ಶಿರ್ವ: ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆ ರಕ್ಷಣೆ

ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಪಾಡಿ ಪದವು ಬಳಿಯ ಅಶ್ವತ್ಥಕಟ್ಟೆ ಸಮೀಪ ಶಿರ್ವ-ಪಳ್ಳಿ ಮುಖ್ಯರಸ್ತೆಯ ಕಾಡಿನಲ್ಲಿ ತಂತಿ ಬೇಲಿಗೆ ಚಿರತೆಯೊಂದು ಸಿಲುಕಿ ಒದ್ದಾಡುತ್ತಿದ್ದು, ಇದನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದು ಇಲಾಖೆಯ ಅಧಿಕಾರಿಗಳ ತಂಡವು ಬುಧವಾರದಂದು ಚಿರತೆಯನ್ನು ರಕ್ಷಿಸಿದೆ. ತಂಡದಲ್ಲಿ ಪಡುಬಿದ್ರೆ ಉಪ ವಲಯಾರಣ್ಯಾಧಿಕಾರಿ ಗುರುರಾಜ್ ಕೆ., ಅರಣ್ಯ ರಕ್ಷಕ ಚರಣ್‌ರಾಜ್ ಜೋಗಿ, ಮಂಜುನಾಥ್ ನಾಯಕ್, ಕೇಶವ ಪೂಜಾರಿ, ವಾಹನ ಚಾಲಕ ಜೋಯ್ ಮುಂತಾದವರು ಇದ್ದರು. ಚಿರತೆಗೆ ಅರಿವಳಿಕೆ ಮದ್ದು ನೀಡಿ ರಕ್ಷಿಸಲಾಯಿತು.

ಶಾಲಾ ಕ್ರೀಡೋತ್ಸವದಲ್ಲಿ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್ ಪ್ರಕರಣ: ಪ್ರತಿಭಟನೆ ನಡೆಸಿದ ಹಿಂಜಾವೇ

ಕುಂದಾಪುರ: ಇಲ್ಲಿನ ಶಂಕರನಾರಾಯಣದಲ್ಲಿ ಮದರ್ ಥೆರೆಸಾ ಸಂಸ್ಥೆಯ ಶಾಲಾ ಕ್ರೀಡೋತ್ಸವ ಸಂದರ್ಭದಲ್ಲಿ ಸ್ವಾಗತ ನೃತ್ಯಕ್ಕೆ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್ ಮಾಡಿಸಿದ ಪ್ರಕರಣ ಸಾಮಾಜಿಕ ಸಾಮಾಜಿಕ ಜಾಲತಾಣಗಳ ಮೂಲಕ ಬೆಳೆಕಿಗೆ ಬಂದ ಬಳಿಕ, ಸಾರ್ವಜನಿಕರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಹಿಂದೂ ಜಾಗರಣ ವೇದಿಕೆಯು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬುಧವಾರದಂದು ಪ್ರತಿಭಟನೆ ನಡೆಸಿದೆ.

