ಮೀನುಗಾರರಿಗೆ ಸೀಮೆಎಣ್ಣೆ ಪೂರೈಕೆ ಪರವಾನಿಗೆ: ಮೋಟಾರೀಕೃತ ನಾಡದೋಣಿಗಳ ಭೌತಿಕ ತಪಾಸಣೆ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೋಟಾರೀಕೃತ ಮೀನುಗಾರಿಕೆ ದೋಣಿಗಳಿಗೆ ಸೀಮೆಎಣ್ಣೆ ಪಡೆಯಲು ಪರ್ಮಿಟ್‌ಗಾಗಿ ದೋಣಿ ಮಾಲಕರು ಅರ್ಜಿ ಸಲ್ಲಿಸುವ ಮೊದಲು ಇಲಾಖೆಯಿಂದ ದೋಣಿಗಳ ಭೌತಿಕ ಪರಿಶೀಲನೆ ನಡೆಸಿ, ಪರವಾನಿಗೆಯನ್ನು ದೋಣಿ ಮಾಲಕರಿಗೆ ನೀಡಲಾಗುವುದು. ಮೋಟಾರೀಕೃತ ನಾಡದೋಣಿಗಳ ಮೀನುಗಾರಿಕಾ ಸೀಮೆ ಎಣ್ಣೆ ರಹದಾರಿ ನವೀಕರಣ ಹಾಗೂ ಹೊಸದಾಗಿರುವ ದೋಣಿಗಳಿಗೆ ಸೀಮೆಎಣ್ಣೆ ಪೂರೈಸುವ ಸಂಬಂಧ ಪರವಾನಿಗೆಯನ್ನು ನೀಡಲು ಅವರ ದೋಣಿಗಳನ್ನು ಭೌತಿಕ ತಪಾಸಣೆಗೆ ಒಳಪಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಗಸ್ಟ್ 23 ರಂದು ಬೈಂದೂರು ತಾಲೂಕಿನ ಅಳ್ವೆಗದ್ದೆಯ ಮೀನುಗಾರಿಕೆ […]

ಆಗಸ್ಟ್ 20 ರಿಂದ 22 ರ ವರೆಗೆ ಡಿ. ದೇವರಾಜ ಅರಸು ಅವರ 107 ನೇ ಜನ್ಮ ದಿನಾಚರಣೆ

ಉಡುಪಿ: ಸಾಮಾಜಿಕ ಸುಧಾರಣೆಯ ಹರಿಕಾರ ಡಿ. ದೇವರಾಜ ಅರಸು ಅವರ 107 ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಿಂದ 22 ರ ವರೆಗೆ ಜಿಲ್ಲಾ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ, ಡಿ. ದೇವರಾಜ ಅರಸು ಅವರ 107 ನೇ ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ […]

ತಂಬಾಕು ನಿಯಂತ್ರಣ ತನಿಖಾ ದಳದಿಂದ ಶಿರ್ವ ವ್ಯಾಪ್ತಿಯಲ್ಲಿ ದಾಳಿ: 18 ಪ್ರಕರಣ ದಾಖಲು

ಉಡುಪಿ : ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಗುರುವಾರ ಶಿರ್ವ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 18 ಪ್ರಕರಣಗಳನ್ನು ದಾಖಲಿಸಿ, 3250 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ […]

ಪಿ.ಎಂ ಕಿಸಾನ್ ಯೋಜನೆಗೆ ಆಗಸ್ಟ್ 15ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ

ಉಡುಪಿ: ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆಯುತ್ತಿರುವ ಜಿಲ್ಲೆಯ ರೈತರು ಆಗಸ್ಟ್ 15 ರ ಒಳಗೆ ಸಮೀಪದ ಕಾಮನ್ ಸರ್ವೀಸ್ ಸೆಂಟರ್‌ಗಳಲ್ಲಿ ಅಥವಾ ಸ್ಮಾರ್ಟ್ಪೋನ್ ಬಳಸುತ್ತಿರುವ ರೈತರು ಪಿ.ಎಂ ಕಿಸಾನ್ ವೆಬ್ ಪೋರ್ಟಲ್ www.pmkisan.gov.in ತಂತ್ರಾಂಶದ ಮೂಲಕ ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿಯನ್ನು ಮಾಡಿಕೊಳ್ಳಬಹುದಾಗಿದೆ. ಆಗಸ್ಟ್ 15 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ರೈತರಿಗೆ ಪಿ.ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ […]

ಆಗಸ್ಟ್ 15 ರಂದು ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಜಿಲ್ಲಾ ಕಚೇರಿ ಉದ್ಘಾಟನೆ

ಉಡುಪಿ: ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಉಡುಪಿ ಜಿಲ್ಲಾ ಕಚೇರಿಯನ್ನು ಉಡುಪಿ ಕೋರ್ಟ್ ಬಳಿಯ ಕಾರ್ತಿಕ್ ಟವರ್ (ಸಿ2 ನೆಲಮಹಡಿ )ನಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ಗೌರವ ಅಧ್ಯಕ್ಷ ಸದಾಶಿವ ಶೆಟ್ಟಿ ಮಣಿಪಾಲ ಇವರು ಉದ್ಘಾಟಿಸಲಿದ್ದು, ಮಂಗಳೂರು ಸಂಘದ ಅಧ್ಯಕ್ಷ ಜಯರಾಜ್ ಕೋಟ್ಯಾನ್ ಅವರು ದೀಪ ಬೆಳಗಿಸಿ ಶುಭ ಹಾರೈಸಲಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಆರ್ ಟಿ ಓ ಇನ್ಸ್ಪೆಕ್ಟರ್ ವಿಶ್ವನಾಥ್ ನಾಯಕ್ ಮತ್ತು ಕರಾವಳಿ ಬಸ್ ಮಾಲಕರ ಸಂಘದ […]