ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಬೊಮ್ಮನಪಾದೆ ನಿವಾಸಿ ಪ್ರಸನ್ನ (43) ಎಂಬ ವ್ಯಕ್ತಿಯು 2021 ಅಕ್ಟೋಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.  

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ರಮಾನಾಥ ನಾಯಕ್ (57) ಎಂಬ ವ್ಯಕ್ತಿಯು 2021 ಮಾರ್ಚ್ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 10 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಳೆ ಅಮೆಜಾನ್ ಪ್ರೈಮ್ ವೀಡಿಯೋನಲ್ಲಿ ಕಾಂತಾರ ಬಿಡುಗಡೆ

ಜಗತ್ತಿನಾದ್ಯಂತ ಸದ್ದು ಮಾಡಿ ಗಲ್ಲಾ ಪೆಟ್ಟಿಗೆಯನ್ನು ಕೊಳ್ಳೆ ಹೊಡೆದ ಕಾಂತಾರ ಚಿತ್ರ ಅಮೆಜಾನ್ ಪ್ರೈಮ್ ವೀಡಿಯೋ ನಲ್ಲಿ ನಾಳೆ ಬಿಡುಗಡೆ ಹೊಂದುತ್ತಿದೆ. ಚಿತ್ರದ ಹಕ್ಕನ್ನು ಪಡೆಯಲು ಅಮೆಜಾನ್ ಪ್ರೈಮ್ ಎಷ್ಟು ಬೆಲೆ ತೆತ್ತಿದೆ ಎನ್ನುವುದು ಇನ್ನೂ ಬಹಿರಂಗವಾಗಿಲ್ಲ. ಇನ್ನು ಎಲ್ಲಿ ಯಾವಾಗ ಬೇಕಿದ್ದರೂ ಕಾಂತಾರ ಚಲನಚಿತ್ರವನ್ನು ಕುಳಿತಲ್ಲಿಂದಲೇ ನೋಡಬಹುದು.

ಬೆಳ್ತಂಗಡಿ: ವಿಷಪೂರಿತ ಅಣಬೆ ಸೇವನೆಗೆ ಬಲಿಯಾಯ್ತು ಅಪ್ಪ-ಮಗನ ಜೀವ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ವಿಷಪೂರಿತ ಅಣಬೆ ಸೇವಿಸಿದ್ದರಿಂದ ಅಪ್ಪ ಮಗ ಮೃತಪಟ್ಟ ಘಟನೆ ಮಂಗಳವಾರದಂದು ನಡೆದಿದೆ. ಧರ್ಮಸ್ಥಳಕ್ಕೆ ಸಮೀಪದ ಪುದುವೆಟ್ಟು ಗ್ರಾಮದ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(80) ಮತ್ತು ಅವರ ಪುತ್ರ ಓಡಿಯಪ್ಪ(41) ಮೃತಪಟ್ಟವರು. ಅಡುಗೆಗೆಂದು ಮಾಡಿದ್ದ ಅಣಬೆ ಪದಾರ್ಥ ವಿಷವಾಗಿ ಪರಿಣಮಿಸಿ ಈ ಸಾವು ಸಂಭವಿಸಿರಬಹದು ಎಂದು ಮೃತರ ಮನೆಯವರು ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ವಯೋವೃದ್ಧ ಗುರುವ ಹಾಗೂ ಅವರ ಇಬ್ಬರು ಪುತ್ರರಾದ ಕರ್ತ […]

ಕಾಂತಾರ ದೈವನರ್ತಕ ನವೀನ್ ಬೊಂದೆಲ್ ಗೆ ಸಲಾರ್ ಚಿತ್ರದಲ್ಲಿ ನಟಿಸುವ ಅವಕಾಶ

ಕಾಂತಾರ ಸಿನಿಮಾದಲ್ಲಿ ದೈವನರ್ತಕನಾಗಿ ನಟಿಸಿದ್ದ ನವೀನ್ ಬೊಂದೆಲ್ ಅವರಿಗೆ ಸಲಾರ್ ಸಿನಿಮಾದಲ್ಲಿ ನಟಿಸಲು ಅವಕಾಶ ದೊರಕಿದೆ ಎಂದು ವರದಿಯಾಗಿದೆ. ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಟನೆಯ ಹೊಂಬಾಳೆ ಫಿಲಂಸ್ ನ ಸಲಾರ್ ಚಿತ್ರದ ಒಂದು ಪಾತ್ರದಲ್ಲಿ ನಟಿಸಲು ನವೀನ್ ಅವರಿಗೆ ಅವಕಾಶ ದೊರೆತಿದೆ. ನವೀನ್ ಬೊಂದೆಲ್ ಒಬ್ಬ ನಟ ಮತ್ತು ನಿರ್ದೇಶಕ. ಕಾಂತಾರ ಚಿತ್ರದಲ್ಲಿ ಕಾಣಿಸಿಳ್ಳುವುದಕ್ಕೂ ಮುನ್ನ ಅವರು ಹಲವಾರು ನಾಟಕಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರು ಬಸ್ ಕಂಡಕ್ಟರ್ ಆಗಿಯೂ ಕೆಲಸ ಮಾಡಿದ್ದಾರೆ. ಮಂಗಳೂರಿನ ಕೆನರಾ ಹೈಸ್ಕೂಲ್ ಮತ್ತು […]