ನಗರಸಭೆಯ ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ ಚಾಲನೆ ನೀಡಿದ ಶಾಸಕ ರಘುಪತಿ ಭಟ್

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ನಗರಸಭೆಯ ಘನತ್ಯಾಜ್ಯ ನಿರ್ವಹಣೆಗೆ ಫ್ರಂಟ್ ಆಂಡ್ ಬ್ಯಾಕ್ ಲೋಡರ್ ವಾಹನ ಹಾಗೂ ನಾಲ್ಕು ಟಿಪ್ಪರ್ ಮಂಜೂರಾಗಿದ್ದು, ಶಾಸಕ ಕೆ ರಘುಪತಿ ಭಟ್ ನಗರಸಭೆಯ ಮುಂಭಾಗದಲ್ಲಿ ವಾಹನಗಳಿಗೆ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷ ಲಕ್ಷ್ಮೀ ಮಂಜುನಾಥ ಕೊಳ, ನಗರಸನ್ಹೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪೌರಾಯುಕ್ತ ಉದಯ್ ಶೆಟ್ಟಿ, ನಗರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.  

ಜುಲೈ 19 ರಿಂದ 21 ರವರೆಗೆ ಭ್ರಷ್ಟಾಚಾರ ನಿಗ್ರಹ ದಳದಿಂದ ಅಹವಾಲು ಸ್ವೀಕಾರ

ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜುಲೈ 19 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬೈಂದೂರು ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ, ಜುಲೈ 20 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ […]

ಅನಾಥ ಬಾಲಕನ ಪೋಷಕರ ಪತ್ತೆಗೆ ಮನವಿ

ಉಡುಪಿ: ನಗರದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಅನಾಥವಾಗಿ ಸಿಕ್ಕಿದ್ದ ಅಶ್ರಫ್ ಅನ್ಸಾರ್ (16) ಎಂಬ ಬಾಲಕರನ್ನು ರಕ್ಷಣೆ ಮಾಡಿ, ಪುನರ್ವಸತಿ ಕಲ್ಪಿಸಲಾಗಿದ್ದು, ಬಾಲಕನ ಪೋಷಕರು ಅಥವಾ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574964 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಣಿಪಾಲ: ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ರೋಸ್ ಡೇ ಆಚರಣೆ

ಮಣಿಪಾಲ: ಜುಲೈ 16ರಂದು ಮಣಿಪಾಲ ಟೌನ್ ರೋಟರಿ, ಉಡುಪಿ ಪಾಲಿಟೆಕ್ನಿಕ್ ಇಂಟರಾಕ್ಟ್ ಕ್ಲಬ್, ಮಣಿಪಾಲ ಹಿಲ್ಸ್ ರೋಟರಿ ಮತ್ತು ಮಣಿಪಾಲ್ ಅಟೋ ಕ್ಲಬ್ ವತಿಯಿಂದ ಮಣಿಪಾಲ ಪೋಲೀಸ್ ಸ್ಟೇಷನ್ ಸಹಯೋಗದೊಂದಿಗೆ ರೆಡ್ ರೋಸ್ ಡೇ ಅನ್ನು ಆಚರಿಸಲಾಯಿತು. ಕ್ಲಬ್ ಅಧ್ಯಕ್ಷ ರೋ. ನಿತ್ಯಾನಂದ ನಾಯಕ್ ಮಾತನಾಡಿ, ರಸ್ತೆ ಅಪಘಾತಗಳು ಜಗತ್ತಿನಲ್ಲೇ ಅತ್ಯಂತ ಹೆಚ್ಚು ಪ್ರಾಣಹಾನಿಯನ್ನು ಉಂಟು ಮಾಡುತ್ತಿವೆ. ರಸ್ತೆ ನಿಯಮಗಳನ್ನು ಪಾಲಿಸದೇ ವಾಹನಗಳನ್ನು ಚಲಾಯಿಸುವುದು, ಅತಿ ವೇಗ, ಸೀಟ್ ಬೆಲ್ಟ್ ಮತ್ತು ಶಿರಸ್ತ್ರಾಣ ಧರಿಸದಿರುವುದು ಇದಕ್ಕೆ ಕಾರಣ. […]

ಮಿಷನ್ 150ರ ಜೊತೆ ಜಿಲ್ಲೆಯ‌ ಐದೂ ಸ್ಥಾನ ಗೆಲ್ಲುವುದು ಬಿಜೆಪಿ ಗುರಿ: ಕುಯಿಲಾಡಿ‌ ಸುರೇಶ್ ನಾಯಕ್

ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಮತ್ತೊಮ್ಮೆ ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಜು.16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿದರು. ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ […]