ಕಾಲನ ಜೊತೆ ಜಿದ್ದಿಗೆ ಬಿದ್ದು ಕಾಲನಲ್ಲಿ ಲೀನರಾನ ಮಹಾನ್ ಚೇತನ ಶಂಕರ್ ನಾಗ್ ರವರ 68 ನೇ ಜನ್ಮ ದಿನ

ಇವತ್ತು ಕನ್ನಡ ಚಿತ್ರರಂಗದ ಯಶಸ್ಸನ್ನು ಕಂಡಾಗ ಪ್ರತಿಯೊಬ್ಬರ ಮನಸ್ಸಿನಲ್ಲೂ ಮೂಡುವ ವಿಚಾರ ಶಂಕರ್ ನಾಗ್ ಇದ್ದಿದ್ದರೆ ಈ ಯಶಸ್ಸು ಯಾವತ್ತೋ ಬಂದಿರುತ್ತಿತ್ತು. ಶಂಕರ್ ನಾಗ್ ಬರಿಯ ವ್ಯಕ್ತಿಯಲ್ಲ, ಅವರೊಂದು ಶಕ್ತಿ. ಅದಮ್ಯ ಚೈತನ್ಯ, ಎಂದಿಗೂ ಬತ್ತದ ಉತ್ಸಾಹ, ಕಾಲಕ್ಕಿಂತ ಒಂದು ಹೆಜ್ಜೆ ಮುಂದಿರಬೇಕೆನ್ನುವ ತುಡಿತ. ಕಾಲನ ಜೊತೆ ಜಿದ್ದಿಗೆ ಬಿದ್ದು ಕಾಲನಲ್ಲಿ ಲೀನರಾಗಿ 32 ವರ್ಷಗಳು ಸಂದರೂ ಶಂಕರ್ ನಾಗ್ ನೆನಪು ಎಳ್ಳಷ್ಟೂ ಮಾಸಿಲ್ಲ. ಅವರಿಂದು ನಮ್ಮ ಜೊತೆಗಿರುತ್ತಿದ್ದರೆ ಅವರಿಗೆ 68 ವರ್ಷ ತುಂಬುತ್ತಿತ್ತು. ಇಷ್ಟು ವರ್ಷಗಳಲ್ಲಿ […]

ಮಣ್ಣು ಮತ್ತು ರಾಸಾಯನಿಕದ ಹಂಗಿಲ್ಲದೆ ತನ್ನ 3 ಅಂತಸ್ತಿನ ಮನೆಯಲ್ಲಿ ತರಕಾರಿ ಬೆಳೆದು 70 ಲಕ್ಷ ಗಳಿಸುವ ಮಾಜಿ ಪತ್ರಕರ್ತ!

ಬೆಂಡೆಕಾಯಿ, ಮೆಣಸಿನಕಾಯಿ, ಕ್ಯಾಪ್ಸಿಕಂ, ಸೋರೆಕಾಯಿ, ಟೊಮೆಟೊ, ಹೂಕೋಸು, ಪಾಲಕ್, ಎಲೆಕೋಸು, ಸ್ಟ್ರಾಬೆರಿ, ಮೆಂತ್ಯ ಮತ್ತು ಹಸಿರು ಬಟಾಣಿ….ಒಂದಲ್ಲ ಎರಡಲ್ಲ ಹತ್ತು ಹಲವು ಬಗೆಯ ತರಕಾರಿಗಳು ಈ ವ್ಯಕ್ತಿಯ ಮನೆಯಲ್ಲಿ ಬೆಳೆಯುತ್ತದೆ! ಮಣ್ಣಿಲ್ಲ, ರಾಸಾಯನಿಕಗಳ ಹಾವಳಿ ಇಲ್ಲ. ಮನೆಯ ಬಾಲ್ಕನಿ, ಕಿಟಕಿ , ತಾರಸಿ, ಎಲ್ಲಿ ನೋಡಿದರಲ್ಲಿ ಹಸಿ ಹಸಿ ತಾಜಾ ತಾಜಾ ತರಕಾರಿ. 3 ಅಂತಸ್ತಿನ ಮನೆಯಲ್ಲಿ ತರಕಾರಿ ಬೆಳೆಯುವ ಇವರ ವಾರ್ಷಿಕ ಆದಾಯ ಬರೋಬ್ಬರಿ 70 ಲಕ್ಷ ರೂ! ಇದು ಉತ್ತರ ಪ್ರದೇಶದ ಬರೇಲಿ ನಿವಾಸಿ […]

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ. ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಇಲ್ಲಿನ ರಾಷ್ಟ್ರಪತಿ ಭವನದ ಮೆಜೆಸ್ಟಿಕ್ ಲಾನ್ಸ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಇವರ ತಂದೆ ವೈ ವಿ ಚಂದ್ರಚೂಡ್ ರವರು ಫೆಬ್ರವರಿ 22, 1978 ರಿಂದ ಜುಲೈ 11, 1985 ರವರೆಗೆ ಸುದೀರ್ಘ ಸೇವೆ ಸಲ್ಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾಯಮೂರ್ತಿ ಚಂದ್ರಚೂಡ್ ರವರು ನವೆಂಬರ್ 10, 2024 ರವರೆಗೆ […]

ಕಾಡುಬೆಟ್ಟು ಶನೇಶ್ವರ ದೇವಸ್ಥಾನದಲ್ಲಿ ಚಂದ್ರಗ್ರಹಣ ಶಾಂತಿ ಹೋಮ

ಉಡುಪಿ: ಅಬ್ಬಗ ದಾರಗ ವೀರಭದ್ರ ಮತ್ತು ಶನೇಶ್ವರ ದೇವಸ್ಥಾನ ಟ್ರಸ್ಟ್ ಕಾಡುಬೆಟ್ಟು ವತಿಯಿಂದ ಶನೇಶ್ವರ ದೇವಸ್ಥಾನದಲ್ಲಿ ಚಂದ್ರ ಗ್ರಹಣ ಪ್ರಯುಕ್ತ ಮಂಗಳವಾರದಂದು ಲೋಕಕಲ್ಯಾಣಾರ್ಥವಾಗಿ ಸಂಜೆ ಸಾಮೂಹಿಕ ಚಂದ್ರಗ್ರಹಣ ಶಾಂತಿ ಹೋಮ ನಡೆಯಿತು. ದೇವಳದ ಅರ್ಚಕರು , ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ

ಹೆಬ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು. ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಆಚಾರ್ಯ ಮಾತನಾಡಿ, ಶಿಕ್ಷಣದಿಂದ ಸಮಾಜದಲ್ಲಿ ಸಮಾನತೆ ಸಾಧ್ಯ. ಅವಕಾಶ ವಂಚಿತ ಸಮುದಾಯಗಳಲ್ಲಿನ ವ್ಯಕ್ತಿಗಳನ್ನು ಮುಖ್ಯಭೂಮಿಕೆಗೆ ಕರೆತರುವಲ್ಲಿ ಶಿಕ್ಷಣದ ಪಾತ್ರ ಮಹತ್ವ. ಶಿಕ್ಷಣದಿಂದ ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಪ್ರತಿಯೊಬ್ಬರಲ್ಲೂ […]