ಪದುಮನಾಭನಿಗೆ ಪದ್ಮಾವತಿ ಅಲಂಕಾರ

ಉಡುಪಿ: ನವರಾತ್ರಿ ಸಂದರ್ಭದಲ್ಲಿ ದಿನಕ್ಕೊಂದು ಅಲಂಕಾರದಲ್ಲಿ ಕಂಗೊಳಿಸುವ ಜಗದೊಡೆಯ ಪದ್ಮನಾಭನಿಗೆ ಇಂದು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು “ಪದ್ಮಾವತಿ” ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಮುಂದಿನ ಎರಡು ದಿನ ಕರಾವಳಿಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯ ಮುನ್ಸೂಚನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಎರಡು ದಿನ ಕರಾವಳಿ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಅ.1 ರಂದು 64.5ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಾಂಗ್ರೆಸ್ ಭಾರತವನ್ನು ಎಲ್ಲಿ ವಿಭಜಿಸಿತ್ತೋ ಅಲ್ಲೇ ಜೋಡಿಸಲಿ: ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಉಡುಪಿ: ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಭಾರತವನ್ನು ಎಲ್ಲಿ ವಿಭಜನೆ ಮಾಡಿದೆಯೋ ಅಲ್ಲಿ ಹೋಗಿ ಭಾರತ್ ಜೋಡೋ ಮಾಡಬೇಕು. ಕಾಂಗ್ರೆಸ್ ನ ನೇತೃತ್ವದ ಸರ್ಕಾರ ಇರುವ ಸಂದರ್ಭದಲ್ಲಿ ಪಾಕ್ ಆಕ್ರಮಿತ ಕಾಶ್ಮೀರವಾಯಿತು. ಇವತ್ತಿನ ಪಾಕ್ ಆಕ್ರಮಿತ ಕಾಶ್ಮೀರ ಯಾರ ಕೊಡುಗೆ? ಕಾಂಗ್ರೆಸ್ಸಿನ ಕೊಡುಗೆ. ತೀನ್ ಭೀಗಾ ಎನ್ನುವ ಆಯಕಟ್ಟಿನ ಪ್ರದೇಶವನ್ನು 99 ವರ್ಷಕ್ಕೆ ಗುತ್ತಿಗೆ ಕೊಟ್ಟಿದ್ದು […]

ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಹೃದಯಾಘಾತವಾಗಲು ಕಾರಣವೇನು? ನಿಮ್ಮ ಹೃದಯದ ದನಿ ಕೇಳಿಸಿಕೊಳ್ಳಿ…

ಇತ್ತೀಚೆಗೆ ಟ್ರೆಡ್‌ಮಿಲ್‌ನಲ್ಲಿ ವ್ಯಾಯಾಮ ಮಾಡುವಾಗ ಅಥವಾ ಜಿಮ್ ನಲ್ಲಿ ಇತರ ರೀತಿಯ ತೀವ್ರವಾದ ವ್ಯಾಯಾಮವನ್ನು ಮಾಡುವಾಗ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚು ಕಂಡುಬರುತ್ತಿವೆ. ವ್ಯಾಯಾಮವು ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ ಮತ್ತು ಹೃದಯಾಘಾತವನ್ನು ತಡೆಯುತ್ತದೆ ಎಂದು ನಂಬಲಾಗುತ್ತಿದ್ದರೂ ಇದರಿಂದ ಪ್ರತಿಕೂಲ ಪರಿಣಾಮಗಳಾಗುತ್ತಿರುವುದು ಎಲ್ಲರನ್ನೂ ವ್ಯಾಯಾಮದ ಬಗ್ಗೆ ಮರು ಚಿಂತನೆ ಮಾಡುವಂತೆ ಮಾಡಿದೆ. ವ್ಯಾಯಮಕ್ಕೂ ಪೂರ್ವದ ಆರೋಗ್ಯ ಸ್ಥಿತಿಯ ನಿರ್ದಿಷ್ಟ ಸಂದರ್ಭಗಳು ಮತ್ತು ವ್ಯಾಯಾಮದ ತೀವ್ರತೆಯು ಸಂದರ್ಭಾನುಸಾರವಾಗಿ ಬದಲಾಗಬಹುದು. ಈ ಸ್ಪಷ್ಟ ವಿರೋಧಾಭಾಸವನ್ನು ವಿವರಿಸಲು ಸಹಾಯ ಮಾಡುವ ಕೆಲವು […]

ಕೆಜಿಎಫ್ ಬ್ಯಾನರ್, ಲೂಸಿಯಾ ಡೈರೆಕ್ಟರ್ ಜೊತೆಗೂಡಿದ ಫಹಾದ್ ಫಾಸಿಲ್: ಅ.9 ರಂದು ಸೆಟ್ಟೇರಲಿದೆ ‘ಧೂಮಮ್’

ಕೆಜಿಎಫ್ ಸರಣಿಯ ಭರ್ಜರಿ ಯಶಸ್ಸಿನ ನಂತರ, ಫಹದ್ ಫಾಸಿಲ್ ನಾಯಕರಾಗಿ ‘ಧೂಮಮ್’ ಎಂಬ ಹೊಸ ಚಲನಚಿತ್ರವನ್ನು ನಿರ್ಮಿಸುವ ಬಗ್ಗೆ ಹೊಂಬಾಳೆ ಫಿಲಂಸ್ ಟ್ವಿಟರ್ ನಲ್ಲಿ ಘೋಷಿಸಿದೆ. ಹೊಂಬಾಳೆ ಫಿಲಂಸ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಧೂಮಮ್ ಚಿತ್ರದ ಮೊದಲ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಥ್ರಿಲ್ಲರ್ ಕಥೆ ಹೊಂದಿರುವ ಚಿತ್ರವನ್ನು ಈ ಹಿಂದೆ ಲೂಸಿಯಾ ಮತ್ತು ಯು-ಟರ್ನ್ ಚಿತ್ರಗಳನ್ನು ಬರೆದು, ನಿರ್ದೇಶಿಸಿದ್ದ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಧೂಮಮ್ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ಅಪರ್ಣಾ ಬಾಲಮುರಳಿ ನಾಯಕಿಯಾಗಿದ್ದಾರೆ. […]