ಸ್ನೇಹ ಎಚ್‌. ಕೋಟ್ಯಾನ್‌ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಉಡುಪಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ- ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕುಮಾರಿ ಸ್ನೇಹ ಎಚ್‌. ಕೋಟ್ಯಾನ್‌, ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಕಟೀಲಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ. ಇವಳು ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ […]

ಕೋಟಿ ಚೆನ್ನಯ್ಯ ಸೈನಿಕ ತರಬೇತಿ ಶಾಲೆಗೆ ಪ್ರಶಿಕ್ಷಣಾರ್ಥಿಗಳ ಆಯ್ಕೆ: ಸೆ.1 ರಂದು ರ‍್ಯಾಲಿ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೋಟಿ ಚೆನ್ನಯ್ಯ ಸೈನಿಕ ತರಬೇತಿ ಶಾಲೆಗೆ ಪ್ರಶಿಕ್ಷಣಾರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಸೆಪ್ಟಂಬರ್ 1 ರಂದು ಬೆಳಗ್ಗೆ 9 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ರ‍್ಯಾಲಿ ನಡೆಯಲಿದ್ದು, ಆಸಕ್ತ ಪುರುಷ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಹಾಗೂ ಆಧಾರ್ ಕಾರ್ಡ್ ಮೂಲ ಪ್ರತಿಯೊಂದಿಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.

ಕಾರ್ಕಳ: ಸೆಪ್ಟೆಂಬರ್ 02 ರಂದು ಹೋಟೆಲ್ ಮಯೂರ ಇಂಟರ್ ನ್ಯಾಶನಲ್ ಉದ್ಘಾಟನೆ

ಕಾರ್ಕಳ: ಹೋಟೆಲ್ ಮಯೂರ ಇಂಟರ್ ನ್ಯಾಶನಲ್ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 02 ಶುಕ್ರವಾರದಂದು ರಾ.ಹೆದ್ದಾರಿ 169 ರ ಕುದುರೆಮುಖ ರಸ್ತೆಯ ಪುಲ್ಕೇರಿ ಬೈಪಾಸ್ ಬಳಿ ನಡೆಯಲಿದೆ. ಹೋಟೆಲ್ ಮಯೂರ ಇಂಟರ್ ನ್ಯಾಶನಲ್ ನಲ್ಲಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್ ವ್ಯವಸ್ಥೆ, ಫ್ಯಾಮಿಲಿ ರೆಸ್ಟೋರೆಂಟ್ ಹಾಗೂ ಬಾಂಕ್ವೆಟ್ ಹಾಲ್ ಗಳಿರಲಿವೆ. ವಿಳಾಸ: ರಾ.ಹೆ169, ಕುದುರೆಮುಖ ರಸ್ತೆ ಪುಲ್ಕೇರಿ ಬೈಪಾಸ್ ಕಾರ್ಕಳ 574-104