ಸ್ವಾಗತಿಸಿ ಗೌರವಿಸಲಯಿತು. ಈ ಸಂದರ್ಭದಲ್ಲಿ ಗಿರಿಜಾ ಗ್ರೂಪ್ […]