ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವುದು ಎಲ್ಲರ ಕರ್ತವ್ಯ: ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ಕೊಡಿಯಾಲಬೈಲ್‌ನ ಶ್ರೀ ಭಗವತಿ ದೇವಸ್ಥಾನದ ಆವರಣದಲ್ಲಿ ಎಕ್ಸ್ಪರ್ಟ್ ಪಿಯು ಕಾಲೇಜಿನ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ನಡೆಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ.ಡಿ.ವೇದವ್ಯಾಸ್ ಕಾಮತ್ ಅವರು ಸ್ವಾತಂತ್ರ್ಯ ಹೋರಾಟಕ್ಕೆ ದಕ್ಷಿಣ ಕನ್ನಡದ ನಾಯಕರ ಕೊಡುಗೆ ಗಮನಾರ್ಹವಾಗಿದೆ ಎಂದರು. ಐತಿಹಾಸಿಕವಾಗಿ ಮಹತ್ವದ ಏನನ್ನಾದರೂ ಸಾಧಿಸಲು, ನಾವು ನಮ್ಮ ರಾಷ್ಟ್ರದ ಇತಿಹಾಸದ ಬಗ್ಗೆ ತಿಳಿದಿರಬೇಕು”. ನಾವು ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಬೇಕು ಏಕೆಂದರೆ ನಾವು ಇಂದು ಸ್ವತಂತ್ರರಾಗಿದ್ದೇವೆ ಎಂದು ಅವರು ಹೇಳಿದರು. ಎಕ್ಸ್ಪರ್ಟ್ ಸಮೂಹ ಸಂಸ್ಥೆಗಳ ಚೇರ್ಮನ್ ಪ್ರೊ.ನರೇಂದ್ರ […]

ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರ ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ

ಉಡುಪಿ: ವಿಶ್ವ ಪ್ರಸಿದ್ದ ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಅಧಿಕೃತ ಪುಣ್ಯಕ್ಷೇತ್ರವೆಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಅತಿ ವಂದನೀಯ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋರವರು ಆಗಸ್ಟ್ 15 ರಂದು ವಿದ್ಯುಕ್ತವಾಗಿ ನಡೆದ ಪವಿತ್ರ ಬಲಿಪೂಜೆಯಲ್ಲಿ ಘೋಷಿಸಿದರು. ಉಡುಪಿ ಧರ್ಮಪ್ರಾಂತ್ಯದ ಕುಲಪತಿಗಳಾದ ಫಾದರ್ ಸ್ಟ್ಯಾನಿ ಬಿ ಲೋಬೋ ಅವರು ಪುಣ್ಯಕ್ಷೇತ್ರದ ಘೋಷಣೆ ಪತ್ರವನ್ನು ವಾಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋ ರವರು ದಿವ್ಯ ಬಲಿಪೂಜೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಬಲಿಪೂಜೆಯಲ್ಲಿ ಮಂಗಳೂರು […]

ತ್ರಿಶಾ ವಿದ್ಯಾ ಕಾಲೇಜು ಹಾಗೂ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ತ್ರಿಶಾ ವಿದ್ಯಾ ಕಾಲೇಜು ಮತ್ತು ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ ಇವರು ಜಂಟಿಯಾಗಿ ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸಿದರು. ನಿವೃತ್ತ ಮಿಲಿಟರಿ ಪೋಲೀಸ್ ಸುಬೇದಾರ್ ರವೀಂದ್ರ ಪೈ ಧ್ವಜಾರೋಹಣ ನೆರವೇರಿಸಿ ದೇಶಕ್ಕಾಗಿ ಹೋರಾಡುವ ಸೈನಿಕರ ಮಹತ್ವವನ್ನು ತಿಳಿಸಿ ಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಅವರು ಸ್ವಾತಂತ್ರ್ಯ ಗಳಿಸಿದಂದಿನಿಂದ ಇಂದಿನವರೆಗೆ ದೇಶ ಅಭಿವೃದ್ಧಿ ಹೊಂದಿದ ಪರಿಯನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಈ ಸಂದರ್ಭದಲ್ಲಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ […]

ದರ್ಮೊದ ಉಳ್ಳಾಯೆ ಕಾರ್ನಿಕೊದ ಕೊರಗಜ್ಜನ್ ಸುಗಿಪುನ ಪದ ಯೂಟ್ಯೂಬ್ ಡ್ ಬುಡುಗಡೆ

ತುಳುನಾಡ್ ದ ಕಾರ್ನಿಕೊದ ಕೊರಗಜ್ಜನ್ ಸುಗಿಪುನ ಪದೊ ಯೂಟ್ಯೂಬ್ ಡ್ ಸೋಮವಾರದಾನಿ ಬುಡುಗಡೆ ಆದ್ ಜನಕುಲೆನ ಮನಸ್ ನ್ ಗೆಂದೊಂದು ಉಂಡು. ಪ್ರಸಾದ್ ಬೈಲೂರು ಮೆರೆನ ನಿರ್ಮಾಣದ ಉಮಾನಾಥ್ ಕೋಟ್ಯಾನ್‌‌‌ ತೆಂಕಕಾರಂದೂರು ಮೆರೆನ ಬರವಣಿಗೆಡು ಸುಪ್ರಿತಾ ಆಚಾರ್ಯ ಕಾಂತರಗೋಳಿ ಮೆರೆನ ಪೊರ್ಲುದ ಸ್ವರಟು ಮೂಡುದು ಬತ್ತಿನ ಕೊರಗಜ್ಜನ ಭಕ್ತಿ ಸುಗಿಪುಗು ಮಾತೆರ್ಲಾ ಎಡ್ಡೆಪ್ಪುನು ಬಯಕ್ ದ್ ಸೊಲ್ಮೆನ್ ಸಂದಾವೊಂದುಲ್ಲೆರ್. ಯೂಟ್ಯೂಬ್ ಡ್ ವಿಡೀಯೋ ಭಾರಿ ಪೊರ್ಲ ಕಂಟ್ ಡ್ ಮೂಡ್ ದ್ ಬೈದ್ಂಡ್. ಮಾತೆರ್ಲಾ ವೀಡಿಯೋನ್ ತೂದ್ ಪಟ್ಟೊನೊಂದು […]

ದೊಡ್ಡಣ್ಣಗುಡ್ಡೆ ಪ್ರಜ್ಞಾಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿಯವರ ಅಧ್ಯಕ್ಷತೆಯಲ್ಲಿ ಕ್ಷೇತ್ರದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಪ್ಪತ್ತೈದನೇ ಸ್ವಾತ್ಯಂತ್ರ ಮಹೋತ್ಸವವನ್ನು ಬಹು ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಜ್ಞಾ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ನ್ಯಾಯವಾದಿ ಯು. ಬಾಲ ಸುಬ್ರಹ್ಮಣ್ಯ ರಾವ್ ಅವರ ಅಧ್ಯಕ್ಷತೆ ವಹಿಸಿದ್ದರು. ಮಣೂರು ನಾರಾಯಣ ಖಾರ್ವಿ ಅವರು ಧ್ವಜಾರೋಹಣ ಮಾಡಿ, ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಯುವ ಪೀಳಿಗೆಗೆ ಸಂದರ್ಭೋಚಿತವಾದ ಸಲಹೆಯನ್ನು ನೀಡಿ […]