ಏಣಗುಡ್ಡೆ ವೀರಸ್ತಂಭ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

ಕಟಪಾಡಿ: ಏಣಗುಡ್ಡೆ ವೀರಸ್ತಂಭ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ. 26 ಸೋಮವಾರದಿಂದ ಮೊದಲ್ಗೊಂಡು ಅ.04 ಮಂಗಳವಾರ ಪರ್ಯಂತ ಅಗ್ರಹಾರ ವೀರಸ್ತಂಭ ಶ್ರೀ ದುರ್ಗಾಪರಮೇಶ್ವರಿ ದೇವರ ದಿವ್ಯ ಸನ್ನಿಧಿಯಲ್ಲಿನವರಾತ್ರಿ ಮಹೋತ್ಸವ ನಡೆಯಲಿರುವುದು. ಸೆ. 30 ಶುಕ್ರವಾರದಂದು ಜರಗಲಿರುವ ಚಂಡಿಕಾಯಾಗ ಪೂರ್ಣಾಹುತಿ ಗಂಟೆ 11.00ಕ್ಕೆ ಹಾಗೂ ಮಹಾ ಅನ್ನಸಂತರ್ಪಣೆಯು ಮಧ್ಯಾಹ್ನ ಗಂಟೆ 1.00 ಕ್ಕೆ ಜರಗಲಿರುವುದು. ಈ ಪ್ರಸನ್ನ ಸಮಯದಲ್ಲಿ ತಾವು ಸಮಿತ್ರ ಬಾಂಧವರಾಗಿ ಆಗಮಿಸಿ, ತನು- ಮನ- ಧನಗಳಿಂದ ಸಹಕರಿಸಿ, ಶ್ರೀದೇವಿಯ ಶ್ರೀಮುಡಿ ಗಂಧ- ಪ್ರಸಾದವನ್ನು ಸ್ವೀಕರಿಸಿ, ಕೃತಾರ್ಥರಾಗಬೇಕೆಂದು […]

ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ

ಮಂದಾರ್ತಿ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ಸೆ. 26 ಸೋಮವಾರದಿಂದ ಮೊದಲ್ಗೊಂಡು ಅ.05 ಬುಧವಾರ ಪರ್ಯಂತ ದೇವೀ ಸನ್ನಿಧಿಯಲ್ಲಿ ನವರಾತ್ರಿ ವಿಶೇಷ ಪೂಜಾ ಸಮಾರಂಭವು ನಡೆಯಲಿದ್ದು, ಅ.02 ಆದಿತ್ಯವಾರ ಮೂಲಾ ನಕ್ಷತ್ರ ದಿನದಂದು ಚಂಡಿಕಾಯಾಗವು ಜರಗಲಿರುವುದು. ನವರಾತ್ರಿಯ ಈ ಕಾರ್ಯಕ್ರಮಗಳಿಗೆ ತಾವೆಲ್ಲರೂ ಆಗಮಿಸಿ, ತನು- ಮನ- ಧನ- ಧಾನ್ಯಾದಿಗಳಿಂದ ಸಹಕರಿಸಿ, ಶ್ರೀದೇವಿಯ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷಿಸುತ್ತೇವೆ. ಸ್ಥಳವಂದಿಗರ ಪರವಾಗಿ, ಎಸ್‌.ಸಿ.ಕೊಟಾರಗಸ್ತಿ ಕಾರ್ಯನಿರ್ವಹಣಾಧಿಕಾರಿ ಹೆಚ್. ಧನಂಜಯ ಶೆಟ್ಟಿ ಅಧ್ಯಕ್ಷರು ಹೆಚ್. ಸುರೇಂದ್ರ ಶೆಟ್ಟಿ- […]

ಸೆ. 28 ರಂದು ನಟನಂ ಇನ್ಸ್ಟಿಟ್ಯೂಟ್ ಆಫ್ ಡಾನ್ಸ್ ವತಿಯಿಂದ ಪುರಂದರದಾಸರ ಜೀವನಾಧಾರಿತ ನೃತ್ಯರೂಪಕ ಪ್ರದರ್ಶನ

