ಪಹಣಿಪತ್ರವಿಲ್ಲದೆ ಪರದಾಡುತ್ತಿರುವ ಹಳ್ಳಿಹೊಳೆ ಕೃಷಿಕರು: ಜಿಲ್ಲಾಧಿಕಾರಿ ಮುಂದೆ ಅಹವಾಲು ತೋಡಿಕೊಂಡ ಗ್ರಾಮಸ್ಥರು

ಉಡುಪಿ: ಹಳ್ಳಿಹೊಳೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆದ, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ಬೈಂದೂರು ತಾಲೂಕು ವ್ಯಾಪ್ತಿಯ ಅತ್ಯಂತ ಕುಗ್ರಾಮಗಳಲ್ಲಿ ಒಂದಾದ ಹಳ್ಳಿಹೊಳೆ ಗ್ರಾಮದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ವಿವಿಧ ಮೂಲಭೂತ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ, ನೆಟ್‌ವರ್ಕ್ ಸಮಸ್ಯೆ, ಕಾಲುಸಂಕದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ಸಾರ್ವಜನಿಕರು, […]

ಮಲ್ಪೆ ಕಡಲ ತೀರದಲ್ಲಿ ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಭೂ ವಿಜ್ಞಾನ ಇಲಾಖೆ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರೂ ಯುವ ಕೇಂದ್ರ ಹಾಗೂ ಸ್ಧಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೀಚ್ ಸ್ವಚ್ಛತೆ ಹಾಗೂ ಸುರಕ್ಷತೆಯ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನವು ಶನಿವಾರದಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ನಿಸರ್ಗ ದತ್ತವಾಗಿ ದೊರಕಿರುವ ಸುಂದರವಾದ ಕಡಲ ತೀರಗಳನ್ನು ಸ್ವಚ್ಛ ಹಾಗೂ […]

ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ರಕ್ತದಾನ: ಹೊಸ ವಿಶ್ವ ದಾಖಲೆ ಸೃಷ್ಟಿಸಿದ ಭಾರತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ರಕ್ತದಾನ ಅಮೃತ ಮಹೋತ್ಸವ’ ಕಾರ್ಯಕ್ರಮದ ಅಡಿಯಲ್ಲಿ ಭಾರತವು ನಿನ್ನೆ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ರಕ್ತದಾನಗಳ ಹೊಸ ವಿಶ್ವ ದಾಖಲೆಯನ್ನು ಬರೆದಿದೆ. ಇದು ದೇಶದಾದ್ಯಂತ ನಡೆದ ಅತಿ ದೊಡ್ಡ ರಕ್ತದಾನ ಅಭಿಯಾನವಾಗಿತ್ತು. ಶನಿವಾರದಂದು 6112 ಕ್ಕೂ ಹೆಚ್ಚು ಅನುಮೋದಿತ ಶಿಬಿರಗಳಲ್ಲಿ 1 ಲಕ್ಷಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿದ್ದು, ಈ ಸಂಖ್ಯೆ ಇನ್ನೂ ಹೆಚ್ಚುತ್ತಲಿದೆ. ಈ ಅಭಿಯಾನವು ನಿಯಮಿತ ಸಂಭಾವನೆ ಪಡೆಯದ ಸ್ವಯಂಪ್ರೇರಿತ ರಕ್ತದಾನಗಳ ಬಗ್ಗೆ […]

ಕಲೆ ಮತ್ತು ವಾಸ್ತು ಶಿಲ್ಪಕ್ಕೆ ವಿಶ್ವಕರ್ಮರು ಮೂಲಪುರುಷರು: ರಘುಪತಿ ಭಟ್

ಉಡುಪಿ: ವಿಶ್ವಕರ್ಮರು ಪ್ರಾತಃಸ್ಮರಣೀಯರಾಗಿದ್ದು, ಅವರಿಂದಾಗಿ ವಿಶ್ವದಲ್ಲಿ ಕಲೆ ಮತ್ತು ವಾಸ್ತುಶಿಲ್ಪ ಆರಂಭಗೊಂಡಿದೆ. ಪುರಾಣಗಳಲ್ಲಿ ಉಲ್ಲೇಖಿಸಿದಂತೆ ಪ್ರಸಿದ್ಧ ಕ್ಷೇತ್ರಗಳು, ವಾಸ್ತುಶಿಲ್ಪ ಕಲೆಗಳು, ವಿಶ್ವಕರ್ಮರಿಂದ ರಚಿತವಾಗಿದ್ದು, ಸುಪ್ರಸಿದ್ಧ ದ್ವಾರಕ ನಗರವು ಇವರ ಸೃಷ್ಟಿಗಳಲ್ಲೊಂದಾಗಿದ್ದು, ಕಲೆ ಮತ್ತು ವಾಸ್ತು ಶಿಲ್ಪಕ್ಕೆ ಇವರೇ ಮೂಲ ಪುರುಷರು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಶನಿವಾರದಂದು ನಗರದ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ […]