ಲೋಕಾಯುಕ್ತಕ್ಕೆ ಮತ್ತೆ ಬಂತು ಬಲ: ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮಹತ್ವದ ತೀರ್ಪಿನಲ್ಲಿ, ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರವನ್ನು ಹಿಂತೆಗೆದುಕೊಳ್ಳುವ ಮೂಲಕ 2016 ರಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಎಸಿಬಿ ರಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ತಂಡಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ, ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಈಗ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲಾಗುವುದು […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂರು ಪ್ರಮುಖ ಆರೋಪಿಗಳ ಬಂಧನ; ಒಟ್ಟು ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯು ಒಂದು ಪೂರ್ವ ನಿಯೋಜಿತ ಷಡ್ಯಂತ್ರದ ಭಾಗವೆಂದು ಮುಖ್ಯಮಂತ್ರಿ ಬೊಮ್ಮಾಯಿ ಉಲ್ಲೇಖಿಸುತ್ತಲೇ ಬಂದಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ನಡೆದು ಎರಡು ವಾರಗಳು ಕಳೆದಿದ್ದು, ದಿನಗಳ ಅಂತರದಲ್ಲಿ ಬಂಧನಗಳು ನಡೆಯುತ್ತಲೇ ಇವೆ. ಇದೀಗ ಪ್ರವೀಣ್ ಹತ್ಯೆಗೆ ಸಂಬಂಧಿಸಿ ಸುಳ್ಯದ ಮೂವರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಿಯಾಬುದ್ದೀನ್ ಅಲಿ, ರಿಯಾಜ್ ಹಾಗೂ ಎಲಿಮಲೆಯ ಬಶೀರ್ ಬಂಧಿತರು ಎಂದು ವರದಿಯಾಗಿದೆ. ಈ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ […]

ಆಗಸ್ಟ್ 15 ರಂದು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಿದ್ದು, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನದ ಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ […]

ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಅಹೋ ರಾತ್ರಿ ಭಜನಾ ಸಪ್ತಾಹ ಸಂಪನ್ನ

ಉಡುಪಿ: ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಊರ ಪರಊರ ಭಜನಾ ಮಂಡಳಿಗಳಿಂದ ಅಹೋ ರಾತ್ರಿ 7 ದಿನಗಳ ಕಾಲ ನಿರಂತರ ಭಜನೆ ನಡೆದು ಮಂಗಳವಾರದಂದು 122ನೇ ಭಜನಾ ಸಾಪ್ತಾಹ ಮಂಗಲೋತ್ಸವ ಸಂಪನ್ನಗೊಂಡಿತು. ದೇವಳದ ಅರ್ಚಕ ವಿನಾಯಕ ಭಟ್ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಭಜನಾ ಆರಾಧ್ಯ ದೇವರಾದ ಶ್ರೀ ವಿಠೋಬಾ ರುಖುಮಾಯಿ ದೇವರ ಸನ್ನಿಧಿಯಲ್ಲಿ ಜೈ ವಿಠಲ್ ಹರಿ ವಿಠಲ್ ನಾಮ ಪಠಿಸುತ್ತಾ ದೀಪ ಸ್ತಂಭಕ್ಕೆ ಪ್ರದಕ್ಷಿಣೆ ಗೈದರು. ಶ್ರೀ ದೇವರಿಗೆ […]

ಶ್ರೀಕೃಷ್ಣ ಮಠ: ಶ್ರೀ ಕೃಷ್ಣಾಷ್ಟಮಿ ಸ್ಪರ್ಧೆಗಳು ಮತ್ತು ನಿಯಮಗಳು

ಶ್ರೀ ಕೃಷ್ಣಾಷ್ಟಮಿ ಸ್ಪರ್ಧೆಗಳು ಮತ್ತು ನಿಯಮಗಳು 1. ಸ್ಪರ್ಧಾಳುಗಳು ಆಯಾ ವಿಭಾಗಕ್ಕೆ ತಮ್ಮ ಹೆಸರನ್ನು ಬಡಗುಮಾಳಿಗೆ ಕಛೇರಿಯಲ್ಲಿ ಅಥವಾ ಸೂಚಿತ ಮೊಬೈಲ್ ನಂಬರ್ ಗೆ ಸ್ಪರ್ಧಾ ದಿನದ ಹಿಂದಿನ ದಿನ ಸಂಜೆ 6 ರೊಳಗೆ ನೊಂದಾಯಿಸಬೇಕು. 2. ತಮ್ಮ ವಯಸ್ಸಿನ ದೃಡೀಕರಣ ಪತ್ರವನ್ನು ಸಂಬಂಧಿತರು ಕೇಳಿದಾಗ ನೀಡಬೇಕು. 3. ಪ್ರತಿಯೊಂದು ವಿಭಾಗದಲ್ಲೂ ಮೂರು ಬಹುಮಾನಗಳಿವೆ. ವ್ಯಕ್ತಿಗತ ಸ್ಪರ್ಧೆಗೆ ಹುಲಿವೇಷ ಕುಣಿತ ಸ್ಪರ್ಧೆ ಜಾನಪದ ಕುಣಿತ ತಂಡ ಪ್ರಥಮ ದ್ವಿತೀಯ ತೃತೀಯ 4. ಯಾವುದೇ ವಿಭಾಗದಲ್ಲಿ ನಿಗದಿತ ಸ್ಪರ್ಧಾಳುಗಳು […]