ಉಡುಪಿ: ದಾಸ ಶ್ರೇಷ್ಠ ಪುರಂದರದಾಸರು ನಾರದಂಶ ಸಂಭೂತರು. ಇವರು ಕರ್ನಾಟಕ ಶಾಸ್ತ್ರೀಯ ಸಂಗೀತ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅನೇಕ ದೇವರ ನಾಮಗಳು, ಉಗಾಭೋಗಗಳು, ಸುಳಾದಿಗಳನ್ನು ಬರೆದಿದ್ದಾರೆ. ಇವರನ್ನು “ಕರ್ನಾಟಕ ಸಂಗೀತದ ಪಿತಾಮಹ” ಎಂದು ಕರೆಯುತ್ತಾರೆ. ಸಣ್ಣ ಮಕ್ಕಳಿಗೆ ಸುಲಭವಾಗಿ ಸಂಗೀತವನ್ನು ಕಲಿಯಲು ಸರಳೆ ವರಸೆ, ಜಂಟಿವರಸೆ, ಅಲಂಕಾರಗಳು, ಪಿಳ್ಳಾರಿ ಗೀತೆಗಳನ್ನು ರಚಿಸಿದ್ದಾರೆ. ಸಮಾಜದಲ್ಲಿ ಇರುವ ಡಾಂಭಿಕತನ, ಮೂಢನಂಬಿಕೆಯಿಂದ ಹಿಡಿದು ಆಧ್ಯಾತ್ಮದವರೆಗೆ ದೇವರ ನಾಮಗಳನ್ನು ಬರೆದಿದ್ದಾರೆ. ಇಂತಹ ದಾಸ ಶ್ರೇಷ್ಠರ ಅನೇಕ ಕೃತಿಗಳಲ್ಲಿ ಅವರ ಜೀವನ ಚರಿತ್ರೆಗೆ […]

ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ಇಂದು‌ ಸಂಜೆ ಶರನ್ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ ಸಮಾರಂಭ

ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಸೆ.26 ರಿಂದ ಅ.05 ವರೆಗೆ ನಡೆಯುವ ಶರನ್ನವರಾತ್ರಿ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರದ ಉದ್ಘಾಟನಾ ಸಮಾರಂಭವು ಸೆ.26 ಸೋಮವಾರ ಸಂಜೆ: 6.30ಕ್ಕೆ, ಸ್ಥಳ ಗಾಲವ ಮಂಟಪ, ಶ್ರೀ ಮಹಿಷಮರ್ದಿನೀ ದೇವಸ್ಥಾನ, ನೀಲಾವರದಲ್ಲಿ ನಡೆಯಲಿದೆ. ಉಡುಪಿ ಶಾಸಕರಾದ ಕೆ. ರಘುಪತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಘುರಾಮ ಮಧ್ಯಸ್ಥ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಹೇಂದ್ರ ಕುಮಾರ್, ಕನ್ನಾರು ಶ್ರೀ […]

ಉಡುಪಿ ಜಿಲ್ಲೆಯಲ್ಲಿ 40% ಕಮಿಷನ್ ವ್ಯವಹಾರ ಇಲ್ಲ: ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಉಡುಪಿ: ರಾಜ್ಯ ಸರ್ಕಾರ 40% ಕಮಿಷನ್ ಕೇಳುತ್ತೆ ಅನ್ನೋ ಆರೋಪ ಮಾಡಲಾಗಿದ್ದು ಈ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಂದ ಜನರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದು, ಅದಕ್ಕೆ ಉತ್ತರ ನೀಡುವ ಅವಶ್ಯಕತೆ ಇದೆ. ಇಲ್ಲದಿದ್ದಲ್ಲಿ ನಾವೂ ಕೂಡಾ ಇದರಲ್ಲಿ ಭಾಗಿಯಾಗಿದ್ದೇವೆ ಎನ್ನುವ ಅನುಮಾನ ಜನರಲ್ಲಿ ಮೂಡುತ್ತದೆ. ಉಡುಪಿ ಜಿಲ್ಲೆಯಲ್ಲಿ 25 ವರ್ಷದಿಂದ ಗುತ್ತಿಗೆ ಕಾಮಗಾರಿಗಳನ್ನು ನಡೆಸುತ್ತಿದ್ದೇವೆ. ಇಲ್ಲಿ ಕಳೆದ 25 […]