ಸೀತಾ ನದಿಗೆ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ ಭಾಗದಲ್ಲಿ ಹರಿಯುತ್ತಿರುವ ಸೀತಾ ನದಿಗೆ ಬ್ರಹ್ಮಾವರ ತಾಲೂಕಿನ 2 ಭಾಗದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ರೂ 311.25 ಕೋಟಿ ಮೊತ್ತದ ಯೋಜನೆಗೆ ಸೆಪ್ಟೆಂಬರ್ 14 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಭಾಗದ ಪ್ರಮುಖ ಬೇಡಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವರಾದ ಕೆ. […]

ಬಿ747 ಜಂಬೋ ಜೆಟ್ ನಲ್ಲಿ ಭಾರತಕ್ಕೆ ಬರಲಿವೆ 8 ಚಿರತೆಗಳು: ವಿಮಾನದ ಮನಮೋಹಕ ಚಿತ್ರ ಹಂಚಿಕೊಂಡ ಅಧಿಕಾರಿಗಳು

ವಿಂಡ್‌ಹೋಕ್‌: ವಿಶೇಷ ವಿಮಾನವೊಂದು ನಮೀಬಿಯಾದಿಂದ ಭಾರತಕ್ಕೆ ಚಿರತೆಗಳನ್ನು ಕರೆತರುತ್ತಿರುವ ಸುಂದರ ಚಿತ್ರ ಕಣ್ಮುಂದೆ ಬಂದಿದೆ. ಇದರಲ್ಲಿ ಚಿರತೆಗಳ ಸುಂದರ ವರ್ಣಚಿತ್ರಗಳನ್ನು ಮಾಡಲಾಗಿದೆ. ವಿಮಾನಯಾನ ಸಂಸ್ಥೆಯು ಈ ವಿಮಾನಕ್ಕೆ 118 ಎನ್ನುವ ವಿಶೇಷ ಸಂಖ್ಯೆ ನೀಡಿದೆ. ಈ ಕಂಪನಿಯು ಇದೆ ಮೊದಲ ಬಾರಿಗೆ ಚಿರತೆಗಳನ್ನು ಸ್ಥಳಾಂತರಿಸುತ್ತಿದೆ. ಈ ದೊಡ್ಡ ವಿಮಾನದಲ್ಲಿ 8 ಚಿರತೆಗಳನ್ನು ಭಾರತಕ್ಕೆ ತರಲಾಗುವುದು. ಚಿರತೆಗಳನ್ನು ಭಾರತಕ್ಕೆ ತರಲು ವಿಶೇಷ ವಿಮಾನ ನಮೀಬಿಯಾಕ್ಕೆ ಆಗಮಿಸಿದ್ದು, ನಮೀಬಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ವಿಮಾನದ ಚಿತ್ರವನ್ನು ಟ್ವೀಟ್ ಮಾಡಿದೆ. A […]

ಫಾರ್ಚ್ಯೂನ್ ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಸಾಂಪ್ರದಾಯಿಕ ದಿನ ಆಚರಣೆ

ಬ್ರಹ್ಮಾವರ: ಇಲ್ಲಿನ ಮಧುವನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಫಾರ್ಚ್ಯೂನ್ ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಓಣಂ ಸಂಭ್ರಮ ಆಚರಣೆಯ ಅಂಗವಾಗಿ ಸಂಭ್ರಮ -2022 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಬುಧವಾರದಂದು ಸಾಂಪ್ರದಾಯಿಕ ದಿನವನ್ನು ಮದರ್ ಪ್ಯಾಲೇಸ್ ಆಡಿಟೋರಿಯಂನಲ್ಲಿ  ಆಚರಿಸಲಾಯಿತು. ಕಾರ್ಯಕ್ರಮವನ್ನು ಫಾರ್ಚ್ಯೂನ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ತಾರಾನಾಥ್ ಶೆಟ್ಟಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲೆ ಸ್ಮಿತಾ ವಿಜೇತರಿಗೆ ಬಹುಮಾನ ವಿತರಿಸಿದರು. ಕಾಲೇಜಿನ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗಗನಕ್ಕೇರಿದ ಹಸಿರು ಸೊಪ್ಪಿನ ಬೆಲೆ: ಹೈರಾಣಾದ ಗ್ರಾಹಕರು

