ಹಿರಿಯಡಕ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ಸಾವು 

ಹಿರಿಯಡಕ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತ ಯುವಕನನ್ನು ಹಿರಿಯಡಕ ಸಮೀಪದ ಪುತ್ತಿಗೆ ನಿವಾಸಿ 18ವರ್ಷ ಪ್ರಾಯ ಸ್ಟ್ಯಾಲಿನ್ ಎಂದು ಗುರುತಿಸಲಾಗಿದೆ. ಈತ ಇಂದು ಮಧ್ಯಾಹ್ನ ಹಿರಿಯಡಕ ಪೇಟೆಯಿಂದ ಪುತ್ತಿಗೆ ಕಡೆಗೆ ಹೋಗುತ್ತಿದ್ದನು. ಈ ವೇಳೆ ಎದುರಿನಿಂದ ಬಂದ ಸ್ಕೋಡಾ ಕಾರೊಂದು ಡಿಕ್ಕಿಯಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಸ್ಟ್ಯಾಲಿನ್ ತಲೆಗೆ ಗಂಭೀರ […]

ಅ.31 ರಂದು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಯಾಗ

ಬನ್ನಂಜೆ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಅ.31 ಸೋಮವಾರದಂದು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶತರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ ರುದ್ರ ಯಾಗ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11ಗಂಟೆಗೆ ಪೂರ್ಣಾಹುತಿ ಬಳಿಕ ಮಹಾಪೂಜೆ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಂದಾಪುರ: ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪುರ: ನಾಡು ನುಡಿಯ ಬಗ್ಗೆ ಅಭಿಮಾನ ಮತ್ತು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸಿದ ‘ಕೋಟಿ ಕಂಠ ಗೀತಗಾಯನ’ ಕಾರ್ಯಕ್ರಮವನ್ನು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಂಶುಪಾಲರನ್ನು ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿಸಲಾಯಿತು. ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸಿ ಶಿಸ್ತು ಬದ್ಧವಾಗಿ ಸರ್ಕಾರವು ನಿಗದಿಪಡಿಸಿದ ಜಯಭಾರತ ಜನನಿಯ ತನುಜಾತೆ, ಉದಯವಾಗಲಿ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಂಡಿಮವ, ಹಚ್ಚೇವು ಕನ್ನಡದ ದೀಪ , ವಿಶ್ವವಿನೂತನ […]

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆ ಖಾಲಿ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿ ಸಶಸ್ತ್ರ ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸ್ಪೆಷಲ್ ಸರ್ಟಿಫಿಕೆಟ್ ಹೊಂದಿದ ಅಥವಾ ಸಶಸ್ತ್ರ ಪಡೆಗಳಿಂದ ಪದವಿ ಪ್ರಮಾಣ ಪತ್ರ ಹೊಂದಿದ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ […]

ಕಾರ್ಮಿಕ ಪರಿಹಾರ ಹಣ ಬಾಕಿ ಪ್ರಕರಣ: ಉಡುಪಿ ಅನಂತೇಶ್ವರ ಮತ್ತು ಚಂದ್ರಮೌಳೇಶ್ವರ ದೇವಸ್ಥಾನದ ವಿರುದ್ಧ ವಾರಂಟ್ ಜಾರಿಗೊಳಿಸಿದ ಜಿಲ್ಲಾ ನ್ಯಾಯಾಲಯ

ಉಡುಪಿ: ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಸ್ಟಿಸ್ ಶಾಂತವೀರ ಶಿವಪ್ಪನವರು ಶನಿವಾರ ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನದ, ಪುತ್ತಿಗೆ ಮಠದ ಟ್ರಸ್ಟಿಗೆ ಎರೆಸ್ಟ್ ವಾರಂಟ್ ಶೋಕಾಸ್ ನೋಟೀಸ್ ಜಾರಿ ಮಾಡಲು ಆದೇಶಿಸಿದೆ. ಉಡುಪಿ ಜಿಲ್ಲಾ ನ್ಯಾಯಾಧೀಶರ ಆದೇಶದ ಕಾರ್ಮಿಕ ಪರಿಹಾರ ಹಣ ನೀಡದೇ ಇರುವ ಹಿನ್ನಲೆಯಲ್ಲಿ ಹಾಗೂ ನ್ಯಾಯಾಲಯದ ಆದೇಶವನ್ನು ಪಾಲಿಸದ ಕಾರಣ ಪ್ರತಿವಾದಿ ಪುತ್ತಿಗೆ ಮಠದ ಸುಪರ್ದಿಯಲ್ಲಿರುವ ಉಡುಪಿ ರಥಬೀದಿಯ ಅನಂತೇಶ್ವರ ಮತ್ತು ಚಂದ್ರಮೌಳೇಶ್ವರ ದೇವಸ್ಥಾನದ ವಿರುದ್ಧ ವಾರಂಟ್ ಹೊರಡಿಸಿದೆ. ಫಿರ್ಯಾದಿದಾರರಾದ ಟಿ. […]