ಡಿ. 14 ರಂದು ನಮ್ಮ ಕ್ಲಿನಿಕ್ ಗಳ ಉದ್ಘಾಟನೆ

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರ ಪ್ರದೇಶದ ಸಮುದಾಯಕ್ಕೆ ಹಾಗೂ ವಲಸಿಗರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಉಡುಪಿ ತಾಲೂಕಿನ ಬೀಡನಗುಡ್ಡೆ, ನಿಟ್ಟೂರು ಹಾಗೂ ಕಕ್ಕುಂಜೆಯಲ್ಲಿ, ಕುಂದಾಪುರ ತಾಲೂಕಿನ ಖಾರ್ವಿಕೇರಿ ಹಾಗೂ ಟಿ.ಟಿ ರೋಡ್ ಮತ್ತು ಕಾರ್ಕಳ ತಾಲೂಕಿನಲ್ಲಿ ಮರೀನಾಪುರ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ನಮ್ಮ ಕ್ಲಿನಿಕ್‌ಗಳ ಉದ್ಘಾಟನೆಯು ಡಿಸೆಂಬರ್ 14 ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸರ್ಕಾರಿ ಇಲಾಖೆಗಳಲ್ಲಿ ಕೃಷಿಕರ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆ ನೀಡಿ: ವಿ ಸುನೀಲ್ ಕುಮಾರ್

ಉಡುಪಿ: ದೇಶದ ಬೆನ್ನುಲುಬಾದ ರೈತರು ಇತ್ತೀಚಿನ ದಿನಗಳಲ್ಲಿ ಅನೇಕ ಸಮಸ್ಯೆಗಳಿಂದ ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರುತ್ತಿಲ್ಲ ಕೃಷಿಕರ ಆದಾಯವನ್ನು ದ್ವಿಗುಣಗೊಳಿಸಲು ಸರ್ಕಾರವು ಪ್ರಯತ್ನಿಸುತ್ತಿದೆ. ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಯಾಂತ್ರೀಕರಣ ಹಾಗೂ ಆಧುನಿಕತೆಯನ್ನು ಬೆಳಸಿಕೊಂಡಲ್ಲಿ ಹೆಚ್ಚಿನ ಲಾಭ ಪಡೆಯಲು ಸಾಧ್ಯ. ಸರ್ಕಾರಿ ಇಲಾಖೆಗಳಲ್ಲಿ ರೈತರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸೂಚನೆ ನೀಡಿದರು. ಅವರು ಸೋಮವಾರದಂದು ರಜತಾದ್ರಿಯ ಜಿಲ್ಲಾ […]

ಉಚ್ಚಿಲ: ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮುಳುಗಡೆ; ಆರು ಲಕ್ಷ ರೂ ಗೂ ಅಧಿಕ ನಷ್ಟ

ಪಡುಬಿದ್ರೆ: ಇಲ್ಲಿಗೆ ಸಮೀಪದ ಉಚ್ಚಿಲದಲ್ಲಿ ಮೀನುಗಾರಿಕೆಗೆಂದು ತೆರಳಿದ್ದ ದೋಣಿಯೊಂದು ಪ್ರಕ್ಷುಬ್ದ ಸಮುದ್ರದ ಅಲೆಗಳಿಗೆ ಸಿಲುಕಿ ಮುಳುಗಡೆಯಾಗಿರುವ ಘಟನೆ ಸೋಮವಾರದಂದು ನಡೆದಿದೆ. ಉಚ್ಚಿಲ ನಿವಾಸಿ ವಿಮಲಾ ಸಿ ಪುತ್ರನ್ ರವರಿಗೆ ಸೇರಿದ ಶ್ರೀ ಗಿರಿಜಾ ಎನ್ನುವ ದೋಣಿಯಲ್ಲಿ ಮೀನುಗಾರರು ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕಡಲು ಪ್ರಕ್ಷುಬ್ದಗೊಂಡು ದೋಣಿ ಮಗುಚಿ ಬಿದ್ದಿದೆ. ಇದನ್ನು ಕಂಡ ಅಲ್ಲೇ ಸಮೀಪದಲ್ಲಿದ್ದ ಮೀನುಗಾರರು ದೋಣಿಯಲ್ಲಿದ್ದ ಮೀನುಗಾರರ ನೆರವಿಗೆ ಧಾವಿಸಿ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ದೋಣಿ ಮುಳುಗಡೆಯಾದ್ದರಿಂದ ದೋಣಿಯಲ್ಲಿದ್ದ ಬಲೆ […]

ಕೋಟ ಸಹಕಾರಿ ವ್ಯಾವಸಾಯಿಕ ಸಂಘದ ನೂತನ ಸಭಾಭವನ, ಗೋದಾಮು ಹಾಗೂ ಸೇವಾ ಕೇಂದ್ರ ಉದ್ಘಾಟನೆ

ಕುಂದಾಪುರ: ಭಾನುವಾರದಂದು ಕೋಟ ಸಹಕಾರಿ ವ್ಯಾವಸಾಯಿಕ ಸಂಘದ ಪ್ರಧಾನ ಕಚೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಬಿ.ಸಿ. ಹೊಳ್ಳ ಸ್ಮಾರಕ ಸಭಾಭವನ, ಗೋದಾಮು ಮತ್ತು ಸೇವಾ ಕೇಂದ್ರದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರು ನೆರವೇರಿಸಿ ಮಾತನಾಡಿ, ಕೋಟ ಸಿಎ ಬ್ಯಾಂಕ್ ರೈತರು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಶಕ್ತಿ ತುಂಬಿದ ಸಂಸ್ಥೆಯಾಗಿದೆ. ಪ್ರಸ್ತುತ ತಿಮ್ಮ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿ ಮುನ್ನಡೆಯುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಿ‌. ತಿಮ್ಮ ಪೂಜಾರಿ ವಹಿಸಿದ್ದರು. […]

ಮೊದಲನೆ ಮಗುವಿನ ಆಗಮನದ ನಿರೀಕ್ಷೆಯಲ್ಲಿ ನಟ ರಾಮ್ ಚರಣ್: ಸಿಹಿ ಸುದ್ದಿ ಹಂಚಿಕೊಂಡ ಅಪ್ಪ ಚಿರಂಜೀವಿ

ನಟ ಚಿರಂಜೀವಿ ತಮ್ಮ ಮಗ, ನಟ ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ಕೊನಿಡೇಲಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಘೋಷಿಸಿದ್ದಾರೆ. ಸೋಮವಾರ ಟ್ವಿಟರ್‌ನಲ್ಲಿ ಚಿರಂಜೀವಿ ಅವರು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. “ಶ್ರೀ ಹನುಮಾನ್ ಜಿ ಅವರ ಆಶೀರ್ವಾದದೊಂದಿಗೆ ಉಪಾಸನಾ ಮತ್ತು ರಾಮ್ ಚರಣ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ಪ್ರೀತಿ ಮತ್ತು ಕೃತಜ್ಞತೆಗಳೊಂದಿಗೆ ಸುರೇಖಾ ಮತ್ತು ಚಿರಂಜೀವಿ ಕೊನಿಡೇಲ ಶೋಬನಾ ಮತ್ತು ಅನಿಲ್ ಕಾಮಿನೇನಿ” ಎಂದು ಪೋಸ್ಟ್ […]