ನಿದ್ರಾಹೀನತೆ ನಿಮ್ಮನ್ನು ಬಾಧಿಸುತ್ತಿದೆಯೆ? ಇಲ್ಲಿವೆ ಸುಖ ನಿದ್ದೆಗೆ ಜಾರಲು ಸುಲಭ ಸೂತ್ರಗಳು

ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆಯು ವಯೋಭೇದವಿಲ್ಲದೆ ಎಲ್ಲರನ್ನೂ ಕಾಡುತ್ತಿದೆ. ತಂತ್ರಜ್ಞಾನದ ಅತಿಯಾದ ಬಳಕೆ, ಒತ್ತಡ ಭರಿತ ಜೀವನ, ಕುಡಿತ ಮತ್ತಿತರ ದುರಾಭ್ಯಾಸಗಳಿಂದಾಗಿ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದು ಮನಸ್ಸು ಮತ್ತು ದೇಹದ ಆರೋಗ್ಯವನ್ನು ಕೆಡಿಸಿಕೊಳ್ಳುವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಆರೋಗ್ಯವಂತ ದೇಹಕ್ಕೆ ಪೋಷಕಾಂಶಯುಕ್ತ ಆಹಾರ ಎಷ್ಟು ಮುಖ್ಯವೋ ಆರೋಗ್ಯವಂತ ಮನಸ್ಸಿಗೆ ಗಡದ್ದಾದ ನಿದ್ದೆಯೂ ಅಷ್ಟೇ ಮುಖ್ಯ ಎನ್ನುವುದನ್ನು ಆಯುರ್ವೇದ ಕೂಡಾ ಹೇಳುತ್ತದೆ. ಸುಲಭವಾಗಿ ನಿದ್ದೆಗೆ ಜಾರಲು ಮಂತ್ರದಂಡದ ಪರಿಹಾರೋಪಾಯಗಳು ಇಲ್ಲದಿದ್ದರೂ, ದೈನಂದಿನ ದಿನಚರಿಯನ್ನು ಶಿಸ್ತುಬದ್ದವಾಗಿಸಿಕೊಳ್ಳುವ ಮೂಲಕ ನೆಮ್ಮದಿಯ ನಿದ್ದೆಯನ್ನು […]

ರಾಜ್ ಬಿ ಶೆಟ್ಟಿ ನಿರ್ದೇಶನದ ಮೂರನೇ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯೆ: 18 ದಿನಗಳಲ್ಲಿ ಚಿತ್ರೀಕರಣ ಪೂರ್ಣ

ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದಂತಹ ಚಿತ್ರಗಳನ್ನು ತೆರೆಗೆ ತಂದ ರಾಜ್ ಬಿ ಶೆಟ್ಟಿ ತಮ್ಮ ನಿರ್ದೇಶನದ ಮೂರನೇ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಶೂಟಿಂಗ್ ಪೂರ್ಣಗೊಂಡಿರುವ ಬಗ್ಗೆ ಅಧಿಕೃತ ಪೋಸ್ಟ್ ಅನ್ನು ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಪೋಸ್ಟ್ ಮಾಡಿದೆ. ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಇದಾಗಿದೆ. ಲೈಟರ್ ಬುದ್ದ ಫಿಲ್ಮ್ಸ್ ಸಹಯೋಗ ನೀಡಿದೆ. ಸ್ವಾತಿ ಮುತ್ತಿನ ಮಳೆ ಹನಿ ರಮ್ಯಾ ಅವರ ಪುನರಾಗಮನದ […]

ನಗರ ಕೇಂದ್ರ ಗ್ರಂಥಾಲಯದಲ್ಲಿ ಡಿಜಿಟಲ್ ಗ್ರಂಥಾಲಯ ಕಾರ್ಯಾಗಾರ

ಉಡುಪಿ: ಜ್ಞಾನವೃದ್ಧಿಗಾಗಿ ಗ್ರಂಥಾಲಯ ಅಗತ್ಯವಾಗಿದ್ದು, ದೇಶಕ್ಕೆ ಮಾದರಿಯಾಗಿರುವ ಉಡುಪಿ ಗ್ರಂಥಾಲಯದ ಸೌಲಭ್ಯವನ್ನು ಉಡುಪಿಯ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ದುಬಾರಿ ಶುಲ್ಕ ನೀಡಿ, ದೂರದ ಊರುಗಳಲ್ಲಿ ಐಎಎಸ್, ಕೆಎಎಸ್ ಪಡೆಯುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ನೆಲೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಇಲ್ಲಿಗೆ ಕರೆಸಿ ಕೋಚಿಂಗ್ ಶಿಬಿರಗಳನ್ನು ಆಯೋಜಿಸಬೇಕು ಎಂದು ಗ್ರಂಥಾಲಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ. ರಘುಪತಿ ಭಟ್ ಸೂಚಿಸಿದರು. ಅವರು ಬುಧವಾರ ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ […]