ಪಡುಬಿದ್ರಿ: ನಾಳೆ (ಜು.9) ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಘದ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆ ಉದ್ಘಾಟನೆ

ಪಡುಬಿದ್ರಿ: ಪಡುಬಿದ್ರಿ ವ್ಯಾವಸಾಯಿಕ ಸಹಕಾರಿ ಸಂಘದ ಪಡುಬಿದ್ರಿ ಹೃದಯಭಾಗದ ನವೀಕೃತ, ಸಂಪೂರ್ಣ ಹವಾ ನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನೆಯು ನಾಳೆ ಜು.09ರಂದು ಪೂರ್ವಾಹ್ನ 11.00 ಗಂಟೆಗೆ ದ.ಕ., ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ನೆರವೇರಿಸಲಿರುವರು. ಇವರೊಂದಿಗೆ ಕೃಷಿ ಸಲಕರಣೆ ಮಾರಾಟ ವಿಭಾಗದ ಉದ್ಘಾಟನೆಯನ್ನು ಅಂದು ನೇರವೇರಿಸಲಾಗುವುದೆಂದು ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಪ್ರಧಾನ ಕಛೇರಿಯಲ್ಲಿ  ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅದೇ ದಿನ ಸೊಸೈಟಿಯ ಪ್ರಧಾನ ಕಛೇರಿಯ ವೈ. ಲಕ್ಷ್ಮಣ […]

ಮಣಿಪಾಲಕಸ್ತೂರ್ಬಾ ಆಸ್ಪತ್ರೆ: ಗ್ಯಾಸ್ಟ್ರೋಇಂಟೆಸ್ಟಿನಲ್ ರೇಡಿಯೇಷನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭ

ಮಣಿಪಾಲ:  ರೇಡಿಯೊಥೆರಪಿ ಮತ್ತು ಆಂಕೊಲಾಜಿ ವಿಭಾಗದ ಸಹಯೋಗದೊಂದಿಗೆ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗ್ಯಾಸ್ಟ್ರೊಇಂಟೆಸ್ಟಿನಲ್ ರೇಡಿಯೇಶನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಗೆ ಜುಲೈ 8 ರಂದು ಚಾಲನೆ ನೀಡಲಾಯಿತು. ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಕೆಎಂಸಿ, ಮಣಿಪಾಲದ ಡೀನ್ ಡಾ ಶರತ್ ಕೆ ರಾವ್ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಅವರು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ ಶರತ್ ಕೆ ರಾವ್ ಹೊಸ ಸ್ಪೆಷಾಲಿಟಿ ಮತ್ತು […]

ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಪರಿಸರ ರಾಯಭಾರಿ: ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ

  ಬೆಂಗಳೂರು: ಕರ್ನಾಟಕದ ವೃಕ್ಷ ಮಾತೆ, ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತೆ, ಸಾಲು ಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಿಸಿ, ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಿಮ್ಮಕ್ಕ ಪರಿಸರ ರಾಯಭಾರಿಯಾಗಿರುವುದರಿಂದ ರಾಜ್ಯ ಯಾ ಅಂತಾರಾಜ್ಯ ಪ್ರವಾಸ ಕೈಗೊಂಡಾಗ ಅದರ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಅವರಿಗೆ ಈಗಾಗಲೇ ನೀಡಿರುವ ಬಿಡಿಎ ನಿವೇಶನದಲ್ಲಿ ಸರ್ಕಾರವೇ ಮನೆ ಕಟ್ಟಿಸಿಕೊಡಲಿದೆ. ಜತೆಗೆ ಸರ್ಕಾರ ಹತ್ತು ಎಕರೆ ಜಮೀನು ನೀಡಲಿದೆ ಎಂದು […]

ಶ್ರೀ ರಾಘವೇಂದ್ರ ಮಠದ ಸಂಸ್ಥಾಪನಾ ರಜತ ಮಹೋತ್ಸವ ಸಂಭ್ರಮ: ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ತುಲಾಭಾರ ಕಾರ್ಯಕ್ರಮ

ಆತ್ಮೀಯ ಗುರುಭಕ್ತರೇ, ಶ್ರೀಮತ್ ಶುಭಕೃತ್ ನಾಮ ಸಂವತ್ಸರದ ಆಷಾಢ ಮಾಸ ಕೃಷ್ಣ ಪಕ್ಷದ ದಶಮಿ ತಾ. 23-07-2022ನೇ ಶನಿವಾರದಂದು ಕೀರ್ತಿ ಶೇಷ ಶ್ರೀ ವಾದೀಶ ಆಚಾರ್ಯರ ಪುಣ್ಯ ಸ್ಮರಣೆಯೊಂದಿಗೆ ಶ್ರೀ ಹರಿವಾಯು ಗುರುಗಳ ಪರಮ ಸನ್ನಿಧಾನವಾದ ಶ್ರೀ ಮಠದ ಸಂಸ್ಥಾಪನಾ ರಜತ ಮಹೋತ್ಸವ ಸಂಭ್ರಮ ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಷಷ್ಟ್ಯಬ್ಧಿ ಪ್ರಯುಕ್ತ ಶ್ರೀಗಳಿಗೆ “ತುಲಾಭಾರ”ವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಭಕ್ತಾಭಿಮಾನಿಗಳಾದ ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುಗಳಿಂದ […]

ತಮಿಳು ನಟ ವಿಕ್ರಂ ಆಸ್ಪತ್ರೆಗೆ ದಾಖಲು: ಎದೆಯ ಅಸ್ವಸ್ಥತೆಗಾಗಿ ಚಿಕಿತ್ಸೆ

ಚೆನ್ನೈ: ಪ್ರಖ್ಯಾತ ತಮಿಳು ಚಿತ್ರ ನಟ ಚಿಯಾನ್ ವಿಕ್ರಂಗೆ ಹೃದಯಾಘಾತವಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕುಟುಂಬ ನೀಡಿರುವ ಮಾಹಿತಿ ಪ್ರಕಾರ ವಿಕ್ರಂಗೆ ಲಘು ಹೃದಯಾಘಾತವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯಾಧಿಕಾರಿಗಳು ವಿಕ್ರಂಗೆ ಚಿಕಿತ್ಸೆ ನೀಡುತ್ತಿದ್ದು, ಸಂಜೆಯೇ ಬಿಡುಗಡೆ ಹೊಂದುವ ಸಾಧ್ಯತೆಯೂ ಇದೆ ಎನ್ನಲಾಗಿದೆ ಎಂಬೆಲ್ಲಾ ಸುದ್ದಿಗಳು ಹರಿದಾಡುತ್ತಿದ್ದು, ಇದಕ್ಕೆ ವಿಕ್ರಂ ಅವರ ಮ್ಯಾನೇಜರ್ ಸ್ಪಷ್ಟೀಕರಣ ನೀಡಿದ್ದಾರೆ. “ಚಿಯಾನ್ ವಿಕ್ರಮ್ ಅವರಿಗೆ […]