ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜಿನ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಉಚ್ಚಿಲ ಬೆಳಪು ವ್ಯವಸಾಯ ಸಹಕಾರಿ ಸಂಘದಲ್ಲಿ ಬಹು ಮಹಡಿ ಸಹಕಾರಿ ಮಹಲ್ ಸ್ಥಾಪನೆ: ದೇವಿಪ್ರಸಾದ್ ಬೆಳಪು

ಉಚ್ಚಿಲ: ಬೆಳಪು ವ್ಯವಸಾಯ ಸಹಕಾರಿ ಸಂಘವು 2021-22ನೇ ಸಾಲಿನಲ್ಲಿ ಗಣನೀಯ ಅಭಿವೃದ್ಥಿ ಸಾಧಿಸಿದ್ದು, ವಾರ್ಷಿಕ ವ್ಯವಹಾರ 200 ಕೋಟಿ ದಾಟಿದ್ದು ಕಳೆದ ವರ್ಷದಿಂದ ಮೂರು ಪಟ್ಟು ವ್ಯವಹಾರವನ್ನು ವೃದ್ಧಿಸಿ ಗ್ರಾಮೀಣ ಪ್ರದೇಶದಲ್ಲಿ ಸಂಘವು ಉನ್ನತ ಸಾಧನೆಯನ್ನು ಮಾಡಿರುತ್ತದೆ. ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಯಶಸ್ವಿ ಸಂಘ ಇದಾಗಿದ್ದು ಮುಂದಿನ ವರ್ಷ 300 ಕೋಟಿ ರೂ.ವ್ಯವಹಾರ ನಡೆಸುವ ಗುರಿ ಹೊಂದಿದೆ. ಈ ವರ್ಷ 5.23 ಕೋಟಿ ಸರ್ವಕಾಲಿಕ ಲಾಭ ಗಳಿಸಿದ್ದು ವಾರ್ಷಿಕ ನಿವ್ವಳ ಲಾಭ 49 ಲಕ್ಷವಾಗಿರುತ್ತದೆ. ಸದಸ್ಯರಿಗೆ 12% […]

ಆತ್ಮಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪತ್ರಕರ್ತರ ಪಾತ್ರ ಕುರಿತು ಒಂದು ದಿನದ ಕಾರ್ಯಾಗಾರ

ಉಡುಪಿ: ಭಾರತೀಯ ಮನೋವೈದ್ಯರ ಸಂಘ ಕರ್ನಾಟಕ ಶಾಖೆ, ಉಡುಪಿ ಹಾಗೂ ಮಂಗಳೂರು ಮನೋವೈದ್ಯರ ಸಂಘ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ಆತ್ಮಹತ್ಯೆಯನ್ನು ಅರ್ಥೈಸುವಿಕೆ, ಆತ್ಮಹತ್ಯಾ ವರದಿಗಾರಿಕೆ ಮತ್ತು ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ಪತ್ರಕರ್ತರ ಪಾತ್ರದ ಕುರಿತು ಒಂದು ದಿನದ ಕಾರ್ಯಾಗಾರವು ಸೆ.9 ರಂದು ನಗರದ ಐ.ಎಮ್.ಎ ಭವನದಲ್ಲಿ ಜರುಗಿತು. ಭಾರತೀಯ ಭಾರತೀಯ ಮನೋವೈದ್ಯರ ಸಂಘದ ಅಧ್ಯಕ್ಷ ಡಾ.ಪಿ.ಕೆ ಕಿರಣ್ ಕುಮಾರ್ ಮುಖ್ಯ ಅಥಿತಿಯಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.     […]

ಕೂಸಮ್ಮ ಶಂಭು ಶೆಟ್ಟಿ ಆಸ್ಪತ್ರೆಯಲ್ಲಿ ಖಾಲಿ ಹುದ್ದೆ: ನೇರ ಸಂದರ್ಶನ

ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಮಕ್ಕಳ ತಜ್ಞ, ಅರಿವಳಿಕೆ ಹಾಗೂ ಸೋನೊಲಾಜಿಸ್ಟ್ ತಲಾ 1 ಹುದ್ದೆ ಹಾಗೂ ವೈದ್ಯಾಧಿಕಾರಿಗಳ 3 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಸೆಪ್ಟಂಬರ್ 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ […]

ಮಳೆಹಾನಿ ಅಧ್ಯಯನ: ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಭೇಟಿ

ಉಡುಪಿ: ರೈತರು ಬೆಳೆಯುವ ಪ್ರತಿಯೊಂದು ಬೆಳೆಗಳನ್ನೂ ಹಾಗೂ ಮೀನುಗಾರಿಕಾ ಬೋಟ್ ಹಾಗೂ ಪರಿಕರಗಳನ್ನು ವಿಮಾ ವ್ಯಾಪ್ತಿಗೆ ತರುವಂತೆ ಅವರುಗಳನ್ನು ಪ್ರೋತ್ಸಾಹಿಸಬೇಕು. ಇದರಿಂದ ವೈಯಕ್ತಿಕ ನಷ್ಟದ ಪ್ರಮಾಣವು ಕಡಿಮೆಯಾಗುತ್ತದೆ ಎಂದು ಕೇಂದ್ರ ಮಳೆಹಾನಿ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ಹೇಳಿದರು. ಅವರು ಗುರುವಾರ ಜಿಲ್ಲೆಯಲ್ಲಿ ಮಳೆಹಾನಿ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿ ಮಾತನಾಡಿದರು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಮತ್ತಿತರ ಬೆಳೆ ವಿಮೆಗೆ ಸರ್ಕಾರವು ಪ್ರೀಮಿಯಂ ಹಣವನ್ನು […]