ನೆಹರು-ಗಾಂಧಿ ಹೆಸರಲ್ಲಿ 3-4 ತಲೆಮಾರುಗಳಿಗಾಗುವಷ್ಟು ಹಣ ಸಂಪಾದನೆ ಮಾಡಿದ್ದೇವೆ: ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್

ಬೆಂಗಳೂರು: ಪಂಡಿತ್ ನೆಹರು, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಹೆಸರಿನಲ್ಲಿ ನಾವು 3-4 ತಲೆಮಾರುಗಳಿಗಾಗುವಷ್ಟು ಸಂಪಾದಿಸಿದ್ದೇವೆ. ಈಗ ತ್ಯಾಗ ಮಾಡುವ ಸಮಯ ಬಂದಿದೆ. ಆ ಸಾಲವನ್ನು ತೀರಿಸಲು ನಾವು ಸಿದ್ಧರಿಲ್ಲದಿದ್ದರೆ, ನಾವು ತಿನ್ನುವ ಆಹಾರದಲ್ಲಿ ಹುಳುಗಳು ಬೀಳುತ್ತವೆ ಎಂದು ನಾನು ಹೆದರುತ್ತೇನೆ ಎಂದು ಸೋನಿಯಾ ಗಾಂಧಿ ವಿರುದ್ಧದ ಇಡಿ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ. ಗುರುವಾರದಂದು ಸೋನಿಯಾ ಗಾಂಧಿ ಇಡಿ ಮುಂದೆ ಹಾಜರಾಗಿದ್ದಾರೆ. ಸೋನಿಯಾ ಗಾಂಧಿ […]

ಪುಷ್ಪಾ ತಂಡವನ್ನು ಟ್ರೋಲ್ ಮಾಡಿದ ರಾಕಿ ಭಾಯ್ ಅಭಿಮಾನಿಗಳು: ಕೆ.ಜಿ.ಎಫ್ ಅಭಿಮಾನಿಗಳಿಂದ ಪುಷ್ಪಾಗೆ ಟಾಂಗ್!

ದೇಶಾದ್ಯಂತ ಧೂಳೆಬ್ಬಿಸಿದ ಎರಡು ಮಾಸ್ ಸಿನಿಮಾಗಳು ಎದುರು ಬದುರಾಗಿ ನಿಂತಿವೆ. ಅಲ್ಲು ಅರ್ಜುನ್ ಅಭಿನಯದ ತೆಲುಗು ಚಿತ್ರ ಪುಷ್ಪ ನಿರ್ಮಾಪಕರು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗಳಿಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ನಟ ಫಹಾದ್ ಫಾಸಿಲ್ ಅವರು ಭವಿಷ್ಯದಲ್ಲಿ `ಪುಷ್ಪ 3` ತೆರೆಮೇಲೆ ಮೂಡಿ ಬರುವ ಸಾಧ್ಯತೆಯಿದೆ ಎಂದು ಬಹಿರಂಗಪಡಿಸಿದ್ದರು. ಒಂದನೇ ಭಾಗದಲ್ಲಿ ಫಹಾದ್ ಭಾಗವಿದ್ದ ಪೊಲೀಸ್ ಸ್ಟೇಷನ್ ದೃಶ್ಯಕ್ಕೆ ವ್ಯಾಪಕ ಮೆಚ್ಚುಗೆ ಸಿಕ್ಕಿದ ಬಳಿಕ ನಿರ್ಮಾಪಕರು ಪುಷ್ಪಾ-2 ಅನ್ನು ತೆರೆಗೆ ತರುವ ನಿರ್ಧಾರ ಮಾಡಿದ್ದರು. ಇದೀಗ ನಿರ್ಮಾಪಕರು ಚಿತ್ರವನ್ನು ಮೂರು […]

