ಕುದಿ ಗ್ರಾಮದ ಗ್ಯಾಸ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ, ತಕ್ಷಣ ಕಾರ್ಯಾಚರಣೆ, ತಪ್ಪಿದ ಭಾರೀ ಅನಾಹುತ: ಇದು ರಾಸಾಯನಿಕ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ

ಉಡುಪಿ: ಉಡುಪಿ ತಾಲೂಕಿನ ಕುದಿ ಗ್ರಾಮದ ಜನತೆಗೆ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ತೀವ್ರ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದ್ದರಿಂದ ಸಾರ್ವಜನಿಕರು ತೀವ್ರ ಆತಂಕದಲ್ಲಿದ್ದರು, ಗ್ರಾಮದಲ್ಲಿದ್ದ ಎ.ಜಿ.ಎಸ್. ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಸಂಭವಿಸಿದ ಅನಿಲ ಸೋರಿಕೆಯಿಂದಾಗಿ ಈ ಘಟನೆ ಸಂಭವಿಸಿತ್ತು. ಇಂದು ಬೆಳಗ್ಗೆ 8.50 ಕ್ಕೆ ಕುದಿ ಗ್ರಾಮದಲ್ಲಿರುವ ಎ.ಜಿ.ಎಸ್ ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಅನಿಲ ಸೋರಿಕೆ ಕಂಡು ಬಂದಿದ್ದು, ತಕ್ಷಣವೇ ಅಲ್ಲಿನ ಸಿಬ್ಬಂದಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಉಚಿತ ದೂರವಾಣಿ ಸಂಖ್ಯೆ 1077 ಗೆ ಘಟನೆ […]

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ, ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಒಕ್ಕಲಿಗ ಸಮುದಾಯದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdc.karnataka.gov.in, […]

ಉಡುಪಿ: ಲಯನ್ಸ್ ಕ್ಲಬ್ ಬ್ರಹ್ಮಗಿರಿ ವತಿಯಿಂದ ಕಾರ್ಗಿಲ್ ವಿಜಯ ದಿನಾಚರಣೆ

ಉಡುಪಿ: ನೈಜ ಭಾರತೀಯನಿಗೆ ಈ ದಿನ ಮರೆಯಲು ಸಾಧ್ಯವಿಲ್ಲ. ದೇಶದ ಭದ್ರತೆ, ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವಲ್ಲಿ ನಮ್ಮ ಯೋಧರು ತೋರಿದ ತ್ಯಾಗ ಬಲಿದಾನವನ್ನು ರಾಷ್ಟ್ರದ ಜನತೆ ಎಂದಿಗೂ ಮರೆಯಲಾಗದು. 1999 ರಲ್ಲಿ ನಡೆದ ಯುದ್ಧವೇ ಕಾರ್ಗಿಲ್ ಯುದ್ಧ. ಕಾರ್ಗಿಲ್ ಯುದ್ಧದ ವಿಜಯ ದಿವಸವನ್ನು ಜುಲೈ 26 ರಂದು ಆಚರಿಸಲಾಗುತ್ತದೆ ಎಂದು ಬಿಎಸ್ಎಫ್ ನಿವೃತ್ತ ಸೇನಾಧಿಕಾರಿ ಕೆ ಸುರೇಶ್ ರಾವ್ ಹೇಳಿದರು. ಅವರು ಕಾಡುಬೆಟ್ಟಿನಲ್ಲಿರುವ ಟಿ ಎ ಪೈ ಮಾಡರ್ನ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ […]

ವಿಶ್ವ ಸಂಸ್ಕೃತಿ ಪ್ರತಿಷ್ಠಾನ ವತಿಯಿಂದ ಸಹಾಯಧನ ಹಸ್ತಾಂತರ

ಉಡುಪಿ: ವಿಶ್ವ ಸಂಸ್ಕೃತಿ ಪ್ರತಿಷ್ಠಾನ ವತಿಯಿಂದ ಶುಕ್ರವಾರ ಶ್ರೀ ಲಕ್ಷ್ಮೀ ನಾರಾಯಣ ವಸತಿ ಗೃಹದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷ ಯು ವಿಶ್ವನಾಥ ಶೆಣೈ ಇವರು ಚೆಸ್ ಪಂದ್ಯದಲ್ಲಿ ವಿಶೇಷ ಸಾಧನೆ ಗೈದ ವಿದ್ಯಾರ್ಥಿ ಮಾಹಿನ್ ರವರಿಗೆ 18,೦೦೦ ರೂಪಾಯಿಗಳ ಚೆಕ್ ಅನ್ನು ಹಸ್ತಾಂತರಿಸಿದರು. ಇದೆ ಸಂದರ್ಭದಲ್ಲಿ ಶ್ರೀಮತಿ ಪ್ರಭಾ ವಿ ಶೆಣೈರವರು ಮೂಲ್ಕಿ ನಿವಾಸಿ ಶ್ರೀನಿವಾಸ ಭಟ್ ರವರಿಗೆ ಹೃದಯ ಕಾಯಿಲೆಯ ಚಿಕಿತ್ಸೆಗೆ 25,000 ರೂಪಾಯಿ ಚೆಕ್ ಅನ್ನು ನೀಡಿದರು. ವೇದಿಕೆಯಲ್ಲಿ ಪ್ರಶಾಂತ್ ಕಾಮತ್, ಮನೋಹರ್ ಶೆಣೈ […]