ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಮತ್ತು ರಾಜಾ ರಾಮ್ ಮೋಹನ್ ರಾಯ್ ಗ್ರಂಥಾಲಯ ಪ್ರತಿಷ್ಠಾನ ಕೋಲ್ಕತ್ತಾ ಇವರ ಸಂಯುಕ್ತ ಆಶ್ರಯದಲ್ಲಿ ಆಧುನಿಕ ಭಾರತದ ಪಿತಾಮಹ ರಾಜಾರಾಮ್ ಮೋಹನ್ ರಾಯ್ ಅವರ ಜನ್ಮ ದಿನೋತ್ಸವ ಪ್ರಯುಕ್ತ ಮಹಿಳಾ ಸಬಲೀಕರಣದ ಕುರಿತು ವಿದ್ಯಾರ್ಥಿಗಳಿಂದ ಜಾಥಾ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಡಿಜಿಟಲ್ ಸದಸ್ಯತ್ವ ಅಭಿಯಾನ ಉತ್ತಮ ಸಿಬ್ಬಂದಿ/ ಉತ್ತಮ ಓದುಗ ಸೇವಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ. […]

ಶಂಕರನಾರಾಯಣ ಖಾಸಗಿ ಶಾಲೆಯ ಕ್ರೀಡೋತ್ಸವದಲ್ಲಿ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ: ಶಂಕರನಾರಾಯಣದ ಖಾಸಗಿ ಶಾಲೆಯೊಂದು ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವನ್ನು ಆಯೋಜಿಸಿತ್ತು. ಉದ್ಘಾಟನಾ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾಗತ ನೃತ್ಯ ಪ್ರದರ್ಶಿಸಿದ್ದರು. ಕ್ರೀಡೋತ್ಸವ ಪ್ರಾರಂಭಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಸುಮಾರು 30 ಸೆಕೆಂಡ್ ಗಳ ಕಾಲ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿಗಳ ಬಳಿ ನಮಾಜ್ ಮಾಡಿಸಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಹಿಂದೂ ವಿದ್ಯಾರ್ಥಿಗಳ ಮೇಲೆ ಒತ್ತಾಯ ಪೂರ್ವಕವಾಗಿ ಇಸ್ಲಾಂ ಆಚರಣೆಗಳನ್ನು ಹೇರಿಕೆ ಮಾಡಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ಶಂಕರನಾರಾಯಣ […]

ಟೆನಿಸ್ ಚಾಂಪಿಯನ್‌ಶಿಪ್ ಪುರುಷರ ಡಬಲ್ಸ್ ಸ್ಪರ್ಧೆ ಗೆದ್ದ ಧೋನಿ: ಮಾಹಿ ಇಲ್ಲಿಯೂ ಕಪ್ ಗೆಲ್ಲುತ್ತಿದ್ದಾರೆ ಎನ್ನುತ್ತಿದ್ದಾರೆ ಅಭಿಮಾನಿಗಳು

ರಾಂಚಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ಅವರ ನಾಯಕತ್ವದ ಸಮಯದಲ್ಲಿ ಭಾರತವು ಎಲ್ಲಾ ಐಸಿಸಿ ಪಂದ್ಯಾವಳಿಗಳನ್ನು ಗೆದ್ದಿದೆ. ಕ್ರಿಕೆಟ್ ಜೊತೆಗೆ ಅವರ ಫುಟ್ಬಾಲ್ ಪ್ರತಿಭೆಯನ್ನು ಅಭಿಮಾನಿಗಳು ನೋಡಿದ್ದಾರೆ. ನವೆಂಬರ್ 14 ರಂದು, ಸ್ಥಳೀಯ ಟೆನಿಸ್ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ಧೋನಿ ಮತ್ತೊಂದು ಗರಿಯನ್ನು ತಮ್ಮ ಮುಡಿಗೆ ಏರಿಸಿಕೊಂಡಿದ್ದಾರೆ. ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ (ಜೆಎಸ್‌ಸಿಎ)ಯು ಟೆನಿಸ್ ಚಾಂಪಿಯನ್‌ಶಿಪ್ ಅನ್ನು ಆಯೋಜಿಸಿದ್ದು, ಪುರುಷರ ಡಬಲ್ಸ್ […]

