ಭಾರತದ ಕೂಟನೀತಿಗೆ ಜಯ: ಆಸ್ಟ್ರೇಲಿಯಾ ವಿರುದ್ದದ ಕರಡು ನಿರ್ಣಯ ವಾಪಾಸ್ ಪಡೆದ ಚೀನಾ

ವಿಯೆನ್ನಾ: ಶನಿವಾರ ವಿಯೆನ್ನಾದಲ್ಲಿ ನಡೆದ ಅಂತರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ ಸಾಮಾನ್ಯ ಸಮ್ಮೇಳನದಲ್ಲಿ ಅಮೇರಿಕಾ-ಯುಕೆ-ಆಸ್ಟ್ರೇಲಿಯಾ ಪರಮಾಣು ಜಲಾಂತರ್ಗಾಮಿ ಒಪ್ಪಂದದ ವಿರುದ್ಧ ನಿರ್ಣಯವನ್ನು ಅಂಗೀಕರಿಸುವ ಚೀನಾದ ಪ್ರಯತ್ನವನ್ನು ತಡೆಯುವಲ್ಲಿ ಭಾರತದ ಚತುರ ರಾಜತಾಂತ್ರಿಕತೆಯು ನೆರವಾಗಿದೆ. ಪರಮಾಣು-ಚಾಲಿತ ಜಲಾಂತರ್ಗಾಮಿ ನೌಕೆಗಳನ್ನು ಆಸ್ಟ್ರೇಲಿಯಾಕ್ಕೆ ಒದಗಿಸುವ ಎ.ಯುಕೆ.ಯುಎಸ್ ಸಂಯುಕ್ತ ಸಂಘಟೆನೆ ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ಚೀನಾ ಪ್ರಯತ್ನಿಸುತ್ತಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ದದ ಕರಡು ನಿರ್ಣಯಕ್ಕೆ ಬಹುಮತದ ಬೆಂಬಲ ಸಿಗದಂತೆ ನೋಡಿಕೊಳ್ಳಲು ಭಾರತವು ಅಂತರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ ಅನೇಕ ಸದಸ್ಯ ರಾಷ್ಟ್ರಗಳೊಂದಿಗೆ ನಿಕಟವಾಗಿ […]

ಗ್ರಾಮಪಂಚಾಯತ್ ತೆರಿಗೆ ಪಾವತಿಗೆ ಡಿಜಿಟಲ್ ವ್ಯವಸ್ಥೆ ಕಡ್ಡಾಯ: ಪ್ರಸನ್ನ ಹೆಚ್

ಉಡುಪಿ: ಸಾರ್ವಜನಿಕರು ಗ್ರಾಮ ಪಂಚಾಯತ್‌ಗಳಿಗೆ ವಿವಿಧ ತೆರಿಗೆ, ಶುಲ್ಕ ಸೇರಿದಂತೆ ಮತ್ತಿತರ ದರಗಳನ್ನು ಶನಿವಾರದಿಂದ ಕಡ್ಡಾಯವಾಗಿ ಡಿಜಿಟಲ್ ವ್ಯವಸ್ಥೆಯ ಮೂಲಕ ಪಾವತಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ತಿಳಿಸಿದರು. ಅವರು ಉಡುಪಿ ತಾಲೂಕಿನ ಕಲ್ಯಾಣಪುರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ನಗದು ರಹಿತ ವ್ಯವಹಾರಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಜನ ಸಾಮಾನ್ಯರು ವಿವಿಧ ತೆರಿಗೆಗಳು, ಶುಲ್ಕಗಳು, ದರಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ನಗದು ರಹಿತವಾಗಿ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ನಗದು […]

ಜಿಲ್ಲೆಯ ವಿದ್ಯಾರ್ಥಿಗಳು ಶ್ರೇಷ್ಠ ವಿಜ್ಞಾನಿಗಳಾಗಲಿ: ಲಾಲಾಜಿ ಮೆಂಡನ್

ಉಡುಪಿ: ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆದು ಶ್ರೇಷ್ಠ ವಿಜ್ಞಾನಿಗಳು ಮೂಡಿಬರಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು. ಅವರು ಅಲೆವೂರಿನ ಪ್ರಗತಿ ನಗರದಲ್ಲಿ, ಜಿಲ್ಲಾಡಳಿತ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್), ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ 4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ […]

ಬದಲಾಗುತ್ತಿರುವ ಭಾರತಕ್ಕಾಗಿ 5ಜಿ ವೇಗದ ನೆಟ್ ವರ್ಕ್: 5ಜಿ ಸೇವೆ ನೀಡುವ ಆಯ್ದ ದೇಶಗಳ ಗುಂಪಿಗೆ ಭಾರತ ಸೇರ್ಪಡೆ

ನವದೆಹಲಿ: ಭಾರತವು 5ಜಿ ದೂರಸಂಪರ್ಕ ಸೇವೆ ನೀಡುವ ಆಯ್ದ ದೇಶಗಳ ಗುಂಪಿಗೆ ಸೇರಿದೆ. ಶನಿವಾರ ನವದೆಹಲಿಯಲ್ಲಿ ನಡೆದ 6ನೇ ಇಂಡಿಯಾ ಮೊಬೈಲ್ ಕಾಂಗ್ರೆಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ 5ಜಿ ಸೇವೆಗಳಿಗೆ ಚಾಲನೆ ನೀಡಿದರು. ಏರ್‌ಟೆಲ್ ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು ಮತ್ತು ವಾರಣಾಸಿ ಸೇರಿದಂತೆ 8 ನಗರಗಳಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸಿದ್ದರೆ, ರಿಲಯನ್ಸ್ ಜಿಯೋ ದೀಪಾವಳಿಯ ವೇಳೆಗೆ ಪ್ರಾರಂಭಿಸಲಿದೆ. ವೊಡಾಫೋನ್ ಐಡಿಯಾ ಕೂಡ ಶೀಘ್ರದಲ್ಲೇ 5ಜಿ ಸೇವೆಯನ್ನು ಪ್ರಾರಂಭಿಸಲಿದೆ. ಇನ್ನು ಮುಂದೆ 4ಜಿ […]

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಂಭ್ರಮದ ದಾಂಡಿಯಾ ಮಹೋತ್ಸವ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 5ನೇ ವರ್ಷದ ದಾಂಡಿಯಾ ಮಹೋತ್ಸವ ಇಲ್ಲಿನ ಶೆರ್ವಾಣಿ ಮಂಟಪದ ಸಭಾಂಗಣದಲ್ಲಿ ಶನಿವಾರದಂದು ನಡೆಯಿತು. ಕನ್ನಡದ ಪ್ರಖ್ಯಾತ ಚಿತ್ರನಟ ರಮೇಶ ಅರವಿಂದ್ ಅವರು ದಾಂಡಿಯಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ನಗರಸಭಾ ಅಧ್ಯಕ್ಷೆ ಸುಮಿತಾ ನಾಯಕ್, ಕಡಿಯಾಳಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ.ರವಿರಾಜ್ ವಿ.ಆಚಾರ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ […]