ನೀಟ್ ಪರೀಕ್ಷೆಯಲ್ಲಿ ಸುಪ್ರಭ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನ ಸಾಧನೆ

ಕುಂದಾಪುರ: ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಪ್ರಭ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೀಟ್ / ಸಿಇಟಿ ಅಕಾಡೆಮಿಯ ವಿದ್ಯಾರ್ಥಿನಿ ಪಲ್ಲವಿ 720 ರಲ್ಲಿ 568 ಅಂಕಗಳಿಸಿ ಕುಂದಾಪುರ ತಾಲೂಕಿನಲ್ಲೇ ಶ್ರೇಷ್ಠ ಸಾಧನೆ ಗೈದಿದ್ದಾರೆ. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಂಗ ಸಂಸ್ಥೆಯಾಗಿರುವ ಸುಪ್ರಭ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯು ಸಿಇಟಿ / ನೀಟ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ಹೈದರಾಬಾದ್, ಮೂಡುಬಿದಿರೆ, ಮಂಗಳೂರು, ಮುಂಬೈ ಮುಂತಾದ ಭಾಗಗಳ ಅನುಭವಿ ಶಿಕ್ಷಕರಿಂದ ತರಬೇತಿ ನೀಡಿ ಪರೀಕ್ಷೆಗೆ ಸಿದ್ಧಗೊಳಿಸಲಾಗಿತ್ತು ಎಂದು […]

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜನನಿ ಲಾಡ್ಜ್ ಮುಂಭಾಗದಲ್ಲಿ ಸೆಪ್ಟಂಬರ್ 11 ರಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲೆ ಮೃತಪಟ್ಟಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2570328, ಮೊ.ನಂ: 9480805475, 9480805448 ಅನ್ನು ಸಂಪರ್ಕಿಸುವಂತೆ ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಕ್ಸೋ ಪ್ರಕರಣ ಆರೋಪಿಗೆ ಷರತ್ತುಬದ್ಧ ಜಾಮೀನು

ಉಡುಪಿ ಪೋಕ್ಸೋ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ. ಆರೋಪಿಯು ಸಂತ್ರಸ್ತ ಬಾಲಕಿಯ ದೂರದ ಸಂಬಂಧಿಯಾಗಿದ್ದು, ಸುಮಾರು 3 ವರ್ಷದ ಹಿಂದೆ ಬಾಲಕಿಯನ್ನು ಪರಿಚಯಿಸಿಕೊಂಡು ದೂರವಾಣಿ ಮೂಲಕ ಮಾತುಕತೆ ನಡೆಸುತ್ತಿದ್ದ, ಅನಂತರ ಆತ ಆಕೆಯನ್ನು ಹೆಬ್ರಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಯಾರೂ ಇಲ್ಲದ ಸಮಯದಲ್ಲಿ ಮದುವೆ ಮಾಡಿಕೊಂಡಿದ್ದ. ಬಳಿಕ ಆಕೆಯನ್ನು ಹೊಸಪೇಟೆಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿರುವುದು ತನಿಖೆಯಿಂದ ದೃಢಪಟ್ಟಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು […]

ಜ್ಞಾನವಪಿ ಮಸೀದಿ ಪ್ರಕರಣ: ಅಂಜುಮನ್ ಇಂತೇಜಮಿಯ ಅರ್ಜಿ ವಜಾಗೊಳಿಸಿದ ಜಿಲ್ಲಾ ನ್ಯಾಯಾಲಯ

ನವದೆಹಲಿ:  ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯವು ಹಿಂದೂ ಪರ ತೀರ್ಪು ನೀಡಿದೆ. ಅಂಜುಮನ್ ಇಂತೇಜಾಮಿಯಾ ಸಮಿತಿಯ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಐದು ಮಹಿಳಾ ಹಿಂದೂ ಪಕ್ಷಗಳ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿ ಶೃಂಗಾರ ಗೌರಿ ವಿವಾದ ಪ್ರಕರಣದ ತೀರ್ಪು ನೀಡುವಾಗ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರಿದ್ದ ಏಕ ಪೀಠವು ಪ್ರಕರಣ ವಿಚಾರಣೆಗೆ ಯೋಗ್ಯವಾಗಿದೆ ಎಂದು ಹೇಳಿದೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾತನಾಡಿ, ನ್ಯಾಯಾಲಯವು ಮುಸ್ಲಿಂ ಕಡೆಯ […]

ಏಷ್ಯಾ ಕಪ್ ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಸೋತ ಪಾಕ್: ಕುಣಿದಾಡಿದ ಆಫ್ಘನ್ನರು

ಶಾರ್ಜಾ: ಇಲ್ಲಿ ನಡೆದ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಫೈನಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ತಂಡವು ಪಂದ್ಯ ಸೋತಿದ್ದು, ಆಫ್ಘನ್ನರು ಖುಷಿಯಿಂದ ಕುಣಿಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. #Afghans 🇦🇫 Celebrations in Capital #Kabul , #Afghanistan to celebrate Sri Lanka's victory over Pakistan in the #AsiaCup2022Final . pic.twitter.com/8ZnFkN5aKv — Abdulhaq Omeri (@AbdulhaqOmeri) September 11, 2022 ಶ್ರೀಲಂಕಾವು 171 ರನ್ ಪೇರಿಸಿದ್ದರೆ, ಪಾಕಿಸ್ತಾನವು ಈ […]