ವಾರ್ಷಿಕ 3,000 ಭಾರತೀಯ ವೃತ್ತಿಪರರಿಗೆ ವೀಸಾ ನೀಡಿಕೆ: ಯುಕೆ ಪ್ರಧಾನಿ ರಿಷಿ ಸುನಕ್ ರಿಂದ ಹಸಿರು ನಿಶಾನೆ

ಲಂಡನ್: ಯುಕೆ ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. ಇಂತಹ ಯೋಜನೆಯಿಂದ ಪ್ರಯೋಜನ ಪಡೆಯುವ ಮೊದಲ ವೀಸಾ-ರಾಷ್ಟ್ರೀಯ ದೇಶ ಭಾರತ ಎಂದು ಬ್ರಿಟಿಷ್ ಸರ್ಕಾರ ಹೇಳಿದ್ದು, ಕಳೆದ ವರ್ಷ ಒಪ್ಪಿಕೊಂಡ ಯುಕೆ-ಭಾರತ ವಲಸೆ ಮತ್ತು ಚಲನಾ ಪಾಲುದಾರಿಕೆಯ ಬಲವನ್ನು ಇದು ಎತ್ತಿ ತೋರಿಸುತ್ತದೆ ಎಂದಿದೆ. “ಇಂದು ಯುಕೆ-ಇಂಡಿಯಾ ಯಂಗ್ ಪ್ರೊಫೆಷನಲ್ಸ್ ಸ್ಕೀಮ್ ಅನ್ನು ದೃಢೀಕರಿಸಲಾಗಿದೆ, 18-30 ವರ್ಷ ವಯಸ್ಸಿನ ಪದವೀಧರ ಭಾರತೀಯ […]

ಮಂಗಳೂರು: ಶಾಲಾ ಮಕ್ಕಳಲ್ಲಿ ಕೆಂಗಣ್ಣಿನ ಸಮಸ್ಯೆ; ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೆಂಗಣ್ಣಿನ ಸಮಸ್ಯೆ ಉತ್ತುಂಗದಲ್ಲಿದ್ದು, ಶೇ 40 ರಷ್ಟು ಶಾಲಾ ಮಕ್ಕಳಲ್ಲಿ ಕೆಂಗಣ್ಣಿನ ಸಮಸ್ಯೆಯ ಬಗ್ಗೆ ವರದಿಯಾಗಿದೆ. ಈ ಬಗ್ಗೆ ದ.ಕ ಜಿಲ್ಲೆಯ ಆಯೋಗ್ಯ ಇಲಾಖೆಯು ಜ್ಞಾಪನಾ ಪತ್ರವನ್ನು ಹೊರಡಿಸಿದ್ದು, ಕಾಯಿಲೆಗೆ ಒಳಗಾದ ಮಕ್ಕಳನ್ನು ಐದು ದಿನಗಳವರೆಗೆ ಶಾಲೆಗೆ ಕಳುಹಿಸದಂತೆ ಸೂಚನೆ ನೀಡಿದೆ. ಕೆಂಗಣ್ಣು ಒಬ್ಬರಿಂದ ಮತ್ತೊಬ್ಬರಿಗೆ ಶೀಘ್ರವಾಗಿ ಹರಡುವ ರೋಗವಾಗಿದ್ದು, ಸಾಮಾನ್ಯವಾಗಿ 3 ರಿಂದ 5 ದಿನಗಳಲ್ಲಿ ಗುಣಮುಖವಾಗುತ್ತದೆ. ಮಕ್ಕಳ ಪೋಷಕರು ಕೆಂಗಣ್ಣಿನ ಸಮಸ್ಯೆ ಬಗ್ಗೆ ಶಾಲೆಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. […]