ಉಡುಪಿ: ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಭಾರೀ ಮಳೆಯು ತರಕಾರಿಗಳ ಬೆಲೆಯನ್ನು ಹೆಚ್ಚಿಸಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ನೆರೆ ಹಾವಳಿಯಿಂದಾಗಿ ಹಸಿರು ಸೊಪ್ಪು ತರಕಾರಿಗಳು ಹೆಚ್ಚು ಹಾನಿಗೊಳಗಾಗಿವೆ. ಪ್ರವಾಹದಿಂದಾಗಿ ಅನೇಕ ಸಣ್ಣ ಮಾರುಕಟ್ಟೆಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿರುವುದರಿಂದ ದೊಡ್ಡ ಮಾರುಕಟ್ಟೆಗಳಿಗೆ ತಾಜಾ ತರಕಾರಿಗಳು ಬರುತ್ತಿಲ್ಲ. ಇನ್ನೂ ಕೆಲವು ವಾರಗಳವರೆಗೆ ಈ ಕೊರತೆ ಮುಂದುವರಿಯುವ ಸಾಧ್ಯತೆಯಿದ್ದು, ತರಕಾರಿ ಬೆಲೆಗಳು ಶೀಘ್ರದಲ್ಲೇ ಕಡಿಮೆಯಾಗುವ ಲಕ್ಷಣಗಳಿಲ್ಲ. ಇನ್ನೇನು ಸ್ವಲ್ಪ ದಿನಗಳಲ್ಲೇ ನವರಾತ್ರಿ ಹಬ್ಬ ಮತ್ತು ಮದುವೆ ಸಮಾರಂಭಗಳು ಶುರುವಾಗಲಿದ್ದು, ತರಕಾರಿ ಬೆಲೆಗಳು […]

ದೇಶದ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಸಮಸ್ತ ಇಂಜಿನಿಯರ್ ಗಳಿಗೆ ಇಂಜಿನಿಯರಿಂಗ್ ದಿನದ ಶುಭಾಶಯಗಳು

ಭೋರ್ಗರೆಯುತ್ತಾ ಧುಮ್ಮಿಕ್ಕುವ ಜೋಗದ ಜಲಪಾತವನ್ನು ಕಂಡು ಒಬ್ಬ ಭಾವಾತುರನಾಗಿ ಕಾವ್ಯ ರಚಿಸಿ ಧನ್ಯನಾಗುತ್ತಾನೆ. ಅದೆ ಮತ್ತೊಬ್ಬ ಇಷ್ಟೊಂದು ನೀರು ಪೋಲಾಗುತ್ತಿದೆಯಲ್ಲಾ? ಇದಕ್ಕೆ ಅಣೆಕಟ್ಟು ಕಟ್ಟಿ ವಿದ್ಯುತ್ ಉತ್ಪಾದಿಸಬಹುದಲ್ಲಾ ಅಥವಾ ನೀರಾವರಿಗೆ ಬಳಸಬಹುದಲ್ಲಾ ಎಂದು ಯೋಚಿಸುತ್ತಾನೆ. ಒಬ್ಬ ಕವಿಗೂ ಒಬ್ಬ ವಿಜ್ಞಾನಿಗೂ ಇರುವ ವ್ಯತ್ಯಾಸವೆಂದರೆ ಇದುವೆ. ಇಬ್ಬರೂ ಅವರವರ ಕ್ಷೇತ್ರದಲ್ಲಿ ಶ್ರೇಷ್ಠರು. ಆಧುನಿಕ ಮೈಸೂರಿನ ಶಿಲ್ಪಿ ಸರ್ ಎಮ್ ವಿಶ್ವೇಶ್ವರಯ್ಯನವರ ಜನ್ಮದಿನವನ್ನು ದೇಶಾದ್ಯಂತ ಇಂಜಿನಿಯರರ ದಿನಾಚರಣೆಯಾಗಿ ಆಚರಿಸುತ್ತೇವೆ. ವಿಶ್ವೇಶ್ವರಯ್ಯನವರು ಕೇವಲ ಒಬ್ಬ ಶ್ರೇಷ್ಠ ಇಂಜಿನಿಯರ್ ಮಾತ್ರವಲ್ಲ, ಅವರು ವಿಜ್ಞಾನಿ […]