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಚಿಗುರು ಹಾಗೂ ಯುವ ಸೌರಭ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 8 ರಿಂದ 14 ವರ್ಷದೊಳಗಿನ ಮಕ್ಕಳ ಪ್ರತಿಭಾ ಪ್ರದರ್ಶನಕ್ಕಾಗಿ ಚಿಗುರು ಕಾರ್ಯಕ್ರಮ ಹಾಗೂ 15 ರಿಂದ 30 ವರ್ಷದೊಳಗಿನ ಯುವ ಕಲಾವಿದರಿಂದ ಯುವ ಸೌರಭ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಜನಪದ ಕಲಾ ಪ್ರಕಾರ, ಸುಗಮ ಸಂಗೀತ, ಸಮೂಹ ನೃತ್ಯ, ನಾಟಕ, ಯಕ್ಷಗಾನ ಹಾಗೂ ಏಕಪಾತ್ರಾಭಿನಯ ಕಲಾಪ್ರಕಾರಗಳಿಗೆ ಜುಲೈ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ […]

ಸಿ.ಬಿ.ಎಸ್.ಸಿ ಫಲಿತಾಂಶ: ಬೆಂಗಳೂರಿಗೆ ಎರಡನೇ ಸ್ಥಾನ, 100% ಫಲಿತಾಂಶ ದಾಖಲಿಸಿದ ಮಂಗಳಮುಖಿ ವಿದ್ಯಾರ್ಥಿಗಳು

ಬೆಂಗಳೂರು ಪ್ರದೇಶವು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿ.ಬಿ.ಎಸ್.ಸಿ) XII ತರಗತಿಯ ಫಲಿತಾಂಶಗಳಲ್ಲಿ 98.16% ರಷ್ಟು ಪ್ರಾದೇಶಿಕವಾರು ಉತ್ತೀರ್ಣತೆಯೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಸಿ.ಬಿ.ಎಸ್.ಸಿ ಬೋರ್ಡ್ ಶುಕ್ರವಾರ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ್ದು ಒಟ್ಟಾರೆ ಶೇಕಡಾ 92.71 ತೇರ್ಗಡೆ ಫಲಿತಾಂಶ ಬಂದಿದೆ. ತಿರುವನಂತಪುರ ಪ್ರದೇಶವು 98.83% ಫಲಿತಾಂಶದೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. 97.79% ಫಲಿತಾಂಶದೊಂದಿಗೆ ಬೆಂಗಳೂರು ಪ್ರದೇಶವು ಎರಡನೇ ಸ್ಥಾನದಲ್ಲಿದ್ದರೆ, ಚೆನ್ನೈ ಪ್ರದೇಶವು ಮೂರನೇ ಸ್ಥಾನದಲ್ಲಿದೆ. ಶೇ.94.54ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ.91.25ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. […]

ಮರಿಗಾಗಿ ಕ್ಷೇತ್ರ ತ್ಯಜಿಸಿದ ರಾಜಾಹುಲಿ: ಪುತ್ರ ವಿಜಯೇಂದ್ರನಿಗಾಗಿ ಶಿಕಾರಿಪುರ ಬಿಟ್ಟುಕೊಟ್ಟ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ: ಯಡಿಯೂರಪ್ಪನವರ ಚುನಾವಣಾ ಕ್ಷೇತ್ರವಾದ ಶಿಕಾರಿಪುರವನ್ನು ತನ್ನ ಮಗ ಬಿ.ವೈ ವಿಜಯೇಂದ್ರನಿಗಾಗಿ ಬಿಟ್ಟು ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ನು ಮುಂದೆ ಈ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಅಖಾಡಕ್ಕಿಳಿಯಲಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ವೈ ಈ ಘೋಷಣೆ ಮಾಡಿದ್ದಾರೆ ಎಂದು ಇಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಹಳೆ ಮೈಸೂರು ಭಾಗದಲ್ಲಿ ಬೆಂಬಲವಿದ್ದರೂ,  ತಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಾದ್ದರಿಂದ ಕ್ಷೇತವನ್ನು ಬಿಟ್ಟುಕೊಟ್ಟಿದ್ದೇನೆ ಎಂದಿದ್ದಾರೆ. ಮಗನನ್ನು ತನಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವಂತೆ ಬಿ.ಎಸ್.ವೈ ಮನವಿ ಮಾಡಿದ್ದಾರೆ. […]